Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

ಶ್ರೀ ಕ್ಷೇತ್ರ ಪೇಟೆಬೆಟ್ಟು: ಇಕ್ಕಟ್ಟಾದ ರಸ್ತೆಯ ಅಂಚು ಅಪಾಯಕಾರಿ

Team Udayavani, Nov 6, 2024, 3:46 PM IST

10

ಕಟಪಾಡಿ: ಮಟ್ಟು ಬೀಚ್‌ ಸಂಪರ್ಕದ ಕಟಪಾಡಿ-ಮಟ್ಟು ಮೀನು ಗಾರಿಕಾ ರಸ್ತೆಯು ಶ್ರೀ ಕ್ಷೇತ್ರ ಪೇಟೆಬೆಟ್ಟು ಮುಂಭಾಗದಲ್ಲಿನ ರಸ್ತೆಯೂ ಹಾಳಾಗಿದ್ದು, ರಸ್ತೆಯಂಚಿನಲ್ಲಿ ಅಪಾಯಕಾರಿ ಗುಂಡಿ ಯೊಂದು ಬಾಯ್ದೆರೆದು ನಿಂತಿದ್ದು ಹೆಚ್ಚಿನ ಅವಘಡ ಸಂಭವಿಸದಂತೆ ಹಾಗೂ ಅಪಾಯದ ಮುನ್ನೆಚ್ಚರಿಕೆಗಾಗಿ ಶ್ರೀ ಕ್ಷೇತ್ರ ಪೇಟೆಬೆಟ್ಟು ವತಿಯಿಂದ ಬ್ಯಾರಿಕೇಡ್‌ ಇರಿಸಿ ಪ್ಲಾಸ್ಟಿಕ್‌ ರಿಬ್ಬನ್‌ ಬಿಗಿದು ಮಾನವೀಯತೆ ಮೆರೆದಿದ್ದಾರೆ.

ಬಹಳಷ್ಟು ವಾಹನ ದಟ್ಟಣೆಯಿಂದ ಕೂಡಿದ ಈ ರಸ್ತೆಯ ಈ ಭಾಗದಲ್ಲಿ ತ್ರಿಶಾ ಕಾಲೇಜು, ಎಸ್‌ವಿಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳು, ಸಹಸ್ರಾರು ಭಕ್ತಾಧಿಗಳ ಧಾರ್ಮಿಕ ಶ್ರದ್ಧಾ ಕೇಂದ್ರವೂ ಇರುವುದರಿಂದ ಸಹಜವಾಗಿ ಸಂಚಾರ ಹಾಗೂ ವಾಹನಗಳ ದಟ್ಟಣೆಯು ಅಧಿಕವಾಗಿರುತ್ತದೆ.

ರಸ್ತೆಯ ಅಂಚಿನಲ್ಲಿಯೇ ಈ ಅಪಾಯಕಾರಿ ಗುಂಡಿಯು ಬಾಯ್ದೆರೆದಿದ್ದು, ವಾಹನಗಳು ಎದುರು ಬದುರಾದ ಸಂದರ್ಭದಲ್ಲಿ ಅಪಾಯವು ಕಟ್ಟಿಟ್ಟ ಬುತ್ತಿ.

ಅಂದಾಜು ತಪ್ಪಿದ 2-3 ಸೈಕಲ್‌ ಸವಾರ ವಿದ್ಯಾರ್ಥಿಗಳು, ದ್ವಿ ಚಕ್ರ ವಾಹನ ಸವಾರರು ಈಗಾಗಲೇ ಈ ಗುಂಡಿಗೆ ಬಿದ್ದು ಅಪಾಯದ ರುಚಿ ಕಂಡಿದ್ದಾರೆ.

ಈ ಬಗ್ಗೆ ಸಾರ್ವಜನಿಕರ, ನಿತ್ಯ ಸಂಚಾರಿಗಳ ಆತಂಕದ ಕುರಿತು ಉದಯವಾಣಿ ಸುದಿನ ನ.1 ರಂದು ವರದಿಯನ್ನು ಪ್ರಕಟಿಸಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಸಂಭಾವ್ಯ ಮಾರಣಾಂತಿಕ ಅಪಘಾತಗಳನ್ನು ತಪ್ಪಿಸಿ, ಸುರಕ್ಷಿತಗೊಳಿಸುವಂತೆ ನಿತ್ಯ ಸಂಚಾರಿಗಳ ಆಗ್ರಹವನ್ನು ತಿಳಿಸಿತ್ತು. ಆದರೂ ಇದುವರೆಗೂ ಯಾವುದೇ ಇಲಾಖಾಧಿಕಾರಿಗಳು ಸುರಕ್ಷತೆಗೆ ಕ್ರಮ ಕೈಗೊಂಡಿಲ್ಲ. ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸಂಚಾರವೇ ಸಂಕಷ್ಟ
ಸಂಚಾರವೇ ಸಂಕಷ್ಟ. ಸ್ವಲ್ಪ ಮಟ್ಟಿಗೆ ರಸ್ತೆಯೂ ಇಲ್ಲಿ ಹಾಳಾಗಿದೆ. ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಅಪಾಯಕಾರಿ ಸ್ಥಳದ ಬಗ್ಗೆ ಉದಯವಾಣಿ ಜನಪರ ಕಾಳಜಿಯ ವರದಿಯನ್ನೂ ಪ್ರಕಟಿಸಿತ್ತು. ಅದನ್ನು ಮನಗಂಡು ಸುರಕ್ಷತೆಗಾಗಿ ಪ್ಲಾಸ್ಟಿಕ್‌ ರಿಬ್ಬನ್‌ ಅಳವಡಿಸಲಾಗಿದೆ. ಪ್ರವಾಸಿಗರು, ವಿದ್ಯಾರ್ಥಿಗಳು, ವಾಹನ ಚಾಲಕರು ಈ ಭಾಗದಲ್ಲಿ ತುಸು ಎಚ್ಚರಿಕೆಯಿಂದ ವಾಹನ ಚಲಾಯಿಸಿರಿ.
-ಜಯಕರ್‌ ಕುಂದರ್‌, ರಿಕ್ಷಾ ಚಾಲಕ, ಕಟಪಾಡಿ

ಅವಘಡಗಳು ಸಂಭವಿಸುವ ಮುನ್ನವೇ ಎಚ್ಚೆತ್ತುಕೊಳ್ಳಿ
ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಶಾಲೆ-ಕಾಲೇಜು ವಿದ್ಯಾರ್ಥಿಗಳು, ಮಟ್ಟು ಬೀಚ್‌ಗೆ ತೆರಳುವ ಪ್ರವಾಸಿಗರು, ಕೋಟೆ, ಮಟ್ಟು, ಕಟಪಾಡಿ ಗ್ರಾಮಸ್ಥರು, ಬಸ್ಸು ಸಹಿತ ಖಾಸಗಿ ವಾಹನಗಳು ನಿರಂತರವಾಗಿ ಸಂಚರಿಸುವ ವಾಹನ ಮತ್ತು ಜನ ದಟ್ಟಣೆಯ ಪ್ರದೇಶ ಇದು. ಇಕ್ಕಟ್ಟಾದ ಈ ಪ್ರದೇಶದಲ್ಲಿ ರಸ್ತೆಯ ಅಂಚಿನಲ್ಲಿ ಈ ಗುಂಡಿ ಇದೆ. ಪಕ್ಕದಲ್ಲಿ ಆಳವಾದ ಪ್ರದೇಶವಿದೆ. ರಸ್ತೆಯ ಬದುವನ್ನು ಕಟ್ಟಿ ಎತ್ತರಿಸಿ ಈ ಭಾಗದಲ್ಲಿ ಇನ್ನಷ್ಟು ಅವಘಡಗಳು ಸಂಭವಿಸುವ ಮುನ್ನವೇ ಎಚ್ಚೆತ್ತು, ಸುರಕ್ಷತೆಯನ್ನು ಕಲ್ಪಿಸಬೇಕಾದ ಅವಶ್ಯಕತೆ ಇದೆ.
– ತುಕಾರಾಮ್‌ ಎಸ್‌. ಉರ್ವ, ಮುಖ್ಯಸ್ಥರು, ಶ್ರೀ ಕ್ಷೇತ್ರ ಪೇಟೆಬೆಟ್ಟು

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.