ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಉಡುಪಿ ಜಿಲ್ಲಾ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆ

Team Udayavani, Mar 30, 2023, 6:45 AM IST

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಉಡುಪಿ: ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಸಾಲ ವಿತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. 3,049 ಮಂದಿಗೆ ಸಾಲ ನೀಡುವ ಗುರಿ ಇದ್ದು, 4,550 ಮಂದಿಗೆ ಸಾಲ ವಿತರಣೆ ಮಾಡಿ, ಶೇ. 149ರಷ್ಟು ಸಾಧನೆ ಮಾಡಲಾಗಿದೆ. ಆದರೂ ಬ್ಯಾಂಕ್‌ಗಳಲ್ಲಿ ಕೆಲವು ಅರ್ಜಿ ಬಾಕಿಯಿದ್ದು, ಕೂಡಲೇ ವಿಲೇವಾರಿ ಮಾಡುವಂತೆ ಜಿ.ಪಂ. ಸಿಇಒ ಪ್ರಸನ್ನ ಎಚ್‌. ಸೂಚಿಸಿದರು.

ಜಿ.ಪಂ. ಕಚೇರಿಯ ಸಭಾಂಗಣದಲ್ಲಿ ಬುಧವಾರ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಿ ಯೋಜನೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ 180 ಮಂದಿಗೆ ಸಾಲ ನೀಡುವ ಗುರಿ ಇದ್ದು, 472 ಮಂದಿಗೆ ಸಾಲ ವಿತರಿಸುವ ಮೂಲಕ ಶೇ. 262 ಸಾಧನೆ ಮಾಡಿ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ. ವಿವಿಧ ಯೋಜನೆಗಳಲ್ಲಿ ಸಾಲಕ್ಕಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ತಿರಸ್ಕರಿಸದೆ, ತಾಂತ್ರಿಕ ಕಾರಣಗಳ ಬಗ್ಗೆ ಬ್ಯಾಂಕ್‌ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಅರ್ಹರಿಗೆ ಸಾಲವನ್ನು ವಿತರಿಸುವಂತೆ ತಿಳಿಸಿದರು.

ಸಾಲ ನೀಡಿಕೆ ಪ್ರಮಾಣ ಹೆಚ್ಚಳ
ತ್ತೈಮಾಸಿಕ ವರದಿ ನೀಡಿದ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಡಿಜಿಎಂ ಲೀನಾ ಪಿಂಟೋ, ಜಿಲ್ಲೆಯಲ್ಲಿ ಕಳೆದ ಡಿಸೆಂಬರ್‌ ಹೋಲಿಸಿದಲ್ಲಿ ಸಾಲ ನೀಡುವ ಪ್ರಮಾಣ ಶೇ. 9.58 ಹೆಚ್ಚಳವಾಗಿದ್ದು, 15,964 ಕೋ.ರೂ. ಸಾಲ ವಿತರಣೆ ಹಾಗೂ 34,120 ಕೋ.ರೂ. ಠೇವಣಿ ಸಂಗ್ರಹಿಸಲಾಗಿದೆ. ದುರ್ಬಲ ವರ್ಗಕ್ಕೆ ಸಾಲ ವಿತರಿಸಲು ವಿಶೇಷ ಒತ್ತು ನೀಡಿ, 1,30,277 ಫಲಾನುಭವಿಗಳಿಗೆ 1,855 ಕೋ.ರೂ. ವಿತರಿಸಲಾಗಿದೆ. ಎಲ್ಲ ಬ್ಯಾಂಕ್‌ಗಳು ಮಾರ್ಚ್‌ ಅಂತ್ಯಕ್ಕೆ ನಿಗದಿತ ಗುರಿಯನ್ನು ಸಾಧಿಸುವಂತೆ ತಿಳಿಸಿದರು.

ಆರ್‌ಬಿಐ ಕಾರ್ಯನಿರ್ವಾಹಕ ಅಧಿಕಾರಿ ಅಲೋಕ್‌ ಸಿನ್ಹಾ ಮಾತನಾಡಿ, ಆನ್‌ಲೈನ್‌ ಬ್ಯಾಂಕಿಂಗ್‌ ಮತ್ತು ಬ್ಯಾಂಕ್‌ ಹೆಸರಿನಲ್ಲಿ ಆಗುತ್ತಿರುವ ಮೋಸದ ಬಗ್ಗೆ ಗ್ರಾಹಕರ ಜಾಗೃತಿ ಕಾರ್ಯ ನಿರಂತರ ಆಗುತ್ತಿದೆ. ಚುನಾವಣೆ ಪ್ರಯುಕ್ತ ಬ್ಯಾಂಕ್‌ ವಹಿವಾಟುಗಳ ನಿರ್ವಹಣೆ ಕುರಿತಂತೆ ಕೇಂದ್ರ ಚುನಾವಣ ಆಯೋಗ ಸೂಚಿಸಿರುವ ಮಾರ್ಗಸೂಚಿಯನ್ನು ಪಾಲಿಸುವಂತೆ ಹಾಗೂ ಆಯೋಗ ಕೋರುವ ಅಗತ್ಯ ಮಾಹಿತಿಗಳನ್ನು ನೀಡುವಂತೆ ಬ್ಯಾಂಕ್‌ಗಳಿಗೆ ಸೂಚಿಸಿದರು.

ನಬಾರ್ಡ್‌ನ ಡಿಡಿಎಂ ಸಂಗೀತಾ ಖರ್ತಾ, ಯೂನಿಯನ್‌ ಬ್ಯಾಂಕ್‌ನ ಪ್ರಾದೇಶಿಕ ಮ್ಯಾನೇಜರ್‌ ಡಾ| ವಾಸಪ್ಪ, ಎಸ್‌ಸಿಡಿಸಿಸಿ ಬ್ಯಾಂಕ್‌ ಸ. ಜನರಲ್‌ ಮ್ಯಾನೇಜರ್‌ ನಿತ್ಯಾನಂದ ಉಪಸ್ಥಿತರಿದ್ದರು. ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಪಿ.ಎಂ. ಪಿಂಜಾರ ನಿರೂಪಿಸಿದರು.
ಜಿಲ್ಲೆಯ ವಿವಿಧ ಬ್ಯಾಂಕ್‌, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

13,878 ಕೋ.ರೂ. ಸಾಲ ಗುರಿ
ಉಡುಪಿ, ಮಾ. 29: ಜಿಲ್ಲೆಯಲ್ಲಿ ಕೇಂದ್ರ – ರಾಜ್ಯ ಸರಕಾರಗಳ ವಿವಿಧ ಯೋಜನೆ ಸೇರಿದಂತೆ ಆದ್ಯತೆ, ಆದ್ಯತೇತರ ವಲಯಕ್ಕೆ 2023-24ನೇ ಸಾಲಿನಲ್ಲಿ ವಿವಿಧ ಬ್ಯಾಂಕ್‌ಗಳ ಮೂಲಕ 13,878 ಕೋ.ರೂ. ಸಾಲ ವಿತರಣೆಯ ಗುರಿಯನ್ನು ಹೊಂದಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನೆ ಸಭೆಯಲ್ಲಿ 2023-24ನೇ ಸಾಲಿನ ಕ್ರೆಡಿಟ್‌ ಪ್ಲಾನ್‌ ಪುಸ್ತಕವನ್ನು ಜಿ.ಪಂ. ಸಿಇಒ ಪ್ರಸನ್ನ ಎಚ್‌. ಬಿಡುಗಡೆ ಮಾಡಿದರು. ಎ. 1ರಿಂದ ಹೊಸ ಹಣಕಾಸು ವರ್ಷ ಆರಂಭವಾಗುವುದರಿಂದ ರಾಜ್ಯ – ಕೇಂದ್ರ ಸರಕಾರಿ ಯೋಜನೆಗಳನ್ನು ಫ‌ಲಾನು  ಭವಿಗಳಿಗೆ ನಿರ್ದಿಷ್ಟ ಸಮಯ ದಲ್ಲಿ ತಲುಪಿಸಬೇಕು. ಯಾವುದೇ ಅರ್ಜಿಯನ್ನು ಸಕಾರಣವಿಲ್ಲದೆ ತಿರಸ್ಕರಿಸುವುದು ಅಥವಾ ಬ್ಯಾಂಕ್‌ನಲ್ಲೇ ಇರಿಸಿಕೊಳ್ಳುವುದನ್ನು ಮಾಡಬಾರದು ಎಂದು ಸೂಚನೆ ನೀಡಿದರು.

ವಲಯವಾರು ಸಾಲ ವಿವರ
ಕೃಷಿ ಸಾಲಕ್ಕೆ 2,446.39 ಕೋ.ರೂ., ಕೃಷಿ ಮೂಲ ಸೌಕರ್ಯಕ್ಕೆ 330.39 ಕೋ.ರೂ., ಕೃಷಿ ಸಂಬಂಧಿತ ಚಟುವಟಿಕೆಗೆ 2,725.79 ಕೋ.ರೂ. ಸೇರಿ ಒಟ್ಟು ಕೃಷಿ ಕ್ಷೇತ್ರದಲ್ಲಿ ಸಾಲಕ್ಕಾಗಿ 5,502 ಕೋ.ರೂ. ಮೀಸಲಿ ಡಲಾಗಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕ ವಲಯಕ್ಕೆ 3,444.72 ಕೋ.ರೂ., ಶಿಕ್ಷಣ ಕ್ಷೇತ್ರಕ್ಕೆ 190.06 ಕೋ.ರೂ., ವಸತಿ ಕ್ಷೇತ್ರಕ್ಕೆ 1,063 ಕೋ.ರೂ., ರಫ್ತು ವಿಭಾಗಕ್ಕೆ 324.28 ಕೋ.ರೂ., ಸಾಮಾಜಿಕ ಮೂಲ ಸೌಕರ್ಯಕ್ಕೆ 58.19 ಕೋ.ರೂ., ನವೀಕರಿಸ ಬಹುದಾದ ಇಂಧನ ವಲಯಕ್ಕೆ 49.87 ಕೋ.ರೂ. ಸೇರಿದಂತೆ ಆದ್ಯತ ವಲಯಕ್ಕೆ ಒಟ್ಟು 10,644.72 ಕೋ.ರೂ. ಮೀಸಲಿಡಲಾಗಿದೆ. ಬಡವರಿಗೆ ಆದ್ಯತ ವಲಯದಲ್ಲಿ ಸಾಲ ಸೌಲಭ್ಯಕ್ಕೆ 809.60 ಕೋ.ರೂ. ಹಾಗೂ ಆದ್ಯತೇತರ ವಲಯಕ್ಕೆ 3,233.53 ಕೋ.ರೂ. ಮೀಸಲಿಡಲಾಗಿದೆ.
ವಿವಿಧ ವಲಯಗಳ ಒಟ್ಟು 4,05,308 ಖಾತೆಗಳಿಗೆ ಸಾಲ ಸೌಲಭ್ಯ ನೀಡುವ ಅಂದಾಜು ಮಾಡಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.