Kaup: ಸ್ಕೂಟಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ
Team Udayavani, Oct 20, 2024, 10:00 PM IST
ಕಾಪು: ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಅ. 19ರಂದು ಕಾಪುವಿನಲ್ಲಿ ನಡೆದಿದೆ.
ಮೂಡುತೋನ್ಸೆ ನಿವಾಸಿ ಮಿಥುನ್ (42) ಗಾಯಾಳು. ಮಂಗಳೂರಿಗೆ ಹೋಗಲು ಮೂಡುತೊನ್ಸೆಯಿಂದ ಹೊರಟು ಉಡುಪಿ – ಮಂಗಳೂರು ಏಕಮುಖ ರಸ್ತೆಯ ರಾ.ಹೆ.66ರಲ್ಲಿ ಕಾಪು ಮಂದಾರ ರೆಸಿಡೆನ್ಸಿ ಎದುರು ತೆರಳುತ್ತಿದ್ದಾಗ ಕಾರು ಚಾಲಕ ಯಾವುದೇ ಸೂಚನೆ ನೀಡದೇ ಕಾರನ್ನು ಎಡಬದಿಗೆ ತಿರುಗಿಸಿದ್ದು, ಕಾರಿನ ಹಿಂಬದಿಯಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ಸವಾರ ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದು ಬಲಕಾಲು, ಎದೆಯ ಬಲಬದಿಯಲ್ಲಿ ಗುದ್ದಿದ ನೋವು ಉಂಟಾಗಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಸಹಾಯದಿಂದ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ
Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!
Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್ ಸರಕಾರ!
Compensation: ವಿಮಾನ ಅಪಘಾತದಲ್ಲಿ ಸತ್ತರೆ 1.7 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.