Karkala ನಗರದಲ್ಲಿ ಕರ್ಕಶ ಹಾರ್ನ್ ಕಿರಿಕಿರಿ!

ಪ್ರತಿನಿತ್ಯ ಶಬ್ದ ಮಾಲಿನ್ಯವಾಗುತ್ತಿದ್ದರೂ ಕ್ರಮ ವಹಿಸದ ಸಾರಿಗೆ ಇಲಾಖೆ

Team Udayavani, May 17, 2023, 3:52 PM IST

Karkala ನಗರದಲ್ಲಿ ಕರ್ಕಶ ಹಾರ್ನ್ ಕಿರಿಕಿರಿ!

ಕಾರ್ಕಳ: ಶಬ್ದ ಮಾಲಿನ್ಯಕ್ಕೆ ವಾಹನಗಳ ಹಾರ್ನ್ ಕೂಡ ಒಂದು ಕಾರಣ. ಕಾರ್ಕಳ ನಗರ ವ್ಯಾಪ್ತಿಯಲ್ಲಿ ಕರ್ಕಶ ಹಾರ್ನ್ ಹಾವಳಿ ಹೆಚ್ಚಿದ್ದು ಸಾರ್ವಜನಿಕರು ಇದರಿಂದ ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ, ಕಾರ್ಕಳ ನಗರ ಬೆಳೆಯುತ್ತಿದೆ. ವಾಹನಗಳ ಸಂಚಾರವೂ ಅಧಿಕವಾಗುತ್ತಿದೆ.

ಬಂಡಿಮಠದಿಂದ ಕಾರ್ಕಳ ಬಸ್‌ ನಿಲ್ದಾಣದ ವರೆಗೆ ವಾಹನಗಳ ಓಡಾಟ ಹೆಚ್ಚಿದೆ. ವಾಹನಗಳು ನಗರ ಪ್ರವೇಶಿಸುತ್ತಲೇ ಕರ್ಕಶ ಹಾರ್ನ್ ಮೊಳಗುವುದಕ್ಕೆ ಆರಂಭವಾಗುತ್ತದೆ. ಇದರಿಂದ ರಸ್ತೆ ಬದಿ ವ್ಯಾಪಾರಿಗಳು, ಪಾದಚಾರಿಗಳಿಗೆ ಕಿರಿಕಿರಿ ಅನುಭವವಾಗುತ್ತದೆ. ಇದನ್ನು ತಡೆಗಟ್ಟುವಲ್ಲಿ ಸಾರಿಗೆ ಇಲಾಖೆ ವಿಫ‌ಲವಾಗಿದೆ. ಇದರಿಂದಾಗಿ ನಿತ್ಯವೂ ಶಬ್ಧ ಮಾಲಿನ್ಯದಿಂದ ನಾಗರಿಕರೂ ಹಿಡಿಶಾಪ ಹಾಕುತ್ತಿರುತ್ತಾರೆ.

ಜಿಲ್ಲಾ ಕೇಂದ್ರ ಉಡುಪಿ ಕಡೆಯಿಂದ ಹಾಗೂ ಮಂಗಳೂರು ರಸ್ತೆಯ ಮೂರು ಮಾರ್ಗವಾಗಿ ಅತೀ ಹೆಚ್ಚು ವಾಹನಗಳು ನಗರದ ಬಸ್‌ ನಿಲ್ದಾಣ ತಲುಪುತ್ತವೆ. ಉಡುಪಿ, ಮಂಗಳೂರು ನಗರಗಳಿಗೆ ತೆರಳುವ ಸರ್ವಿಸ್‌ ಬಸ್‌, ಹೆಬ್ರಿ, ಬಜಗೋಳಿ, ನಿಟ್ಟೆ, ಹೀಗೆ ಗ್ರಾಮಿಣ ಭಾಗಕ್ಕೆ ಸಂಚಾರ ಕೈಗೊಳ್ಳುವ ಬಸ್‌ಗಳು ಸೇರಿ ಸುತ್ತಲಿನಿಂದ ವಾಹನಗಳು ಪೇಟೆ ತಲುಪುತ್ತಿದ್ದಂತೆ ವಾಹನಗಳಿಂದ ತುಂಬಿ ಟ್ರಾಫಿಕ್‌ ಜಾಮ್‌ ಉಂಟಾಗುತ್ತದೆ.

ನಗರ ಬೆಳೆದಂತೆ ಕಿರಿದಾದ ರಸ್ತೆಗಳು ವಾಹನ ಒತ್ತಡಕ್ಕೆ ಒಳಗಾಗುತ್ತವೆ. ಅದರಲ್ಲೂ ವಿವಿಧ ಊರುಗಳಿಂದ ನಗರ ಬಸ್‌ಸ್ಟಾಂಡ್‌ಗೆ ಬಂದು ಹೋಗುವ ಬಸ್‌ಗಳಲ್ಲಿ ಸರ್ವೀಸ್‌ ಬಸ್‌ಗಳೇ ಅಧಿಕ. ಮೂರು ರಸ್ತೆಗಳಲ್ಲಿ ಲಘು ವಾಹನ, ದ್ವಿಚಕ್ರ ವಾಹನ ಅಡ್ಡ ಬಂದಾಗೆಲ್ಲ ಕರ್ಕಶವಾಗಿ ಹಾರ್ನ್ ಮೊಳಗಿಸಿಕೊಂಡು ಹೋಗುವುದು ಇಲ್ಲಿ ಸರ್ವೇ ಸಾಮಾನ್ಯವಾಗಿದೆ.

ಪೊಲೀಸರ ಕಣ್ಣೆದುರೇ ಹಾರ್ನ್ ಕಿರಿಕಿರಿ
ಮೂರು ಮಾರ್ಗದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್‌ ಸಿಬಂದಿ ರಸ್ತೆ ಮೇಲೆ ಓಡಾಡುವ ವಾಹನಗಳ ಮೇಲೆ ನಿಗಾ ವಹಿಸುತ್ತಾರೆ. ಟ್ರಾಫಿಕ್‌ ಜಾಮ್‌ ಆದಾಗಲೆಲ್ಲ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಸಿಸಿ ಕೆಮರಾ ಕೂಡ ಇದ್ದು ಹೆಲ್ಮೆಟ್‌ ಧರಿಸದೇ ಓಡಾಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುವ ಕಾರ್ಯಗಳು ಇಲ್ಲಿ ಪೊಲೀಸ್‌ ಇಲಾಖೆಯಿಂದ ನಡೆಯುತ್ತಿದೆ. ಆದರೆ ಪೊಲೀಸರ ಕಣ್ಣೆದುರೇ ಕರ್ಕಶ ಹಾರ್ನ್ ಹಾಕಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುವ ಬಸ್‌ನವರ ವಿರುದ್ಧ ಕ್ರಮ ವಹಿಸಲು ಇವರಿಗೂ ಅಧಿಕಾರವಿಲ್ಲ.

ವಾಹನಗಳ
ಅಡ್ಡಾದಿಡ್ಡಿ ಓಡಾಟ
ಕಾರ್ಕಳ ನಗರ ತೀರಾ ಕಿರಿದಾಗಿದೆ. ನಗರದೊಳಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆಗಳಿಲ್ಲ. ನಗರಕ್ಕೆ ಬರುವ ಸಾರ್ವಜನಿಕರು ರಸ್ತೆ ಬದಿ, ಅಂಗಡಿಗಳ ಮುಂದೆ ರಸ್ತೆಯಲೇ ವಾಹನ ನಿಲ್ಲಿಸಿ ತೆರಳುತ್ತಾರೆ. ರಸ್ತೆ ಕಿರಿದಾದ್ದರಿಂದ ಲಘು ವಾಹನಗಳು, ದ್ವಿಚಕ್ರ ಸವಾರರು, ಪಾದಚಾರಿಗಳು ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುತ್ತಾರೆ. ಆಗ ಬಸ್‌ನವರು ಹಲವು ನಿಮಿಷಗಳ ಕಾಲ ಹಾರ್ನ್ ಮೊಳಗಿಸುತ್ತಾರೆ. ಇದು ಇಲ್ಲಿ ದೊಡ್ಡ ಸಮಸ್ಯೆಯಾಗಿದೆ.

ಕಾನೂನು ಕ್ರಮ ಅಗತ್ಯ
ಕಾರ್ಕಳದಲ್ಲಿ ಟ್ರಾಫಿಕ್‌ ಪೊಲೀಸ್‌ ಠಾಣೆಯಿಲ್ಲ. ನಗರ ಠಾಣೆ ಪೊಲೀಸ್‌ ಸಿಬಂದಿ ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ನಿವಾರಣೆ ನಡೆಸುತ್ತಾರೆ. ವಾಹನ ಸಂಚಾರ ಕಾನೂನು ಸುವ್ಯವಸ್ಥೆ ಬಗ್ಗೆಯೂ ಅವರೇ ಇಲ್ಲಿ ನೋಡಿಕೊಳ್ಳುತ್ತಿದ್ದಾರೆ. ಸಾರಿಗೆ ಇಲಾಖೆ ಕರ್ಕಶ ಹಾರ್ನ್ಗಳಿಗೆ ಕಡಿವಾಣ ಹಾಕುವಲ್ಲಿ ವಿಫ‌ಲವಾಗಿದೆ. ಜಾಗೃತಿಯೂ ಇಲ್ಲದಾಗಿದೆ. ಹಾರ್ನ್ ಕಿರಿಕಿರಿಯಿಂದ ಅಪಘಾತಗಳು ಸಂಭವಿಸುತ್ತವೆ. ನಗರದಲ್ಲಿ ವ್ಯಾಪಕವಾಗಿರುವ ವಾಹನ ಮಾಲಿನ್ಯ ತಡೆಗೆ ಶಿಸ್ತು ಕಾನೂನು ಕ್ರಮದ ಅಗತ್ಯವಿದ್ದು ಸಾರಿಗೆ ಇಲಾಖೆ ಕಾರ್ಯಾಚರಣೆ ನಡೆಸಿ ನಿಯಂತ್ರಿಸಬೇಕಿದೆ.

ಆರ್‌ಟಿಒ ಅಧಿಕಾರಿಗಳೇ ಕ್ರಮ ವಹಿಸಲಿ
ನಗರದಲ್ಲಿ ವಾಹನ ಶಬ್ದ ಮಾಲಿನ್ಯವಿರುವ ಬಗ್ಗೆ ದೂರುಗಳಿವೆ. ಟ್ರಾಫಿಕ್‌ ಸಮಸ್ಯೆ ಉಂಟಾದಾಗ ನಮ್ಮ ಸಿಬಂದಿ ಕ್ರಮ ವಹಿಸುತ್ತಾರೆ. ವಾಹನಗಳ ಶಬ್ದ ಮಾಲಿನ್ಯಕ್ಕೆ ಸಂಬಂದಿಸಿ ಆರ್‌ಟಿಒ ಇಲಾಖೆ ಅಧಿಕಾರಿಗಳೇ ಕ್ರಮವಹಿಸಬೇಕು
-ಪ್ರಸನ್ನಕುಮಾರ್‌ , ಸಬ್‌ಇನ್‌ಸ್ಪೆಕ್ಟರ್‌ ನಗರ ಠಾಣೆ , ಕಾರ್ಕಳ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.