Katapady: ನೀರು ತುಂಬಿದ ಹೊಂಡಗಳ ನಡುವೆ ರಸ್ತೆ ಹುಡುಕಿ ಕೊಡಿ!

ಕೋಟೆ ಗ್ರಾ.ಪಂ. ವ್ಯಾಪ್ತಿಯ ಕಜಕಡೆ ಪ್ರದೇಶದಲ್ಲಿ ರಸ್ತೆ ದುರವಸ್ಥೆ

Team Udayavani, Sep 15, 2024, 2:39 PM IST

Katapady: ನೀರು ತುಂಬಿದ ಹೊಂಡಗಳ ನಡುವೆ ರಸ್ತೆ ಹುಡುಕಿ ಕೊಡಿ!

ಕಟಪಾಡಿ: ಕೋಟೆ ಗ್ರಾ.ಪಂ. ವ್ಯಾಪ್ತಿಯ ಕೋಟೆ – ಕಜಕಡೆ ಭಾಗದಲ್ಲಿ ರಸ್ತೆಯು ಹೊಂಡ ಗುಂಡಿಯಿಂದ ಕೂಡಿದ್ದು ಸಂಚಾರ ದುಸ್ತರವಾಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಭಾಗದಲ್ಲಿ ಸಂಚರಿಸುವಾಗ ದ್ವಿಚಕ್ರ ವಾಹನ ಸವಾರರು ಸಹ ಸವಾರರನ್ನು ಇಳಿಸಿ ರಸ್ತೆಯನ್ನು ಹುಡುಕಿ ಮುಂದಕ್ಕೆ ಸಾಗಿ ಬಳಿಕ ಹತ್ತಿಸಿಕೊಂಡು ಹೋಗುವಂತಹ ಸನ್ನಿವೇಶವು ದಿನನಿತ್ಯದ ಪಾಡಾಗಿದೆ.

ಇನ್ನುಳಿದಂತೆ ಶಾಲಾ ವಾಹನಗಳು ಸಹಿತ ಇತರೇ ವಾಹನಗಳು ಸಂಚರಿಸುವಾಗ ಹೊಂಡ ಗುಂಡಿಯಲ್ಲಿ ಬಿದ್ದು ಎದ್ದು ಸಂಚರಿಸುವ ಅಪಾಯಕಾರಿ ಪರಿಸ್ಥಿತಿ ಕಂಡು ಬರುತ್ತಿದೆ. ಮಳೆ ಬಂದಾಗಲಂತೂ ನೀರು ತುಂಬಿದ ಹೊಂಡವು ಮತ್ತಷ್ಟು ಹೆಚ್ಚಿನ ಅಪಾಯವನ್ನು ಉಂಟು ಮಾಡುತ್ತಿದೆ.

ಈ ರಸ್ತೆಯ ಇಕ್ಕೆಲಗಳಲ್ಲಿ ಸಮರ್ಪಕ ಚರಂಡಿ ಇಲ್ಲದೇ ನೀರು ರಸ್ತೆಯ ಮೇಲೆಯೇ ಹರಿದು ಹಾಗೂ ಅಧಿಕ ಭಾರದ ಘನ ವಾಹನಗಳ ಅಧಿಕ ಸಂಚಾರದಿಂದ ಇಂತಹ ದುಸ್ಥಿತಿಗೆ ಈ ರಸ್ತೆಗೆ ಬಂದಿದೆ ಎಂದು ಸ್ಥಳೀಯರು ಅಸಹನೆಯನ್ನು ವ್ಯಕ್ತಪಡಿಸಿದ್ದಾರೆ. ಈ ಭಾಗದ ಸುಮಾರು 60ಕ್ಕೂ ಅಧಿಕ ಮನೆಗಳು ಹಾಗೂ ಶಾಲಾ ವಿದ್ಯಾರ್ಥಿಗಳು, ಉದ್ಯೋಗಿಗಳು, ವಾಹನ ಸವಾರರು ನಿತ್ಯ ಸಂಕಟವನ್ನು ಅನುಭವಿಸುವಂತೆ ಆಗಿದೆ ಎಂದು ಪರಿತಪಿಸುತ್ತಿದ್ದಾರೆ.

ಕೋಟೆ ಗ್ರಾ.ಪಂ. ಸಹಿತ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಈ ಕೂಡಲೇ ಹೆಚ್ಚಿನ ಅವಘಡಗಳು ಸಂಭವಿಸುವ ಮುನ್ನವೇ ಎಚ್ಚೆತ್ತು ಶಾಶ್ವತ ಪರಿಹಾರವನ್ನು ಒದಗಿಸಿ ರಸ್ತೆಯನ್ನು ಸುಸ್ಥಿತಿಗೆ ತಂದು ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.

ನಡೆದಾಡಲೂ ಸಂಕಷ್ಟ ಪಡುವಂತಾಗಿದೆ
ಘನ ವಾಹನಗಳು ಸಂಚರಿಸಿ ರಸ್ತೆಯು ಕಾಣೆಯಾಗಿ ಹೊಂಡ ಗುಂಡಿ ಮಾತ್ರ ಇದೆ. ಸ್ಥಳೀಯವಾಗಿ ಶಾಲೆಯ ಮಕ್ಕಳು, ಮಹಿಳೆಯರು, ಕೆಲಸಕ್ಕೆ ತೆರಳುವವರು ವಾಹನ ಸಂಚರಿಸುವಾಗ ಕೆಸರು ಎರಚುವ ಭೀತಿಯಿಂದ ರಸ್ತೆಯಲ್ಲಿ ನಡೆದಾಡಲೂ ಸಂಕಷ್ಟ ಪಡುವಂತಾಗಿದೆ. ಇನ್ನು ವಾಹನ ಸಂಚಾರವಂತೂ ಸರ್ಕಸ್‌ನಂತಾಗಿದೆ. ರಸ್ತೆಯ ಆರಂಭದ ಜಂಕ್ಷನ್‌ ಪ್ರದೇಶವೂ ಹೊಂಡ ಗುಂಡಿ, ಕೆಸರು ನೀರು ತುಂಬಿ ಅವ್ಯವಸ್ಥೆಯಿಂದ ಕೂಡಿದೆ. ಕೂಡಲೇ ಸ್ಥಳೀಯಾಡಳಿತ, ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆ ಅವ್ಯವಸ್ಥೆಗೆ ಶಾಶ್ವತ ಪರಿಹಾರ ಕಲ್ಪಿಸಲಿ. ಈ ಭಾಗದ ನಿವಾಸಿಗಳ ನಿತ್ಯ ಬವಣೆಗೆ ಮುಕ್ತಿ ಕಲ್ಪಿಸಲಿ. – ಉಮಾನಾಥ, ಸ್ಥಳೀಯರು, ರಿಕ್ಷಾ ಚಾಲಕ

ತಾತ್ಕಾಲಿಕ ದುರಸ್ತಿ ಕಾರ್ಯ
ಕೋಟೆ ಸಂಪರ್ಕ ರಸ್ತೆಯ ಆರಂಭದ ಭಾಗದಲ್ಲಿ ತಾತ್ಕಾಲಿಕ ದುರಸ್ತಿ ನಡೆಸಲಾಗುತ್ತದೆ. ಇನ್ನುಳಿದಂತೆ ಕಜಕಡೆ ಭಾಗದಲ್ಲಿ ಉದ್ಯಮಿಗಳ ಅಧಿಕ ಭಾರದ ವಾಹನಗಳ ಓಡಾಟದಿಂದ ರಸ್ತೆಯು ಹಾಳಾಗಿದೆ. ಸೂಕ್ತ ರೀತಿಯಲ್ಲಿ ಅನುದಾನದ ಹೊಂದಾಣಿಕೆ ಮಾಡಿಕೊಂಡು ಆಡಳಿತ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ರಸ್ತೆ ಅಭಿವೃದ್ಧಿ ನಡೆಸುವಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. – ಪ್ರಮೀಳ ಜತ್ತನ್ನ,
ಅಧ್ಯಕ್ಷರು, ಕೋಟೆ ಗ್ರಾ.ಪಂ.

ರಸ್ತೆ ಆರಂಭದಲ್ಲಿ ಹೊಂಡಗುಂಡಿಗಳಿಂದ ಸ್ವಾಗತ
ಕೋಟೆ ಸಂಪರ್ಕದ ಈ ರಸ್ತೆಯು ಆರಂಭದಲ್ಲಿ ಬೃಹತ್‌ ಗಾತ್ರದ ಹೊಂಡ ಗುಂಡಿಗಳನ್ನು ಹೊಂದಿದ್ದು, ಬಳಿಕ ಸುಸಜ್ಜಿತ ಕಾಂಕ್ರೀಟ್‌ ರಸ್ತೆಯನ್ನು ಹೊಂದಿದೆ. ಅಭಿವೃದ್ಧಿಗೊಂಡ ಕಾಂಕ್ರೀಟ್‌ ರಸ್ತೆಯ ಮುಕ್ತಾಯದ ಬಳಿಕ ಮುಂದುವರೆದ ಈ ರಸ್ತೆಯಲ್ಲಿ ಇಂತಹ ಹೊಂಡ ಗುಂಡಿಯಿಂದ ಕೂಡಿದ್ದು, ಸುಗಮ ಸಂಚಾರಕ್ಕೆ ತೊಡಕುಂಟು ಮಾಡುತ್ತಿದೆ.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

POLICE-5

Udupi: ಮದ್ಯದ ನಶೆಯಲ್ಲಿ ವ್ಯಕ್ತಿ; ಅಸಹಾಯಕ ಮಗುವಿನ ರಕ್ಷಣೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 4ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 4ನೇ ರೀಲ್ಸ್ ಪ್ರಸಾರ

Malpe: ಕೊಡವೂರು ಹಿರಣ್ಯಧಾಮ ಲೇಔಟ್‌; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ

Malpe: ಕೊಡವೂರು ಹಿರಣ್ಯಧಾಮ ಲೇಔಟ್‌; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.