Kaup:ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ,ಗ್ರಾಮ ಸಹಾಯಕರ ಧರಣಿ
Team Udayavani, Sep 26, 2024, 12:18 PM IST
ಕಾಪು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಪು ತಾಲೂಕು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಜತೆಗೂಡಿ ತಾಲೂಕು ಆಡಳಿತ ಕಚೇರಿ ಬಳಿ ಸೆ.26ರ ಗುರುವಾರ ಧರಣಿ ನಡೆಸಿದರು.
ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಡೇನಿಯಲ್ ಡಿ. ಸೋಜ ಮಾತನಾಡಿ, 18 ತಂತ್ರಾಂಶಗಳನ್ನೊಳಗೊಂಡ ಆ್ಯಪ್ ನಿರ್ವಹಣೆಯ ಹೊರೆ, ಪತಿ – ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ತೊಡಕು, ಸರಕಾರಿ ರಜಾದಿನಗಳಲ್ಲಿ ಕೆಲಸ ಮಾಡುವ ಒತ್ತಡ, ಮಾನಸಿಕ ಕಿರಿಕಿರಿ ಹಾಗೂ 20 ವರ್ಷಗಳಾದರೂ ಗ್ರಾಮ ಆಡಳಿತಾಧಿಕಾರಗಳಿಗೆ ಭಡ್ತಿಗೆ ಅವಕಾಶವಿಲ್ಲದಿರುವುದು ಸಹಿತವಾಗಿ ವಿವಿಧ ಬೇಡಿಕೆಗಳನ್ನು ಈಗಾಗಲೇ ಸರಕಾರದ ಮುಂದಿಟ್ಟಿದ್ದೇವೆ. ಆದರೂ ಬೇಡಿಕೆ ಈಡೇರದ ಕಾರಣ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದರು.
ಉಡುಪಿ ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ವಿಜಯ್ ಮಾತನಾಡಿ, ಇಂದು ಪ್ರತಿ ತಾಲೂಕಿನಲ್ಲಿ ಧರಣಿ ನಡೆಸಿ, ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಿದ್ದೇವೆ. ನಾಳೆ ಜಿಲ್ಲಾಧಿಕಾರಿ ಕಚೇರಿ, ಬಳಿಕ ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ. ನಮಗೆ ನೀಡಿರುವ ಭರವಸೆ ಮತ್ತು ಆಶ್ವಾಸನೆಯನ್ನು ಈಡೇರಿಸುವವರೆಗೂ ಸೇವರಯನ್ನು ಸ್ಥಗಿತಗೊಳಿಸಿ ಧರಣಿಯನ್ನು ಮುಂದುವರಿಸಲಿದ್ದೇವೆ ಎಂದರು.
ಕಾಪು ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಲೋಕನಾಥ ಲಮಾಣಿ, ಉಪಾಧ್ಯಕ್ಷ ಶ್ರೀನಿವಾಸ ಆರ್. ಟಿ., ಜಿಲ್ಲಾ ಪ್ರತಿನಿಧಿ ಜಗದೀಶ್ ಸೇರಿದಂತೆ ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.