Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ
Team Udayavani, Jul 16, 2024, 5:23 PM IST
ಕಟಪಾಡಿ:
ಕಾಪು: ಉಡುಪಿಯಿಂದ ಮಂಗಳೂರಿನತ್ತ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕರ್ತವ್ಯ ನಿರತ ಪೊಲೀಸ್ ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಉಡುಪಿಯಿಂದ ಬರುತ್ತಿದ್ದ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಟ್ರಾಫಿಕ್ ಕಾರಣಕ್ಕಾಗಿ ನಿಲ್ಲಿಸಿದ್ದು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಅದರ ಎದುರು ನಿಂತಿದ್ದ ನಿಸ್ಸಾನ್ ಮತ್ತು ಇಕೋ ಸ್ಪೋರ್ಟ್ ಕಾರಿಗೆ ಢಿಕ್ಕಿ ಹೊಡೆದಿದೆ. ಆ ಎರಡೂ ಕಾರುಗಳು ಮುಂದೆ ಚಲಿಸಿ, ಸಂಚಾರ ನಿಯಂತ್ರಿಸಲು ನಿಂತಿದ್ದ ಪೊಲೀಸ್ ಸಿಬಂದಿಗೆ ಢಿಕ್ಕಿ ಹೊಡೆದಿದೆ.
ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಟಪಾಡಿ ಹೊರ ಠಾಣಾ ಸಿಬಂದಿ ರಾಮ ನಾಯಕ್ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕಾರಿನಲ್ಲಿದ್ದ ಸುಶಾಂತ್, ವಿಷ್ಣು, ಆಶಿಕಾ, ಹರ್ಷಿ ಸೇರಿದಂತೆ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆಯ ವೇಳೆ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಟಪಾಡಿ ಹೊರಠಾಣೆ, ಕಾಪು ಪೊಲೀಸ್ ಠಾಣೆ ಮತ್ತು ಹೆದ್ದಾರಿ ಗಸ್ತು ಪಡೆಯ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣಕ್ಕೆ ತಂದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.