Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

ಮಣಿಪಾಲ ಎಂಐಟಿ ಬಳಿ ಇಡೀ ದಿನ ವಾಹನಗಳ ಸಾಲು; ಪ್ರಯಾಣಿಕರು ಒಳಹೋಗಲು ಜಾಗವಿಲ್ಲ

Team Udayavani, Sep 22, 2024, 6:28 PM IST

12

ಉಡುಪಿ: ಬಸ್‌ತಂಗುದಾಣಗಳು ಇರುವುದೇ ಪ್ರಯಾಣಿಕರ ಉಪಯೋಗಕ್ಕೆ. ಆದರೆ ಕೆಲವೆಡೆ ತಂಗುದಾಣಗಳು ವಾಹನ ನಿಲ್ದಾಣಗಳಾಗುತ್ತಿದ್ದರೆ, ಇನ್ನುಕೆಲವು ತಂಗುದಾಣಗಳು ಉಪಯೋಗ ಶೂನ್ಯವಾಗುತ್ತಿದೆ.

ಮಣಿಪಾಲದ ಎಂಐಟಿ ಬಳಿ ಇರುವ ಬಸ್‌ ನಿಲ್ದಾಣದಲ್ಲಿ ವಾಹನಗಳನ್ನೇ ನಿಲ್ಲಿಸುವ ಕಾರಣ ಪ್ರಯಾಣಿಕರು ಮಳೆ-ಬಿಸಿಲಿನಲ್ಲಿಯೇ ನಿಲ್ಲುವಂತಾಗಿದೆ.
ಆಸ್ಪತ್ರೆಗೆ ಭೇಟಿ ನೀಡುವವರು, ಶಾಪಿಂಗ್‌ ಮಾಡುವವರು, ವಿದ್ಯಾರ್ಥಿಗಳು, ಸ್ಥಳೀಯ ನೌಕರರು ಇಲ್ಲಿಯೇ ವಾಹನಗಳನ್ನು ನಿಲ್ಲಿಸುವ ಘಟನೆ ದಿನನಿತ್ಯ ನಡೆಯುತ್ತಿದೆ. ಹಲವಾರು ಸಮಯದಿಂದ ಇಲ್ಲಿ ಈ ಸಮಸ್ಯೆ ಕಂಡುಬರುತ್ತಿದ್ದು, ಅನಂತರ ಇಲ್ಲಿ ಪೊಲೀಸರು ಎಚ್ಚರಿಕೆ ನೀಡುವ ಕೆಲಸ ನಡೆಸುತ್ತಿದ್ದರು. ಆದರೆ ಈಗ ಮತ್ತೆ ಇಲ್ಲಿ ನಿಯಮಾವಳಿ ಉಲ್ಲಂಘನೆ ಪುನರಾವರ್ತನೆಯಾಗುತ್ತಿದೆ.

ಬೆಳಗ್ಗಿನಿಂದ ರಾತ್ರಿಯವರೆಗೂ ಬಸ್‌ಸ್ಟಾಂಡ್‌ ಎದುರು ವಾಹನಗಳ ಸರದಿ ಸಾಲು ಕಂಡುಬರುತ್ತಿದ್ದು, ಬಸ್‌ಸ್ಟಾಂಡ್‌ ಒಳಗೆ ಹೋಗಲು ವಾಹನಗಳನ್ನು ಸರಿಸಿ ಹೋಗುವಂತಹ ಸನ್ನಿವೇಶ ಪ್ರಯಾಣಿಕರಿಗೆ ಎದುರಾಗಿದೆ.

ಸಿಂಡಿಕೇಟ್‌ ಸರ್ಕಲ್‌ ಬಳಿಯೂ ಇದೇ ಸ್ಥಿತಿ!
ಮಣಿಪಾಲದಿಂದ ಉಡುಪಿಯತ್ತ ತೆರಳುವಾಗ ಸಿಗುವ ಸಿಂಡಿಕೇಟ್‌ ಸರ್ಕಲ್‌ ಬಳಿಯ ಬಸ್‌ಸ್ಟಾಂಡ್‌ ಬಳಿ ಬಸ್‌ಗಳು ನಿಲ್ಲದೆ ಎದುರಿನ ಮನೋಹರ್‌ ವೈನ್‌ಶಾಪ್‌ ಬಳಿ ಬಸ್‌ಗಳನ್ನು ನಿಲ್ಲಿಸಲಾಗುತ್ತಿದೆ. ಪರಿಣಾಮ ಈ ಬಸ್‌ ತಂಗುದಾಣ ವಾಹನ ನಿಲ್ದಾಣವಾಗಿ ಬದಲಾಗಿದೆ. ತಂಗುದಾಣದ ಪಕ್ಕವೇ ಎರಡು ಹೊಟೇಲ್‌ಗ‌ಳಿದ್ದು, ಅಲ್ಲಿಗೆ ಬರುವ ಗ್ರಾಹಕರು ಇದರ ಎದುರು ಭಾಗ ಹಾಗೂ ದ್ವಿಚಕ್ರ ವಾಹನಗಳನ್ನು ಒಳಭಾಗದಲ್ಲಿ ನಿಲ್ಲಿಸಲಾಗುತ್ತಿದೆ. ಮಳೆ ಸುರಿಯುವ ವೇಳೆ ಹಲವು ಮಂದಿ ದ್ವಿಚಕ್ರ ಸಹಿತ ತಂಗುದಾಣದ ಒಳಪ್ರವೇಶಿಸಿ ವಿಶ್ರಾಂತಿ ಪಡೆಯುವುದೂ ಇದೆ!

ಕಾಮಗಾರಿ ಅವಾಂತರ
ಹೆದ್ದಾರಿ ಕಾಮಗಾರಿ ವೇಳೆ ಬಸ್‌ಸ್ಟಾಂಡ್‌ಗಳನ್ನು ಕೆಲವು ಬಸ್‌ಸ್ಟಾಂಡ್‌ಗಳ ಸ್ಥಳವನ್ನು ಬದಲಾಯಿಸಿದ ಕಾರಣ ಬಸ್‌ಗಳು ಆ ತಂಗುದಾಣದ ಎದುರು ನಿಲ್ಲದೆ ಜನರು ಇದ್ದಲ್ಲಿ ಮಾತ್ರ ಬಸ್‌ ನಿಲ್ಲಿಸುತ್ತಿದ್ದಾರೆ. ಈ ಬಗ್ಗೆ ಪ್ರಯಾಣಿಕರು ಹಾಗೂ ಬಸ್‌ ನಿರ್ವಾಹಕರೊಂದಿಗೆ ಹಲವಾರು ಬಾರಿ ಜಗಳ ನಡೆಯುವುದೂ ಉಂಟು. ಈ ಬಗ್ಗೆ ಬಸ್‌ ಮಾಲಕರು ಸಂಬಂಧಪಟ್ಟ ಚಾಲಕರು ಹಾಗೂ ನಿರ್ವಾಹಕರಿಗೆ ಸ್ಪಷ್ಟ ಸೂಚನೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸೂಕ್ತ ಕ್ರಮ
ಬಸ್‌ಸ್ಟಾಂಡ್‌ ಇರುವ ಜಾಗದಲ್ಲಿಯೇ ಬಸ್‌ಗಳು ನಿಲ್ಲಬೇಕೆಂಬುವುದು ನಿಯಮ. ಆದರೆ ಕೆಲವೆಡೆ ತಂಗುದಾಣದ ಎದುರು ವಾಹನಗಳನ್ನು ನಿಲ್ಲಿಸುತ್ತಿರುವ ಘಟನೆಗಳು ನಡೆಯುತ್ತಿವೆ. ಮುಂದೆ ಈ ಘಟನೆಗಳು ನಡೆದರೆ ಆ ವಾಹನಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಬಸ್‌ ಚಾಲಕರು ಕೂಡ ತಮಗಿಷ್ಟ ಬಂದಲ್ಲಿ ಬಸ್‌ ನಿಲ್ಲಿಸದೆ ತಂಗುದಾಣದಲ್ಲಿಯೇ ಪ್ರಯಾಣಿಕರನ್ನು ಹತ್ತಿ ಇಳಿಸುವ ಕೆಲಸ ಮಾಡಬೇಕು.
-ದೇವರಾಜ್‌ ಟಿ.ವಿ.,ಠಾಣಾಧಿಕಾರಿ, ಮಣಿಪಾಲ ಪೊಲೀಸ್‌ ಠಾಣೆ

ರಸ್ತೆ ಮಧ್ಯದಲ್ಲೇ ಬಸ್‌ಗಳ ನಿಲುಗಡೆ
ಬಸ್‌ಸ್ಟಾಂಡ್‌ಗಳ ಈ ಅವ್ಯವಸ್ಥೆಯಿಂದಾಗಿ ಬಸ್‌ಗಳು ರಸ್ತೆಯ ಮಧ್ಯದಲ್ಲಿಯೇ ನಿಲ್ಲುತ್ತಿವೆ. ಪರಿಣಾಮ ಎಲ್ಲೆಲ್ಲೂ ರಸ್ತೆ ಬ್ಲಾಕ್‌ ಆಗುತ್ತಿದೆ. ಮಣಿಪಾಲದಿಂದ ಎಂಐಟಿ ಬಸ್‌ ತಂಗುದಾಣದವರೆಗೆ ಒಂದು ಕಡೆಯಾದರೆ ಸರ್ಕಲ್‌ನ ಮತ್ತೂಂದು ಭಾಗಕ್ಕೆ ತೆರಳುವ ವಾಹನಗಳ ಸಾಲು ಮತ್ತೂಂದೆಡೆ ಕಂಡುಬರುತ್ತಿದೆ. ಈ ಬಗ್ಗೆ ಬಸ್‌ ಚಾಲಕರಿಗೆ ಎಚ್ಚರಿಕೆ ನೀಡಿದರೆ ಬಸ್‌ಸ್ಟಾಂಡ್‌ ಎದುರು ನಿಲ್ಲಿಸಿರುವ ವಾಹನಗಳನ್ನು ತೆರವು ಮಾಡುವಂತೆ ಸೂಚಿಸುತ್ತಾರೆ. ಬಸ್‌ ತಂಗುದಾಣಗಳ ಈ ಅವಾಂತರದಿಂದಾಗಿ ಕೆಲವೊಂದು ಬಾರಿ ಪ್ರಯಾಣಿಕರಿಗೆ ಬಸ್‌ಗಳು ತಪ್ಪಿ ಹೋದಂತಹ ಹಲವಾರು ಘಟನೆಗಳು ನಡೆದಿವೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

ಟಾಪ್ ನ್ಯೂಸ್

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

puttige

Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.