Katapady: ಉದ್ಯಾವರ ಗ್ರಾ.ಪಂ. ಮಾಜಿ ಅಧ್ಯಕ್ಷೆ ಸರಳಾ ಎಸ್. ನಿಧನ
ತನ್ನ 75ನೇ ಹುಟ್ಟುಹಬ್ಬದ ದಿನದಂದೇ ಅಸುನೀಗಿದ ಮಾಜಿ ಅಧ್ಯಕ್ಷೆ
Team Udayavani, Oct 26, 2024, 1:59 PM IST
ಕಟಪಾಡಿ: ಉದ್ಯಾವರ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ಸರಳಾ ಎಸ್. (75) ಅವರು ಅನಾರೋಗ್ಯದಿಂದ ಬೋಳಾರಗುಡ್ಡೆಯ ಸ್ವಗೃಹದಲ್ಲಿ ಅ.26ರ ಶನಿವಾರ ನಿಧನ ಹೊಂದಿದರು.
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ತನ್ನ 75ನೇ ಹುಟ್ಟುಹಬ್ಬದ ದಿನದಂದೇ ಅಸುನೀಗಿದ್ದು, ಮನೆಯಲ್ಲಿ ದುಃಖದ ಛಾಯೆ ಮಡುಗಟ್ಟಿದೆ.
1995-98ರ ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಅಧ್ಯಕ್ಷೆಯಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿದ್ದು, ಸುಮಾರು 40 ವರ್ಷಗಳ ಕಾಲ ಉದ್ಯಾವರ ಗ್ರಾಮೀಣ ಕಾಂಗ್ರೆಸ್ನಲ್ಲಿದ್ದು, ಪಕ್ಷದ ಅನೇಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಮಾಡಿದ್ದರು. ಮಾಜಿ ಕರ್ನಾಟಕ ಮೀನುಗಾರಿಕಾ ನಿಗಮದ ಸದಸ್ಯೆಯಾಗಿದ್ದರು. ಸಾಮಾಜಿಕ ಕಾರ್ಯಕರ್ತೆಯಾಗಿದ್ದು, ಸಾಮಾಜಿಕ ಏಕತೆಯಲ್ಲಿ ನಂಬಿಕೆ ಇರಿಸಿ ತೊಡಗಿಸಿಕೊಂಡಿದ್ದರು.
ಮೃತರ ಅಂತಿಮ ದರ್ಶನ ಪಡೆದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಯುಎಫ್ಸಿ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಿತಿನ್ ಜೆ. ಸಾಲಿಯಾನ್, ಉತ್ತರ ವಲಯ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಉದ್ಯಾವರ ಗ್ರಾ.ಪಂ. ಸದಸ್ಯರು, ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ಸುಗಂಧಿಶೇಖರ್ ಸಹಿತ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDvsNZ: ಪುಣೆಯಲ್ಲಿ ಸ್ಪಿನ್ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು
Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ
Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!
Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!
Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.