![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 29, 2021, 10:37 AM IST
ಕೋಟ: ಸೋಮವಾರ ರಾತ್ರಿ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಟಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಕೋಟ ಕೊರಗರ ಮೇಲೆ ಹಲ್ಲೆಯ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ವಿಷ್ಣುವರ್ಧನ್ ತಿಳಿಸಿದ್ದಾರೆ. ಉಳಿದ ಐದು ಸಿಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಮಾಹಿತಿ ನೀಡಿದ್ದು, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್ಐ ಅವರನ್ನು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಯವರು ಅಮಾನತು ಮಾಡಿದ್ದಾರೆ.
ಇದನ್ನೂ ಓದಿ; ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 781ಕ್ಕೆ ಏರಿಕೆ; ಕೋವಿಡ್ ಶೇ.44ರಷ್ಟು ಹೆಚ್ಚಳ
ಇನ್ನು ಪ್ರಕರಣದಲ್ಲಿನ ಐದು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.