KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ


Team Udayavani, May 8, 2024, 6:15 PM IST

9-

ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭಿಸುವುದರೊಂದಿಗೆ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಿಸಲಾಯಿತು.

ಥಲಸ್ಸೆಮಿಯಾ ಒಂದು ಆನುವಂಶಿಕ ರಕ್ತದ ಕಾಯಿಲೆ. ಈ ಅಸ್ವಸ್ಥತೆಯಲ್ಲಿ ರೋಗಿಯು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆದ್ದರಿಂದ, ಈ ಖಾಯಿಲೆ ಇರುವವರು ರಕ್ತ ಹೀನತೆಯಿಂದ ಬಳಲುತ್ತಾರೆ ಮತ್ತು ಜೀವನಪರ್ಯಂತ ನಿಯಮಿತ ರಕ್ತ ವರ್ಗಾವಣೆಯ ಮೇಲೆ ಅವಲಂಬಿತರಾಗಿರುತ್ತಾರೆ.

ಥಲಸ್ಸೆಮಿಯಾ ರೋಗ ತಡೆಗಟ್ಟುವಿಕೆ, ಗುಣಪಡಿಸುವ ಆಯ್ಕೆಗಳು ಮತ್ತು ಥಲಸ್ಸೆಮಿಯಾ ರೋಗಿಗಳ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಥಲಸ್ಸೆಮಿಯಾ ದಿನವನ್ನು ಪ್ರತಿ ವರುಷ ಮೇ 8 ರಂದು ಆಚರಿಸಲಾಗುತ್ತದೆ.

ಈ ವರುಷ ಥಲಸ್ಸೆಮಿಯಾ ದಿನದ ಧ್ಯೇಯವೇನೆಂದರೆ  “ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ಚಿಕಿತ್ಸೆಯ ಆಯ್ಕೆಗಳು ಥಲಸ್ಸೆಮಿಯಾ ರೋಗಿಗಳಿಗೆ ಸಿಗಬೇಕು ಮತ್ತು ಉತ್ತಮವಾದ ರೋಗ ಆರೈಕೆಗೆ ಸಮಾನ ಹಕ್ಕು ದೊರೆಯಬೇಕು” ಎಂಬುದಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಅಧಿಕಾರಿ ಡಾ.ವೀಣಾ ಕುಮಾರಿ ಕ್ಲಿನಿಕ್ ಉದ್ಘಾಟಿಸಿ, ಮಾತನಾಡಿ, ಥಲಸ್ಸೆಮಿಯಾ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆ ಮತ್ತು ಚಿಕಿತ್ಸೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಮತ್ತು ಅದನ್ನು ಪಡೆಯಲು ಅವರು ಅರ್ಹರು ಎಂದು ತಿಳಿಸಿದರು.

ಮುಂದುವರೆದು ಮಾತನಾಡಿ, ಥಲಸ್ಸೆಮಿಯಾದಂತಹ ಕಾಯಿಲೆಗಳಿಗೆ ಸಾರ್ವಜನಿಕ (ಸರ್ಕಾರಿ) ಖಾಸಗಿ ಸಹಭಾಗಿತ್ವದ ಮಾದರಿಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಮಣಿಪಾಲ ಕೆಎಂಸಿಯ ಡೀನ್ ಡಾ.ಪದ್ಮರಾಜ್ ಹೆಗ್ಡೆ ಈ ಸಮಗ್ರ ಚಿಕಿತ್ಸಾಲಯ ಆರಂಭಿಸಿದ್ದಕ್ಕಾಗಿ ವಿಭಾಗವನ್ನು ಅಭಿನಂದಿಸಿ, ಮಾತನಾಡಿ, ಬಹಳಷ್ಟು ಸಂಘ ಸಂಸ್ಥೆಗಳ ಬೆಂಬಲವು ಕೆಎಂಸಿಯಲ್ಲಿ ಬಡ ಮಕ್ಕಳಿಗೆ ಮೂಳೆ ಮಜ್ಜೆಯ ಕಸಿ ಮಾಡಲು ಅನುವು ಮಾಡಿಕೊಟ್ಟಿದೆ ಎಂದು ಉಲ್ಲೇಖಿಸಿದರು.

ಥಲಸ್ಸೆಮಿಯಾ ಕುರಿತು ಮಾಹಿತಿ ಪುಸ್ತಕವನ್ನು ಬಿಡುಗಡೆ ಮಾಡಿದ ಅವರು ರೋಗದ ವಿವರವಾದ ಮಾಹಿತಿಯನ್ನು ಆರೈಕೆ ಮಾಡುವವರಿಗೆ ಉತ್ತಮವಾಗಿ ಅರ್ಥವಾಗುವ ಭಾಷೆಯಲ್ಲಿ ನೀಡಬೇಕು ಎಂದು ಹೇಳಿದರು.

ಮಣಿಪಾಲದ ಕೆಎಂಸಿಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ವಾಸುದೇವ ಭಟ್ ಕೆ. ಸ್ವಾಗತಿಸಿ, ಈ ಕ್ಲಿನಿಕ್ ಪ್ರಾರಂಭಿಸಲು ಅಂತರರಾಷ್ಟ್ರೀಯ ಥಲಸ್ಸೆಮಿಯಾ ದಿನಕ್ಕಿಂತ ಉತ್ತಮ ದಿನ ಬೇರೊಂದಿಲ್ಲ ಮತ್ತು ನಮ್ಮ ದೃಷ್ಟಿ ಈ ವರ್ಷದ ಥೀಮ್‌ಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದರು.

ಇದೇ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಅರ್ಚನಾ ಎಂ.ವಿ. ಸಮಗ್ರ ಥಲಸ್ಸೆಮಿಯಾ ಚಿಕಿತ್ಸಾಲಯ ಮತ್ತು ಅದರ ಕಾರ್ಯನಿರ್ವಹಣೆಯ ಅವಲೋಕನ ನೀಡಿ ಈ ಚಿಕಿತ್ಸಾಲಯ ಪ್ರತಿ ತಿಂಗಳ 2ನೇ ಶನಿವಾರ ಕಾರ್ಯನಿರ್ವಹಿಸಲಿದ್ದು, ಉಡುಪಿ ಮತ್ತು ನೆರೆಯ ಜಿಲ್ಲೆಗಳ ರೋಗಿಗಳಿಗೆ ಸೇವೆ ಒದಗಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ರೋಗಿಗಳಿಗೆ ಸಹಾಯ ಧನ ವಿತರಿಸಲಾಯಿತು. ಉಪ ವೈದ್ಯಕೀಯ ಅಧೀಕ್ಷಕ ಡಾ.ಶಿರನ್ ಶೆಟ್ಟಿ ವಂದಿಸಿದರು.

ಔಪಚಾರಿಕ ಕಾರ್ಯಕ್ರಮದ ನಂತರ ಆರೈಕೆದಾರರು ಮತ್ತು ದಾದಿಯರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ  ಡಾ.ಸ್ವಾತಿ ಪಿ.ಎಂ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.