Malpe Beach parking problem: ಬಹು ಅಂತಸ್ತು ಪಾರ್ಕಿಂಗ್‌ ವ್ಯವಸ್ಥೆ ರೂಪುಗೊಳ್ಳಲಿ


Team Udayavani, May 22, 2023, 4:06 PM IST

Malpe Beach parking problem: ಬಹು ಅಂತಸ್ತು ಪಾರ್ಕಿಂಗ್‌ ವ್ಯವಸ್ಥೆ ರೂಪುಗೊಳ್ಳಲಿ

ಮಲ್ಪೆ: ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಪ್ರವಾಸಿ ಕೇಂದ್ರವಾದ ಮಲ್ಪೆ ಬೀಚ್‌ಗೆ ಅದಕ್ಕೆ ತಕ್ಕಂತೆ ಆಗಮಿಸುವ ಪ್ರವಾಸಿಗಳ ವಾಹನಗಳ ಸಂಖ್ಯೆಯೂ ಅಧಿಕವಾಗುತ್ತಿದೆ. ಪ್ರವಾಸಿ ವಾಹನಗಳ ಸಂಖ್ಯೆ ಹೆಚ್ಚಳವಾದಂತೆ ಇಲ್ಲಿ ಪಾರ್ಕಿಂಗ್‌ಗೆ ಸ್ಥಳಾವಕಾಶ ಇಲ್ಲದಿರುವುದರಿಂದ ಜನರು ರಸ್ತೆ ಬದಿಯಲ್ಲೇ ಪಾರ್ಕ್‌ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಸ್ಥಳೀಯರಿಗೂ ಇಲ್ಲಿ ನಡೆದಾಡಲು, ವಾಹನ ಚಲಾಯಿಸಲು ಕಷ್ಟಸಾಧ್ಯವಾಗಿದೆ. ಹಾಗಾಗಿ ಬಹು ಅಂತಸ್ತು ಪಾರ್ಕಿಂಗ್‌ ವ್ಯವಸ್ಥೆ ಇಲ್ಲಿ ರೂಪುಗೊಳ್ಳಲು ನಮ್ಮ ನೂತನ ಶಾಸಕರು ಮನ ಮಾಡಬೇಕೆಂಬ ಆಶಯ ಇಲ್ಲಿನ ನಾಗರಿಕರದ್ದಾಗಿದೆ.

ಇಲ್ಲಿ ಬಹುತೇಕ ಘನ ವಾಹನಗಳನ್ನು ರಸ್ತೆ ಬದಿಯಲ್ಲೇ ಪಾರ್ಕ್‌ ಮಾಡಲಾಗುತ್ತಿದೆ. ಮೊದಲೇ ಫ‌ುಟ್‌ಪಾತ್‌ ವ್ಯವಸ್ಥೆ ಇಲ್ಲದಿರುವುದರಿಂದ ಒಂದೆಡೆ ವಾಹನ ಸಂಚಾರ, ಇನ್ನೊಂದೆಡೆ ರಸ್ತೆಯಲ್ಲೇ ನಿಂತಿರುವ ವಾಹನಗಳ ನಡುವೆ ಜೀವ ಕೈಯಲ್ಲಿ ಹಿಡಿದು ನಡೆದಾಡಬೇಕಾದ ಪರಿಸ್ಥಿತಿ ಪಾದಚಾರಿಗಳದ್ದಾಗಿದೆ.

ಪ್ರಸ್ತುತ ಬೀಚ್‌ ಪಾರ್ಕಿಂಗ್‌ ಏರಿಯಾಗಳು ಅಲ್ಲದೆ ಶಿವಪಂಚಾಕ್ಷರಿ ಭಜನ ಮಂದಿರದವರೆಗೂ, ಇತ್ತ ಬೀಚ್‌ ದಕ್ಷಿಣ ಭಾಗದ ಹನುಮಾನ್‌ನಗರದ ವರೆಗೆ ಇಂಟರ್‌ಲಾಕ್‌ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಬೀಚ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್‌ ಶುಲ್ಕ ಇಲ್ಲ. ದ್ವಿಚಕ್ರ ವಾಹನಗಳನ್ನು ಬೀಚ್‌ ರಸ್ತೆ ಬದಿ, ಪ್ಯಾರಡೈಸ್‌ ಹೊಟೇಲಿನ ಮುಂಭಾಗದಲ್ಲಿ ನಿಲ್ಲಿಸುತ್ತಾರೆ. ಬಹುತೇಕ ಪ್ರವಾಸಿ ವಾಹನಗಳು ಇಲ್ಲಿನ ಪಾರ್ಕಿಂಗ್‌ ಸಮಸ್ಯೆಯನ್ನು ನೋಡಿ “ಸಾಕಪ್ಪ ಸಾಕು ಮಲ್ಪೆ ಬೀಚ್‌ ಸಹವಾಸ’ ಎಂದು ಗೋಗರೆ ಯುತ್ತಿರುವುದು ಸಾಮಾನ್ಯವಾಗಿದೆ.
ಬೀಚ್‌ನಲ್ಲಿ ಸ್ಥಳಾವಕಾಶದ ಕೊರತೆ ತೀವ್ರವಾಗಿದೆ. ಇದರಿಂದ ಪಾರ್ಕಿಂಗ್‌ಗೆ ವಿಶಾಲವಾದ ಜಾಗ ಹೊಂದಿ ಕೊಳ್ಳುವುದು ಕಷ್ಟ ಸಾಧ್ಯ.

ಲಭ್ಯ ಜಾಗಗಳಲ್ಲಿ ಅತೀ ಹೆಚ್ಚು ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಳ್ಳುವುದು ಆನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ನೂತನ ಶಾಸಕರು ಮುತುವರ್ಜಿ ವಹಿಸಬೇಕೆಂಬುದು ಜನರ ಅಭಿಪ್ರಾಯವಾಗಿದೆ.

ಬಹು ಅಂತಸ್ತು ಪಾರ್ಕಿಂಗ್‌ ಶೀಘ್ರ ಆಗಲಿ
ಇತರ ಮಹಾನಗರಗಳಲ್ಲಿ ಇರುವ ಹಾಗೆ ಬಹು ಅಂತಸ್ತು ವಾಹನ ಪಾರ್ಕಿಂಗ್‌ ವ್ಯವಸ್ಥೆಯನ್ನು ಬೀಚ್‌ನಲ್ಲೂ ಅಳವಡಿಸಿಕೊಳ್ಳ‌ಬೇಕು, ಖಾಸಗಿ ಜಾಗವನ್ನು ಪಡೆದುಕೊಂಡು, ಸರಕಾರಿ ಖಾಸಗಿ ಸಹಭಾಗಿತ್ವದಲ್ಲಿ ಬಹುಅಂತಸ್ತು ಪಾರ್ಕಿಂಗ್‌ಗಳನ್ನು ರೂಪಿಸಿಕೊಳ್ಳಬಹುದೆಂಬುದು ಸಾರ್ವಜನಿಕರ ಆಗ್ರಹವಾಗಿದೆ.
-ಪಾಂಡುರಂಗ ಮಲ್ಪೆ, ಅಧ್ಯಕ್ಷರು, ಬೀಚ್‌ ಅಭಿವೃದ್ಧಿ ಸಮಿತಿ

ಅಲ್ಲಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಸಮಸ್ಯೆ
ಪ್ರವಾಸಿಗರ ಸಂಖ್ಯೆ ಹೆಚ್ಚಾದಂತೆ, ವಾಹನಗಳ ಸಂಖ್ಯೆಯು ಹೆಚ್ಚಾಗಿದೆ. ಈಗಿರುವ ಪಾರ್ಕಿಂಗ್‌ ಸ್ಥಳಗಳು ಇಲ್ಲಿಗೆ ಬರುವ ವಾಹನಗಳಿಗೆ ಏನೇನು ಸಾಲದು. ಹಾಗಾಗಿ ವಾಹನಗಳನ್ನು ಸಿಕ್ಕಸಿಕ್ಕ ಜಾಗಗಳಲ್ಲಿ ಪಾರ್ಕ್‌ ಮಾಡಲಾಗುತ್ತದೆ.
-ಸುರೇಶ್‌ ಕುಂದರ್‌, ಸ್ಥಳೀಯರು

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.