ಇಂದು ಪಿಯುಸಿ ಇಂಗ್ಲಿಷ್‌ ಪರೀಕ್ಷೆ; ವಿವಿಧ ತಾಲೂಕಿನಲ್ಲಿ ಸಿದ್ಧತೆ ಪೂರ್ಣ


Team Udayavani, Jun 18, 2020, 5:00 AM IST

ಇಂದು ಪಿಯುಸಿ ಇಂಗ್ಲಿಷ್‌ ಪರೀಕ್ಷೆ; ವಿವಿಧ ತಾಲೂಕಿನಲ್ಲಿ ಸಿದ್ಧತೆ ಪೂರ್ಣ

ಉಡುಪಿ/ ಕುಂದಾಪುರ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ. 18ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 27 ಪರೀಕ್ಷಾ  ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 13,563 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿ ರುತ್ತಾರೆ. 6,414 ಬಾಲಕರು, 7,149 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳನ್ನು ಕೋವಿಡ್‌ ಸೋಂಕು ಲಕ್ಷಣಗಳನ್ನು ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳಗ್ಗೆ 9.00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಇರುವಂತೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 69 ಮಾರ್ಗ ಗಳಲ್ಲಿ 91 ಕೆ.ಎಸ್‌.ಆರ್‌.ಟಿ. ಬಸ್‌ಗಳನ್ನು ಬಳಸಲಾಗುತ್ತಿದೆ. ಈ ಬಸ್‌ಗಳಲ್ಲಿ ಪ್ರತಿ ಮಾರ್ಗದಲ್ಲಿ ಓರ್ವ ಉಪನ್ಯಾಸಕ ಮಾರ್ಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಹಾಗೂ ಪ್ರತಿ ತಾಲೂಕಿನಲ್ಲಿ 04 ಜನ ಪ್ರಾಂಶುಪಾಲರು ನೋಡಲ್‌ ಅಧಿಕಾರಿಗಳಾಗಿ ಬಸ್‌ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ. ಕುಗ್ರಾಮ ಹಾಗೂ ದೂರದ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುತ್ತಿರುವ ವಿದ್ಯಾರ್ಥಿ ಗಳಿಗೆ ಬಸ್‌ ಸೌಕರ್ಯ ಸಾಧ್ಯವಾಗದಿದ್ದರೆ ಅಥವಾ ಬಸ್‌ ತಪ್ಪಿದರೆ ಅಂತಹ ವಿದ್ಯಾರ್ಥಿಗಳನ್ನು ಸರಕಾರಿ ವಾಹನದಲ್ಲಿ ಕರೆದುಕೊಂಡು ಬರಲು ಎಲ್ಲ ತಾ|ಗಳಲ್ಲಿ ಸರಕಾರಿ ಕಚೇರಿಯ ವಾಹನಗಳನ್ನು ಬಳಸಿಕೊಳ್ಳಲಾಗುತ್ತದೆ.

ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಿಂದ ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ 45 ವಿಶೇಷ ಬಸ್‌ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡ ಲಾಗಿದೆ. ಪ.ಪೂ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಯಾಯ ಪ.ಪೂ. ಕಾಲೇಜಿನ ಮುಖಾಂತರ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ್ದು, ಸ್ವಂತ, ಖಾಸಗಿ ವಾಹನದಲ್ಲಿ ಬರುವ ವಿದ್ಯಾರ್ಥಿಗಳು ಹೊರತುಪಡಿಸಿ, ಬಾಕಿ ಅವಶ್ಯವಿರುವ ಉಳಿದ ಎಲ್ಲರಿಗೂ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆ 163 ಆಗಿದ್ದು, ಉಡುಪಿ ಜಿಲ್ಲೆಯಿಂದ ಹೊರ ಜಿಲ್ಲೆಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ 1344 ಇರುತ್ತದೆ.

ಯಾವೆಲ್ಲ ರೂಟ್‌ಗಳು?
ಕುಂದಾಪುರ – ಬೈಂದೂರು, ಗೋಳಿಹೊಳೆ – ಕುಂದಾಪುರ, ಉಪ್ಪುಂದ – ನಾವುಂದ, ಗೋಳಿಯಂಗಡಿ- ಬಾರ್ಕೂರು, ಭಟ್ಕಳ- ಬೈಂದೂರು, ಕೊಲ್ಲೂರು – ವಂಡ್ಸೆ, ಹೊಸಂಗಡಿ – ಬಿದ್ಕಲ್‌ಕಟ್ಟೆ, ಹಳ್ಳಿಹೊಳೆ – ಬಿದ್ಕಲ್‌ಕಟ್ಟೆ, ಶೇಡಿಮನೆ- ಬಿದ್ಕಲ್‌ಕಟ್ಟೆ, ಬೇಳೂರು – ಕೋಟೇಶ್ವರ, ಕೊಲ್ಲೂರು – ಕುಂದಾಪುರ, ಕುಂದಾಪುರ – ಬ್ರಹ್ಮಾವರ, ಸಿದ್ದಾಪುರ – ಬ್ರಹ್ಮಾವರ, ಕುಂದಾಪುರ- ಉಡುಪಿ, ಗಂಗೊಳ್ಳಿ – ಕುಂದಾಪುರ ಮಾರ್ಗದಲ್ಲಿ ಬಸ್‌ಗಳು ಸಂಚರಿಸಲಿವೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.