Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಕೆರೆ ಈಗ ನಿರ್ವಹಣೆ ಇಲ್ಲದೆ ಹೂಳು ತುಂಬಿ ಬರಡು.

Team Udayavani, Sep 20, 2024, 3:04 PM IST

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

ಮಲ್ಪೆ: ಒತ್ತುವರಿಯ ಕಾನೂನು ಬಾಹಿರ ಚಟುವಟಿಕೆ, ಹೂಳು ತೆಗೆಯದೇ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ತಾಲೂಕಿನ ಹಲವು ಉತ್ತಮ ಕೆರೆಗಳು ಜೀವ ಸಂಕಷ್ಟದ ಅಪಾಯದಲ್ಲಿವೆ ಎಂಬುದಕ್ಕೆ ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾ.ಪಂ.ಕೆಳಾರ್ಕಳಬೆಟ್ಟು ಸಮೀಪದ ಪೊಟ್ಟುಕೆರೆ ಸಾಕ್ಷಿಯಾಗಿದೆ.

ಒಂದು ಕಾಲದಲ್ಲಿ ಗ್ರಾಮದ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಪೊಟ್ಟುಕೆರೆ ಇಂದು ನಿರ್ವಹಣೆ ಇಲ್ಲದೆ ಹೂಳು ತುಂಬಿಕೊಂಡು ಬರಡಾಗಿದೆ. ಇದರ ಒಂದು ಭಾಗ ಪಂಚಾಯತ್‌ಗೆ ಸೇರಿದರೆ ಇನ್ನೊಂದು ಭಾಗ ನಗರಸಭೆಗೆ ಸೇರಿದೆ.

ಅಕ್ಷರಶಃ ಪೊಟ್ಟುಕೆರೆ
ಗ್ರಾಮದ ಸುತ್ತಮುತ್ತ ಹಲವಾರು ಕೆರೆಗಳಿದ್ದರೂ ಪೊಟ್ಟುಕೆರೆ ಐತಿಹಾಸಿಕ ಹಿನ್ನೆಲೆಯೊಂದಿಗೆ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಕೆರೆಯಲ್ಲಿ ತುಂಬಿರುವ ಭಾರಿ ಪ್ರಮಾಣದ ಹೂಳಿನಿಂದಾಗಿ ನೀರಿನ ಒರತೆಯೇ ಇಲ್ಲವಾಗಿದ್ದು ಸುಮಾರು 35 ವರ್ಷಗಳಿಂದ ಇದು ಹೆಸರಿಗೆ ತಕ್ಕಂತೆ ಅಕ್ಷರಶಃ ಪೊಟ್ಟುಕೆರೆಯಾಗಿಯೇ ಉಳಿದಿದೆ. ಕೃಷಿಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಈ ಕೆರೆಯನ್ನು ಉಳಿಸಿಕೊಳ್ಳುವ ಗೋಜಿಗೂ ಯಾರೂ ಮುಂದಾಗಿಲ್ಲ ಎನ್ನಲಾಗುತ್ತಿದೆ.

ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡ್‌ ಮತ್ತು ತೆಂಕನಿಡಿಯೂರು, ಕೆಳಾರ್ಕಳಬೆಟ್ಟು ಗ್ರಾಮವನ್ನು ಸಂಧಿಸುವಲ್ಲಿ ಇರುವ ಈ ಕೆರೆ ಹಿಂದೆ 5 ಎಕ್ರೆಯಷ್ಟು ವಿಸ್ತೀರ್ಣವನ್ನು ಹೊಂದಿತ್ತು. ಇದೀಗ ಒತ್ತುವರಿಯಾಗಿ 3 ಎಕ್ರೆ (ತೆಂಕನಿಡಿಯೂರು ಗ್ರಾಮದ ಭಾಗದಲ್ಲಿ ಒಂದು ಎಕ್ರೆ, ಗೋಪಾಲಪುರ ವಾರ್ಡ್‌ 2 ಎಕ್ರೆ)ಯಷ್ಟು ಮಾತ್ರ ಉಳಿದಿದೆ. ಪೂರ್ತಿ ಕೈಜಾರಿ ಹೋಗುವ ಮೊದಲು ಸಂಬಂಧಪಟ್ಟ ಆಡಳಿತ ಮತ್ತು ಇಲಾಖೆಗಳು ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಹಿಂದೆ ಮೇ ಕೊನೆಯವರೆಗೂ ಈ ಕೆರೆಯಲ್ಲಿ ನೀರು ತುಂಬಿಕೊಂಡಿದ್ದು 200 ಎಕ್ರೆ ಕೃಷಿ ಭೂಮಿಗೆ ಸುತ್ತಮುತ್ತಲಿನ ರೈತರು ಇದೇ ಕೆರೆಯ ನೀರನ್ನು ಉಪಯೋಗಿಸಿ ಹಿಂಗಾರು ಬೆಳೆ ಬೆಳೆಯುತ್ತಿದ್ದರು. ಇಂದು ಕೃಷಿ ಭೂಮಿಗೆ ನೀರಿನ ಕೊರತೆಯಿಂದಾಗಿ ಹಲವಾರು ಎಕ್ರೆ ಕೃಷಿ ಭೂಮಿ ಪಾಳುಬಿದ್ದಿದೆ. ಕೆಲವು ವರ್ಷದ ಹಿಂದೆ ಪಂಚಾಯತ್‌ ವತಿಯಿಂದ ಬಾವಿಯನ್ನು ನಿರ್ಮಿಸಲಾಗಿದ್ದು ಈ ಬಾವಿಯ ನೀರು ಗ್ರಾಮಕ್ಕೆ ಪೂರೈಕೆಯಾಗುತ್ತಿದೆ.

ವಾಕಿಂಗ್‌ ಟ್ರಾಫಿಕ್‌, ಉದ್ಯಾನವನ
ಇಲ್ಲಿನ ಗ್ರಾಮದ ಜನರಿಗೆ ಬಿಟ್ಟರೆ ಹೊರಗಿನವರಿಗೆ ಇಲ್ಲೊಂದು ಪೊಟ್ಟುಕರೆ ಇದೆ ಎಂಬುದೇ ಗೊತ್ತಿಲ್ಲ. ಹೂಳು ತುಂಬಿದ್ದರಿಂದ ಮೈದಾನದಂತಾಗಿದೆ. ಜನರಿಗೆ ತೊಂದರೆಯಾಗದ ರೀತಿಯಲ್ಲಿ ಆಳವಾಗಿ ಹೂಳು ತೆಗೆದು ಅಭಿವೃದ್ಧಿಪಡಿಸಿದರೆ ಪುತ್ತೂರು ಮತ್ತು ಕೆಳಾರ್ಕಳಬೆಟ್ಟು ಗ್ರಾಮದ ನೂರಾರು ಬಾವಿಯ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ಕೆರೆಯ ಸುತ್ತ ದಂಡೆಯನ್ನು ನಿರ್ಮಿಸಿ ವಾಕಿಂಗ್‌ ಟ್ರಾಫಿಕ್‌ ಮತ್ತು ಕುಳಿತುಕೊಳ್ಳಲು ಬೆಂಚುಗಳನ್ನು ಅಳವಡಿಸಿ ಅಭಿವೃದ್ಧಿ ಪಡಿಸಿದರೆ ಸಂಜೆ ಕಳೆಯಲು ಈ ಭಾಗದ ಜನರಿಗೆ ಉತ್ತಮ ಜಾಗ. ಈ ಕೆರೆಯಲ್ಲಿ ನೀರು ನಿಲ್ಲಿಸುವ ಕೆಲಸ ಮಾಡಿದರೆ ಸಮೀಪದ ನೂರಾರು ಬಾವಿಗಳಲ್ಲಿ ಸದಾ ನೀರು ತುಂಬಿರುತ್ತದೆ. ಇದನ್ನು ಕೆರೆಯಾಗಿಯೇ ಶಾಶ್ವತ ವಾಗಿ ಉಳಿಯಬೇಕು ಎನ್ನುವುದು ಗ್ರಾಮಸ್ಥರ ಬೇಡಿಕೆ.

ಬಾವಿಯಲ್ಲಿ ನೀರಿಲ್ಲ
ಇಲ್ಲಿರುವ ಪೊಟ್ಟುಕೆರೆಯನ್ನು ಅಭಿವೃದ್ಧಿ ಪಡಿಸುವಲ್ಲಿ ಯಾರೂ ಮುಂದಾಗಿಲ್ಲ. ರಾತ್ರಿ ವೇಳೆಯಲ್ಲಿ ಹೊರಗಿನಿಂದ ಬಂದು ಕಟ್ಟಡದ ತ್ಯಾಜ್ಯವನ್ನು ಇಲ್ಲಿ ಸುರಿಯುತ್ತಾರೆ. ಕೆರೆ ಅಭಿವೃದ್ಧಿ, ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ಹಿನ್ನೆಲೆಯಲ್ಲಿ ಪುರಾತನ ಕೆರೆಯನ್ನು ಉಳಿಸಬೇಕು ಎನ್ನುತ್ತಾರೆ ಸ್ಥಳೀಯರಾದ ರಿಚಾರ್ಡ್‌ ಕ್ರಾಸ್ತೋ ಅವರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.