Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ


Team Udayavani, Oct 9, 2024, 1:13 AM IST

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

ಬ್ರಹ್ಮಾವರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪೂರಕವಾಗಿ ಸಂಸ್ಕಾರಯುತ, ರಾಷ್ಟ್ರನಿಷ್ಠ ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣವಾಗುತ್ತಿರುವ ರಾಷ್ಟ್ರೋತ್ಥಾನ ಪರಿಷತ್‌ನಿಂದ ಜಿಲ್ಲೆಯ ಚೇರ್ಕಾಡಿಯಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಪ್ರಾರಂಭವಾಗುತ್ತಿದೆ.

ಶಾಲಾ ಕಟ್ಟಡ ನಿರ್ಮಾಣ ಭರದಿಂದ ಸಾಗುತ್ತಿದ್ದು, ಅ. 12ರ ವಿಜಯದಶಮಿಯಿಂದ ಇಲ್ಲಿನ ಎಸ್‌ಎಂಎಸ್‌ ಬಳಿಯ ಮಧುವನ ಕಾಂಪ್ಲೆಕ್ಸ್‌ನಲ್ಲಿರುವ ಕಾರ್ಯಾಲಯದಲ್ಲಿ ಪ್ರಿ ಕೆಜಿಯಿಂದ 6ನೇ ತರಗತಿ ವರೆಗಿನ ಪ್ರವೇಶ ಪ್ರಕ್ರಿಯೆ ನಡೆಯಲಿದೆ. 2025ರ ಮೇಯಲ್ಲಿ ಶಾಲಾರಂಭಗೊಳ್ಳಲಿದೆ.

ಅತ್ಯಾಧುನಿಕ ಮೂಲಸೌಕರ್ಯ
ಪ್ರಶಾಂತ ಹಾಗೂ ನಿರ್ಮಲ ವಾತಾವರಣ, ಸುರಕ್ಷಿತ ಮತ್ತು ಶಿಕ್ಷಣ ಸ್ನೇಹಿ ಪರಿಸರ, ವಿಶಾಲವಾದ ಸುಸಜ್ಜಿತ, ಅತ್ಯಾಧುನಿಕ ತಂತ್ರಜ್ಞಾನಾಧಾರಿತ ತರಗತಿ ಕೊಠಡಿ, ಸುವ್ಯವಸ್ಥಿತವಾದ ಪ್ರಯೋಗಾಲಯ, ಸುಸಜ್ಜಿತ ಗ್ರಂಥಾಲಯ, ಹೊರಾಂಗಣ ಮತ್ತು ಒಳಾಂಗಣ ಆಟದ ಮೈದಾನ- ವಾಲಿಬಾಲ್‌, ತ್ರೋಬಾಲ್‌, ಆ್ಯತ್ಲೆಟಿಕ್ಸ್‌, ಟೇಬಲ್‌ ಟೆನಿಸ್‌, ಬ್ಯಾಡ್ಮಿಂಟನ್‌, ಪುಟಾಣಿಗಳಿಗೆ ಪೂರಕವಾದ ಕ್ರೀಡಾ ವಲಯ ಮತ್ತು ಮರಳು ದಿಣ್ಣೆಯ ಬಾಲಕ್ರೀಡಾಂಗಣ ವ್ಯವಸ್ಥೆ, ಮಕ್ಕಳಿಗೆ ಪ್ರಕೃತಿಯಲ್ಲಿ ಕಲಿಯಲು ಅನುಕೂಲವಾಗುವಂತೆ ತೋಟಗಾರಿಕೆ, ನರ್ಸರಿ ವ್ಯವಸ್ಥೆ, ದೃಶ್ಯ ಮತ್ತು ಪ್ರದರ್ಶನ, ಕಲೆ-ಸಂಗೀತ, ನಾಟಕ, ನೃತ್ಯ ಮತ್ತು ಯೋಗ ಶಾಲೆ, ಸುರಕ್ಷತೆಗಾಗಿ ಜಿಪಿಎಸ್‌ ಅಳವಡಿಸಿದ ಸುಸಜ್ಜಿತ ಸಾರಿಗೆ ವ್ಯವಸ್ಥೆ ಇದೆ. ಉಡುಪಿ, ಮಣಿಪಾಲ, ಕುಂದಾಪುರ, ಮೂಲ್ಕಿ, ಹೆಬ್ರಿ, ಮಲ್ಪೆ ಮತ್ತು ಕಾರ್ಕಳದಿಂದ ಶಾಲಾ ಬಸ್ಸಿನ ವ್ಯವಸ್ಥೆ ಲಭ್ಯವಿದೆ.

ವಿಶೇಷತೆಗಳು
ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್‌ಇಪಿ) ಆಧಾರಿತ ಪಠ್ಯಕ್ರಮ, ಶಿಶು/ವಿದ್ಯಾರ್ಥಿ ಕೇಂದ್ರಿತ ಪಠ್ಯವಿಧಾನ, ಅರ್ಹ, ತರಬೇತಿ ಹೊಂದಿದ ಮತ್ತು ಬದ್ಧತೆ ಇರುವ ಅಧ್ಯಾಪಕ ವೃಂದ, ವಿದ್ಯಾರ್ಥಿ-ಶಿಕ್ಷಕರ ಅನುಕೂಲಕರ ಅನುಪಾತ ಹೊಂದಿತ ತರಗತಿ ವ್ಯವಸ್ಥೆ, ವೈಯಕ್ತಿಕ ಕಾಳಜಿ ಮತ್ತು ಮಾರ್ಗದರ್ಶನ, ಸಲಹೆ ಮತ್ತು ಆಪ್ತ ಸಮಾಲೋಚನೆ, ಪೋಷಕ ಸಮುದಾಯದೊಂದಿಗೆ ಉತ್ತಮವಾದ ಬಾಂಧವ್ಯ, ರಚನಾತ್ಮಕ ಸಹಪಠ್ಯ ಚಟುವಟಿಕೆಗಳು, ಕ್ರೀಡೆ ಮತ್ತು ವೃತ್ತಿಪರ ತರಬೇತಿ ಇರುತ್ತದೆ.

ಪಂಚಮುಖಿ ಶಿಕ್ಷಣ
ಮಕ್ಕಳ ಸಮಗ್ರ ವಿಕಾಸಕ್ಕಾಗಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕವೆನ್ನುವ ಪಂಚಮುಖಿ ಶಿಕ್ಷಣ ದೊರೆಯುವುದು ಸಂಸ್ಥೆಯ ವಿಶೇಷ. ಮಾಹಿತಿಗೆ ಇ-ಮೇಲ್‌: [email protected] ವೆಬ್‌ಸೈಟ್‌ : http://www.rvkcbse.in ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಏನಿದು ರಾಷ್ಟ್ರೋತ್ಥಾನ ಪರಿಷತ್‌ ?
ಸ್ವಸ್ಥ-ಸುಸ್ಥಿರ ಸಮಾಜ ನಿರ್ಮಾಣದ ಲಕ್ಷ್ಯವನ್ನಿಟ್ಟುಕೊಂಡು 1965ರಿಂದ ಕರ್ನಾಟಕದಲ್ಲಿ ಸಕ್ರಿಯವಾಗಿರುವ ಪ್ರಮುಖ ಸ್ವಯಂಸೇವಾ ಸಂಸ್ಥೆಯಾಗಿದೆ. ಭಾರತದ ನೈಜ ಇತಿಹಾಸ, ಸಂಸ್ಕೃತಿ-ಪರಂಪರೆಗಳನ್ನು ಮತ್ತೆ ಜಾಗೃತಗೊಳಿಸಲು ರಾಷ್ಟ್ರೋತ್ಥಾನ ಸಾಹಿತ್ಯದೊಂದಿಗೆ ಪ್ರಾರಂಭವಾದ ಪರಿಷತ್‌ನ ಸಮಾಜಕಾರ್ಯ ಇಂದು ಸಾಹಿತ್ಯ, ಶಿಕ್ಷಣ, ಆರೋಗ್ಯ, ಸೇವೆ ಎಂಬ ನಾಲ್ಕು ಆಯಾಮಗಳೊಂದಿಗೆ ರಾಜ್ಯಾದ್ಯಂತ ಸಕ್ರಿಯವಾಗಿದ್ದು, 18ಕ್ಕೂ ಹೆಚ್ಚು ಪ್ರಕಲ್ಪಗಳು ಹಾಗೂ 60ಕ್ಕೂ ಮಿಕ್ಕಿ ಚಟುವಟಿಕೆಗಳಾಗಿ ಕವಲೊಡೆದಿದೆ. ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಿಬಿಎಸ್‌ಇ ಶಾಲೆಗಳ ಸಮೂಹವಾಗಿದೆ. 2005ರಲ್ಲಿ ಮೊದಲ ಶಾಲೆ ಪ್ರಾರಂಭಗೊಂಡರೆ, ಪ್ರಸ್ತುತ ಕರ್ನಾಟಕದಾದ್ಯಂತ 17 ಕಡೆಗಳಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ

Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Theft Case: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.