Kota: ಸಾಲಿಗ್ರಾಮ ಪಟ್ಟಣ ಪಂಚಾಯತ್ ಆಡಳಿತ ಯಂತ್ರಕ್ಕೆ ಸಿಗಬೇಕಿದೆ ವೇಗ


Team Udayavani, Sep 17, 2024, 2:32 PM IST

Kota: Saligram P.P. The administrative machinery needs to get speed

ಕೋಟ: ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅವಧಿ ಮುಗಿದು 17ತಿಂಗಳು ಗಳ ಬಳಿಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಈ ಹಿಂದೆ ಚುನಾಯಿತ ಸದಸ್ಯರ ಪೂರ್ಣಪ್ರಮಾಣದ ಅಧಿಕಾರವಿಲ್ಲದ ಕಾರಣ ಜನರ ಕೆಲಸಗಳು ಪರಿಹಾರ ಆಗುತ್ತಿಲ್ಲ, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿದೆ. ಚುನಾಯಿತ ಸದಸ್ಯರು ಹೆಸರಿಗಷ್ಟೇ ಸದಸ್ಯರು ಎನ್ನುವಂತಾ ಗಿದ್ದೇವೆ ಎನ್ನುವ ನೋವಿನ ಮಾತು ಸದಸ್ಯರಿಂದ ಕೇಳಿಬರುತ್ತಿತ್ತು. ಇದೀಗ ಆ ಸಮಸ್ಯೆ ದೂರವಾಗಿದೆ. ಇನ್ನುಳಿದ ಆಡಳಿತಾವಧಿ 13ತಿಂಗಳು ಮಾತ್ರ.
ಹೀಗಾಗಿ ಆಡಳಿತ ಯಂತ್ರಕ್ಕೆ ಚುರುಕು ನೀಡುವ ಜತೆಗೆ ಜನರ ಸಮಸ್ಯೆ ಯನ್ನುಪರಿಹರಿಸುವ ಕುರಿತು ನೂತನ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಕ್ರಮಕೈಗೊಳ್ಳಬೇಕಿದೆ.

ಪ್ರಮುಖ ಸಮಸ್ಯೆಗಳು: ಕಸ ವಿಲೇವಾರಿ ಸಮಸ್ಯೆ ಸಾಲಿಗ್ರಾಮ ಪ.ಪಂ. ಬೆಂಬಿಡದ ಭೂತದಂತೆ ಕಾದುತ್ತಿದೆ ಹಾಗೂ ಕಸ ವಿಂಗಡಣೆಗಾಗಿ ಉಳ್ತೂರಿನಲ್ಲಿ ಖರೀದಿಸಿದ ಜಾಗಕ್ಕೆ ಸಂಬಂಧಪಟ್ಟಂತೆ ಅಲ್ಲಿನ ಸ್ಥಳೀಯರ ಆಕ್ಷೇಪಗಳಿದೆ. ಹೀಗಾಗಿ ಈ ಬಗ್ಗೆ ಸೂಕ್ತ ಪರಿಹಾರ ಸೂತ್ರವನ್ನು ಆಡಳಿತ ಸಮಿತಿ ಕೈಗೊಳ್ಳಬೇಕಿದೆ. ಪ.ಪಂ.ನಲ್ಲಿ ಮಧ್ಯವರ್ತಿಗಳ ಹಾವಳಿ ಜಾಸ್ತಿ ಇರುವುದರಿಂದ ಜನರ ಕೆಲಸ ವೇಗವಾಗಿ ನಡೆಯುತ್ತಿಲ್ಲ. ಜನರೇ ನೇರವಾಗಿ ಕಚೇರಿಗೆ ಬಂದರೆ ತಿಂಗಳುಗಟ್ಟಲೆ ಅಲೆದಾದಬೇಕು, ಮಧ್ಯವರ್ತಿಗಳ ಮೂಲಕ ಬಂದರೆ ವಾರದಲ್ಲೇ ಕೆಲಸವಾಗುತ್ತೆ ಎನ್ನುವ ದೂರು ವಿರೋಧ ಪಕ್ಷದಿಂದ ಹಲವು ಬಾರಿ ಕೇಳಿಬಂದಿತ್ತು. ಈ ಬಗ್ಗೆ ಕೂಡ ಪರಿಶೀಲಿಸಿ ಪಾರದರ್ಶಕ ಆಡಳಿತ ನಡೆಯುವಂತೆ ನೋಡಿಕೊಳ್ಳಬೇಕಿದೆ. ಚುನಾಯಿತ ಸದಸ್ಯರ ಯಾವ ಕೆಲಸವೂ ಸರಿಯಾಗಿ ಆಗದಿರುವುದು, ಸಣ್ಣ ಸಮಸ್ಯೆ ಪರಿಹಾರಕ್ಕೆ ತಿಂಗಳುಗಟ್ಟಲೆ ತೆಗೆದುಕೊಳ್ಳುವುದು, ಎಲ್ಲ ವಿಚಾರದಲ್ಲೂ ಅಧಿಕಾರಿಗಳದ್ದೇ ಅಂತಿಮ ನಿರ್ಧಾರಗಳಿರುವುದು ಸಾಕಷ್ಟು ಬೇಸರ ತಂದಿದೆ ಎನ್ನುವುದು ಆಡಳಿತಾಧಿಕಾರಿಗಳ ಆಡಳಿತಾವಧಿಯಲ್ಲಿ ಕೆಲವು ಸದಸ್ಯರ ನೋವಿನ ಮಾತಾಗಿತ್ತು. ಮುಂದೆ ಸದಸ್ಯರು ನೀಡುವ ದೂರುಗಳಿಗೆ ತತ್‌ಕ್ಷಣ
ಸ್ಪಂದಿಸುವಂತೆ, ಅಭಿವೃದ್ಧಿ ಕಾರ್ಯಗಳು ಶೀಘ್ರವಾಗಿ ನೆರವೇರುವಂತೆ ಆಗಬೇಕಿದೆ.

ಸಾಮಾನ್ಯ ಸಭೆಗಳು ಕಾಲಕಾಲಕ್ಕೆ ನಡೆದಾಗ ಜನಸಾಮಾನ್ಯರ ಒಂದಷ್ಟು ಸಮಸ್ಯೆಗಳ ಬಗ್ಗೆ ಚರ್ಚೆ ನಡೆದು ಕೆಲವೊಂದಕ್ಕೆ ಪರಿಹಾರ ಸಿಗುತ್ತದೆ. ಆಡಳಿತಾಧಿಕಾರಿಗಳ ಆಡಳಿತವಿದ್ದಾಗ ಕಳೆದ ಒಂದೂವರೇ ವರ್ಷದಲ್ಲಿ ನಡೆದ ಸಭೆ ಕೇವಲ ಎರಡು ಮಾತ್ರ; ಅದರಲ್ಲೂ ಒಂದು ಜಾತ್ರೆಗೆ ಸಂಬಂಧಿಸಿದ್ದು. ಹೀಗಾಗಿ ಶೀಘ್ರವಾಗಿ ಸಾಮಾನ್ಯ ಸಭೆ ನಡೆಸಿ ಪ್ರತಿಯೊಬ್ಬ ಸದಸ್ಯರ ವಾರ್ಡ್‌ ವ್ಯಾಪ್ತಿಯ ಸಮಸ್ಯೆಗಳನ್ನು ತಿಳಿದು ಪರಿಹಾರ ಮಾಡಬೇಕಿದೆ.

ಸಮಸ್ಯೆಗೆ ಪರಿಹಾರ ಅಗತ್ಯ
ಕೆಲವೊಂದು ಸಮಸ್ಯೆಗಳಿಗೆ ಪ.ಪಂ. ಆಡಳಿತ ಮಂಡಳಿ ಮಟ್ಟದಲ್ಲಿ ಪರಿಹಾರ ಅಸಾಧ್ಯ. ಹೀಗಾಗಿ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರು ಒಂದಷ್ಟು ಸಭೆಗಳಲ್ಲಿ ಭಾಗವಹಿಸಿದರೆ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ. ಪ್ರಸ್ತುತ ಹೇರಳವಾದ ಸಮಸ್ಯೆಗಳು ಪ.ಪಂ.ನಲ್ಲಿದೆ. ಹೀಗಾಗಿ ಸಂಸದರು ಮುಂದಿನ ಕೆಲವು ಸಭೆಗಳಲ್ಲಿ ಇವರೆಲ್ಲ ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬೇಕಿದೆ.

ದೂರು ಕೇಂದ್ರ ತೆರೆಯಲಿ
ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲ ಎನ್ನುವ ಅಭಿಪ್ರಾಯವಿದೆ. ಆದ್ದರಿಂದ ದೂರವಾಣಿ ಮೂಲಕ ಜನರ ದೂರುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಸಿಬಂದಿಗಳ ಗಮನಕ್ಕೆ ತಂದು ಪರಿಹರಿಸುವ ನಿಟ್ಟಿನಲ್ಲಿ ದೂರು ಕೇಂದ್ರ ಸ್ಥಾಪನೆಯಾಗಲಿ ಎನ್ನುವ ಬೇಡಿಕೆ ಇದೆ.

ಪರಿಹಾರಕ್ಕೆ ಒತ್ತು
ಆಡಳಿತ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿರುವುದು ಗಮನದಲ್ಲಿದೆ. ಇದರ ಪರಿಹಾರಕ್ಕಾಗಿ ಪ್ರಥಮವಾಗಿ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಟೆಂಡರ್‌ ಮೂಲಕ ನಿರ್ವಹಣೆಯಾಗುವ ಕೆಲಸಗಳ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ. ಮುಂದಿನ ಸಾಮಾನ್ಯ ಸಭೆಯಲ್ಲಿ ವಾರ್ಡ್‌ವಾರು ಸಮಸ್ಯೆಗಳನ್ನು ಪಟ್ಟಿ ಮಾಡಿ ಪರಿಹರಿಸಲು ಪ್ರಯತ್ನಿಸಲಾಗುವುದು.
– ಸುಕನ್ಯಾ ಶೆಟ್ಟಿ, ಅಧ್ಯಕ್ಷರು ಸಾಲಿಗ್ರಾಮ ಪ.ಪಂ.

ಗುತ್ತಿಗೆ ವಹಿಸಿಕೊಂಡವರ ಕೆಲಸ ಹೇಗಿದೆ: ಬೀದಿ ದೀಪ ಸೇರಿದಂತೆ ಕೆಲವೊಂದು ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾದ ಕೆಲಸಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಬೀದಿ ದೀಪಗಳು ಹಗಲೆಲ್ಲ ಉರಿಯುತ್ತದೆ ಎನ್ನುವ ದೂರುಗಳಿದ್ದುದೇ ಬಗ್ಗೆ ಪರಿಶೀಲಿಸಬೇಕಿದೆ.

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.