ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

ಅಪಘಾತ ಸಂಭವಿಸಿದರೆ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

Team Udayavani, Oct 11, 2024, 3:25 PM IST

8

ಮಣಿಪಾಲ: ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳು ಸಂಭವಿಸು ತ್ತಿವೆ. ಈ ಸಂಬಂಧ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾ ರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಮತ್ತಿತರ ಪ್ರಕರಣಗಳನ್ನು ದಾಖಲಿಸ ಬೇಕು. ನ.10ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಇಂದ್ರಾಳಿ ಮೇಲ್ಸೇತುವೆ ಕಾಮ ಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದ್ರಾಳಿ ಮೇಲ್ಸೇತುವೆ ರಸ್ತೆ ಕಾಮಗಾರಿ ವಿಳಂಬದಿಂದ ಟ್ರಾಫಿಕ್‌ ಸಮಸ್ಯೆಯಾಗಿ ಎರಡು ವರ್ಷಗಳಿಂದ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿ, ಮರಣ ಹೊಂದಿರುತ್ತಾರೆ. ಇದಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆ ದಾರರು ಕಾರಣವಾಗಿದ್ದು, ರಸ್ತೆ ಅಪಘಾತಗಳಿಗೆ ಕಾರಣರಾದ ರೈಲ್ವೆ ಅಧಿಕಾರಿಗಳು, ರಾ.ಹೆ. ಪ್ರಾಧಿಕಾರದ ಅಭಿಯಂತರು ಹಾಗೂ ಗುತ್ತಿಗೆದಾರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ನಿರ್ದೇಶಿಸಿದರು.

ಕಾಮಗಾರಿ ವಿಳಂಬದಿಂದ 2023ರ 8 ಅಪಘಾತ ಪ್ರಕರಣದಲ್ಲಿ ಒಬ್ಬ ಮೃತಪಟ್ಟರೆ, 7ರಲ್ಲಿ ತೀವ್ರ ತರಹದ ಗಾಯ ಹಾಗೂ ಸಾಧಾರಣ ಗಾಯವಾಗಿರುತ್ತದೆ. 2024ರಲ್ಲಿ ಸಂಭವಿಸಿದ 10 ಅಪಘಾತದಲ್ಲಿ ಇಬ್ಬರು ಮರಣ ಹೊಂದಿ, 10 ಮಂದಿ ಗಾಯಗೊಂಡಿದ್ದರು. ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಬೇಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ್ದರಿಂದ ಸೂಕ್ತ ಕ್ರಮಕ್ಕಾಗಿ ಕೇಂದ್ರ ಸಚಿವಾಲಯದ ಕಾರ್ಯಾಲಯಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ 2018-19ರಲ್ಲಿ ಆರಂಭವಾಗಿದೆ. ಅಧಿ ಕಾರಿಗಳ ನಿರ್ಲಕ್ಷ್ಯ, ಸಮನ್ವಯದ ಕೊರತೆಯಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ ಎಂದು ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ| ಅರುಣ್‌ ಕೆ. ಮಾತನಾಡಿ, ಕಾಮಗಾರಿಯ ವಿಳಂಬದ ಬಗ್ಗೆ ಅನೇಕ ಸಂಘ-ಸಂಸ್ಥೆಗಳು, ಸಾರ್ವನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಜಿಲ್ಲಾಡಳಿತವೇ ಉತ್ತರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳದಿರುವುದು ಇದಕ್ಕೆ ಕಾರಣ. ರಸ್ತೆ ಅಪಘಾತದಿಂದ ಮರಣ ಹೊಂದಿದ, ಗಾಯಗೊಂಡಿರುವವರು ನಿಮ್ಮ ಕುಟುಂಬದವರಾಗಿದ್ದರೆ ನೀವು ಸಹಿಸುತ್ತಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಇತ್ತೀಚೆಗಿನ ಅಪಘಾತಗಳಿಗೆ ಸಂಬಂಧಿಸಿ ಅಧಿಕಾರಿಗಳನ್ನು ಬಂಧಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕೊಂಕಣ ರೈಲ್ವೆ ಸೀ. ಎಂಜಿ ನಿಯರ್‌ ಗೋಕುಲ್‌ದಾಸ್‌, ಶೃಂಗೇರಿ- ಚಿಕ್ಕಮಗಳೂರು ರಾ.ಹೆ. ವಿಭಾಗದ ಸ. ಕಾರ್ಯಪಾಲಕ ಅಭಿಯಂತ ಮಂಜುನಾಥ್‌, ವಾರ್ತಾಧಿಕಾರಿ ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

11-kemmannu

ಕೆಮ್ಮಣ್ಣು: ಗಣಪತಿ ಸಹಕಾರಿ ವ್ಯವಸ್ಥಾಪಕ ಸಂಘ ʼನಿʼ -ಶತಾಭಿವಂದನಂʼ

7

Udupi: ವನ್ಯಜೀವಿ, ಪರಿಸರ ಪ್ರೀತಿಗೆ ಕಾರಂತರೇ ಪ್ರೇರಣೆ

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

17(1)

Uchila ದಸರಾ: ಪಾರ್ಕಿಂಗ್‌, ಟ್ರಾಫಿಕ್‌ ವ್ಯವಸ್ಥೆ ಸಿದ್ಧತೆ ಪೂರ್ಣ

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.