Katapady: ಗೊಂಬೆ ಹೇಳುತೈತೆ, ಮತ್ತೆ ಹೇಳುಥೈ ಥೈ.. ಆರಾಧಿಸೋ, ಆಸ್ವಾದಿಸೋ ಪುರಾಣ,ಪ್ರಕೃತಿಯೇ

ಉದ್ಯಾವರದಲ್ಲಿ ದಸರಾ ಗೊಂಬೆ ಆರಾಧನೆಯ ಮೆರುಗು

Team Udayavani, Oct 10, 2024, 4:06 PM IST

10-katapady

ಕಟಪಾಡಿ: ನವರಾತ್ರಿಯ ಪುಣ್ಯ ಪರ್ವಕಾಲದಲ್ಲಿ ಪುರಾಣ ಕಥೆಗಳನ್ನು ಕಣ್ಣೆದುರು ದೃಶ್ಯಗಳಲ್ಲಿ ಬಿಂಬಿಸುವ ಹಾಗೂ ಪ್ರಕೃತಿ ಆರಾಧನೆಯ ದ್ಯೋತಕವಾಗಿ ಚಿತ್ತಾಕರ್ಷಕ ಗೊಂಬೆಯನ್ನು ಕೂರಿಸಿ ಆರಾಧಿಸುವ ವಿಶೇಷವಾದ ನವರಾತ್ರಿ ದಸರಾ ಆರಾಧನ ಪದ್ಧತಿಯು ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಕಾಣಸಿಗುತ್ತಿದೆ.

ನವರಾತ್ರಿಯಲ್ಲಿ ಎಲ್ಲೆಡೆ ಶಕ್ತಿ ಆರಾಧನೆಯು ನಡೆಯುತ್ತಿದ್ದರೂ, ಇಲ್ಲಿನ ಗೊಂಬೆ ಮನೆ ಎಂದೇ ಪ್ರಸಿದ್ಧಿ ಪಡೆದಿರುವ ಉದ್ಯಾವರ ಸಂಪಿಗೆನಗರ ಯು. ವಾಸುದೇವ ಭಟ್‌, ಸೀತಾ ಭಟ್‌ ದಂಪತಿ ಮನೆಯಲ್ಲಿ ಮೂರು ಪೀಳಿಗೆಯ ಮಂದಿ ಸೇರಿ ಗೊಂಬೆ ಆರಾಧನೆಯನ್ನು ನಡೆಸುತ್ತಿದ್ದಾರೆ.

ಬೊಂಬೆ ಹೇಳುತೈತೆ ಮತ್ತೆ ಹೇಳುಥೈ ಥೈ …. ಆರಾಧಿಸೋ, ಆಸ್ವಾದಿಸೋ ಪುರಾಣ, ಪ್ರಕೃತಿಯೇ ಎಂಬಂತೆ ಇಲ್ಲಿನ ಗೊಂಬೆಗಳು ಶ್ರೀ ಕೃಷ್ಣನ ಬಾಲ್ಯ ಲೀಲೋತ್ಸವದ ಕಥಾನಕದೊಂದಿಗೆ ಮೆರುಗನ್ನು ಪಡೆದುಕೊಂಡಿದ್ದು, ಶ್ರೀ ರಾಮ ಪಟ್ಟಾಭಿಷೇಕ, ವಿಶ್ವರೂಪ ದರ್ಶನ, ದ್ರೌಪದಿ ವಸ್ತ್ರಾಪಹರಣ, ಉರಿಯುವ ಅರಗಿನ ಅರಮನೆಯಿಂದ ಒಡಹುಟ್ಟಿದವರನ್ನು ಎತ್ತಿ ಕರೆದೊಯ್ಯುವ ಭೀಮಸೇನ, ಶರಶಯ್ಯೆಯಲ್ಲಿನ ಭೀಷ್ಮಾಚಾರ್ಯರು, ಕಂಸವಧೆ, ಗಜೇಂದ್ರ ಮೋಕ್ಷ, ಬಕಾಸುರನ ಊಟ, ಕಾರಾಗೃಹದಲ್ಲಿ ಶ್ರೀ ಕೃಷ್ಣನ ಜನನ, ಕಂದ ಕೃಷ್ಣನನ್ನು ಬುಟ್ಟಿಯಲ್ಲಿರಿಸಿ ಯಮುನಾ ನದಿ ದಾಟಿಸುವ ತಂದೆ ವಸುದೇವ, ಮೊಲೆ ಹಾಲು ಕುಡಿದು ಪೂತನಿ ಸಂಹಾರ, ಬೆಣ್ಣೆ ಕದಿಯುವ ಕೃಷ್ಣ, ಯಶೋಧೆ ಕಟ್ಟಿ ಹಾಕಿರುವುದು, ವಿಶ್ವರೂಪ ದರ್ಶನ, ಕಾಲಿಯಾ (ರಾಕ್ಷಸ) ಸಂಹಾರ, ಗೋವರ್ಧನ ಗಿರಿಧಾರಿ ಕೃಷ್ಣ, ಕಂಸ ವಧೆ, ರಾಧಾ ಕೃಷ್ಣರೊಂದಿಗಿನ ವೃಂದಾವನ, ಸಮುದ್ರ ಮಥನ, ರಾವಣ ದರ್ಬಾರ್‌, ರಾವಣ ಸಂಹಾರ, ದಶಾವತಾರ, ಅಷ್ಟ ಲಕ್ಷ್ಮಿಯರು, ಕಾಡು ಮನುಷ್ಯರ ಹುಲಿ ಬೇಟೆ, ರೈತರ ಎತ್ತಿನ ಬಂಡಿ, ಶಬರಿಮಲೈ, ಪಳನಿ, ತಿರುಪತಿ ವೆಂಕರಮಣ, ಪುರಿ ಜಗನ್ನಾಥ, ಪಂಡರಾಪುರ ಹಾಗೂ ಪ್ರಸ್ತುತ ಅಯೋಧ್ಯೆಯ ಶ್ರೀರಾಮ ಪ್ರಮುಖ ಆಕರ್ಷಣಾ ಕೇಂದ್ರವಾಗಿ ಗಮನ ಸೆಳೆಯುತ್ತಿದೆ.

ಇದರೊಂದಿಗೆ ಟ್ವಿನ್‌ ಟವರ್‌, ವಿದೇಶಿ ನೃತ್ಯಧಾರಿಗಳು ಸಹಿತ ಕೌಲಾಲಂಪುರ, ದುಬೈ, ಮಲೇಷ್ಯಾ, ರಷ್ಯಾ ಸಹಿತ ವಿದೇಶದಲ್ಲಿಯೂ ಖರೀದಿಸಿ ಗೊಂಬೆಗಳು ಆಕರ್ಷಿಸುತ್ತಿದೆ. ಹಳೆ ಭಾರತದಲ್ಲಿ ಮೈಸೂರು, ಕೇರಳ, ತಮಿಳ್ನಾಡು, ಆಂಧ್ರ ರಾಜ್ಯಗಳಲ್ಲಿ ಕಂಡು ಬರುವ ಗೊಂಬೆ ಆರಾಧನೆಯು ಉಡುಪಿ ಉದ್ಯಾವರದಲ್ಲಿ 52 ರ ಸಂಭ್ರಮ ಕಾಣುತ್ತಿರುವುದು ವಿಶೇಷ ಆಕರ್ಷಣೆಯೂ ಆಗಿದೆ.

ಸಾವಿರಕ್ಕೂ ಅಧಿಕ ಗೊಂಬೆಗಳು ಇಲ್ಲಿ ಜತೆಗಿರಿಸಿ ಆರಾಧಿಸುತ್ತಿದ್ದು, ನವರಾತ್ರಿಯ ಆರಂಭದಲ್ಲಿ ಕಲಶವನ್ನು ಏರಿಸಿ ದುರ್ಗೆಯ ಬೊಂಬೆಯನ್ನು ಇರಿಸಿ ಪೂಜಿಸಿ ಸಂಜೆ ಮಹಿಳೆಯರು ಜೊತೆ ಸೇರಿ ಸಂಗೀತ ಭಜನೆಯೊಂದಿಗೆ ಆರತಿ ಬೆಳಗಿಸುವುದು ಪೂಜಾ ಸಂಪ್ರದಾಯವಾಗಿದೆ. ಇನ್ನು 400ರಷ್ಟು ಶಾಲೆ ವಿದ್ಯಾರ್ಥಿಗಳ ದಂಡು, ಬ್ರಾಹ್ಮಣ ಪರಿಷತ್‌ನ 150 ಜನರು ಸಹಿತ ಸುಮಾರು 1500ಕ್ಕೂ ಅಧಿಕ ಮಂದಿ ವೀಕ್ಷಣೆಗಾಗಿಯೇ ಬರುವುದರ ಜೊತೆಗೆ ಭಕ್ತಿ ಭಾವನೆಯನ್ನು ಪ್ರಕಟಿಸುವುದು ಕಂಡು ಬರುತ್ತಿದೆ.

ಗೇರು ಹಣ್ಣು ಕೂಡ ಸಂಗ್ರಹದಲ್ಲಿದ್ದು ಮರ‌, ಮಣ್ಣು, ಪಿಂಗಾಣಿಗಳಿಂದ ಸಿದ್ಧಪಡಿಸಿದ ಗೊಂಬೆಗಳು ಇಲ್ಲಿ ಆರಾಧಿಸಲ್ಪಡುತ್ತಿದ್ದು, ಪೂಜಿಸಲ್ಪಟ್ಟ ದುರ್ಗೆಯ ಗೊಂಬೆಯನ್ನು ಅಡ್ಡಲಾಗಿ ಮಲಗಿಸಿ ವಿಸರ್ಜನೆಯ ಕ್ರಮವನ್ನು ಅನುಸರಿಸಿ ಈ ಬಾರಿಯ ದಸರಾ ಗೊಂಬೆಯ ಆರಾಧನೆಯು ಸಂಪನ್ನಗೊಳ್ಳಲಿದೆ.

ನವರಾತ್ರಿಯ ಸಂದರ್ಭ ಎಲ್ಲರೂ ಬ್ಯುಸಿ ಇರುವುದರಿಂದ 15 ದಿನಗಳ ಕಾಲ ಈ ಗೊಂಬೆಯ ಪೂಜೆಯನ್ನು ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ವೀಕ್ಷಣೆಗೆ ಬರುತ್ತಿದ್ದಾರೆ ಎಂದು ಮನೆ ಮಂದಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ.

ನನ್ನ ತಂದೆ, ತಾಯಿ ಜತೆಯಾಗಿ ಹೈದರಾಬಾದ್‌ನಲ್ಲಿ 1973ರಲ್ಲಿ ಆರಂಭಿಸಿದ್ದ  ಈ ಗೊಂಬೆ ಆರಾಧನೆಯ ಪದ್ಧತಿಯು ಇದೀಗ 52 ವರ್ಷಕ್ಕೆ ಕಾಲಿರಿಸಿದೆ. ಇದೀಗ ನನ್ನ ಜತೆ ಪತ್ನಿ ಸೀತಾ ಭಟ್‌, ಪುತ್ರರಾದ ಮುರಲಿಕೃಷ್ಣ ಭಟ್‌, ಮುರಹರಿ ಕೃಷ್ಣ, ಸೊಸೆಯರಾದ ಪ್ರಸನ್ನಕುಮಾರಿ ಭಟ್‌, ಅಶ್ವಿ‌ನಿ ಭಟ್‌ ಮೊಮ್ಮಕ್ಕಳಾದ ಕೃಪಾ ಭಟ್‌, ಚರಿತ್‌ ಹೆಚ್ಚು ಮುತುವರ್ಜಿ ವಹಿಸುತ್ತಿದ್ದಾರೆ. ಹಾಗಾಗಿ ಗೊಂಬೆ ಆರಾಧನೆ ಪದ್ಧತಿಯನ್ನು ನಮ್ಮ ನಾಲ್ಕನೇ ಪೀಳಿಗೆಗೆ ಮುಂದುವರೆಯುತ್ತಿರುವುದು ಸಂತಸ. –ಯು. ವಾಸುದೇವ ಭಟ್‌, ನಿವೃತ್ತ ಸಿಂಡಿಕೇಟ್‌ ಬ್ಯಾಂಕ್‌ ಮ್ಯಾನೇಜರ್‌.

-ವಿಜಯ ಆಚಾರ್ಯ ಉಚ್ಚಿಲ

 

ಟಾಪ್ ನ್ಯೂಸ್

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

001

Mysore Dasara: ಕಾಣ ಬನ್ನಿ … ಬೆಳಕಿನರಮನೆ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

7(1)

Udupi: ಗೊಂಬೆ ಹೇಳುತೈತೆ.. ಕಥೆಯ ಹೇಳುತೈತೆ; ಉದ್ಯಾವರದ ಗೊಂಬೆ ಸಂಭ್ರಮಕ್ಕೆ 33 ವರ್ಷ!

Untitled-2

Udupi: ಹೊಟ್ಟೆ ನೋವಿನಿಂದ ಬಳಲಿ ಬಾಲಕಿ ಸಾವು

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.