Hiriydaka-ಗುಡೆಯಂಗಡಿ ರಾಜ್ಯ ಹೆದ್ದಾರಿ: ತುಂಬ ಗುಂಡಿ!

ಐದು ಕಿ.ಮೀ. ರಸ್ತೆಯ ಉದ್ದಕ್ಕೂ ಗುಂಡಿಗಳದೇ ಸಾಮ್ರಾಜ್ಯ; ವಾಹನಿಗರಿಗೆ ಭಾರೀ ಅಪಾಯ

Team Udayavani, Jul 30, 2024, 3:39 PM IST

Screenshot (28)

ಹಿರಿಯಡಕ: ಉಡುಪಿ- ಬೈಲೂರು- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಹಿರಿಯಡಕ- ಗುಡ್ಡೆಯಂಗಡಿ ನಡುವೆ ರಸ್ತೆಗಿಂತ ಗುಂಡಿಗಳೇ ಹೆಚ್ಚಾಗಿವೆ. ಹಿರಿಯಡಕದಿಂದ ಗುಡ್ಡೆಯಂಗಡಿವರೆಗೆ ಐದಾರು ಕಿಲೋಮೀಟರ್‌ ರಸ್ತೆಯಲ್ಲಿ ಬೃಹದಾಕಾರದಲ್ಲಿ ಗುಂಡಿಗಳು ಬಾಯ್ದೆರೆದುಕೊಂಡು ವಾಹನ ಸವಾರರಿಗೆ ಅಪಾಯಕಾರಿ ಯಾಗಿ ಪರಿಣಮಿಸಿದೆ.

ಕಾರ್ಕಳದಿಂದ ಮಣಿಪಾಲ, ಉಡುಪಿ ಕಡೆಗೆ ಮತ್ತು ಉಡುಪಿಯಿಂದ ಕಾರ್ಕಳ ಕಡೆಗೆ ದಿನ ನಿತ್ಯ ಸಾವಿರಾರು ವಾಹನಿಗರು ಈ ರಸ್ತೆಯನ್ನು ಬಳಸುತ್ತಿ ದ್ದಾರೆ. ಸಾಕಷ್ಟು ಮಂದಿ ಶಿಕ್ಷಣ, ಆರೋಗ್ಯ, ಸಂಬಂಧಿತ ಕಾರ್ಯಗಳಿಗಾಗಿ ನಿತ್ಯ ಸಂಚರಿಸುತ್ತಿರುತ್ತಾರೆ. ಅನೇಕರು ಬೆಳಗ್ಗೆ ಬಂದು ಸಂಜೆ ಹೋಗುವವರಿದ್ದಾರೆ. ಆದರೆ ಈ ಭಾಗದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿರುವುದು ಸಮಸ್ಯೆ ಸೃಷ್ಟಿಸಿದೆ.

ಇಲ್ಲಿ ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಸವಾರರು ಹರಸಾಹಸ ಪಡುತ್ತಿದ್ದಾರೆ. ರಸ್ತೆ ಅವ್ಯವಸ್ಥೆ ಬಗ್ಗೆ ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಮನವಿ ಮಾಡಲಾಗಿದ್ದರೂ, ದುರಸ್ತಿ, ತೇಪೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ವ್ಯವಸ್ಥಿತ ರಸ್ತೆ ನಿರ್ಮಾಣ ಕಾರ್ಯ ನಡೆದಿಲ್ಲ. ಕೂಡಲೇ ಗುಂಡಿಗಳನ್ನು ತಾತ್ಕಾಲಿಕ ನೆಲೆಯಲ್ಲಾದರೂ ಗುಂಡಿಗಳನ್ನು ಮುಚ್ಚಿ ಮತ್ತು ಮಳೆ ಅನಂತರ ವ್ಯವಸ್ಥಿತ ರಸ್ತೆ ನಿರ್ಮಾಣ ಮಾಡಲು ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಐದು ಕಿ.ಮೀ. ಯಮಯಾತನೆ

ಹಿರಿಯಡಕ ಕೋಟ್ನಕಟ್ಟೆ ಫ್ರೆಂಡ್ಸ್‌ ಸರ್ಕಲ್‌ನಿಂದ ರಸ್ತೆ ಆರಂಭಗೊಳ್ಳುತ್ತದೆ.

ಅಲ್ಲಿಂದ ಭಜನ ಕಟ್ಟೆ, ಮಂಜೊಟ್ಟಿ, ಕೊಂಡಾಡಿ ಶಾಲೆ, ಬೂಪಾಡಿಕಲ್ಲು, ಗುಡ್ಡೆಯಂಗಡಿವರೆಗೆ ರಸ್ತೆ ತೀರಾ ದುಃಸ್ಥಿತಿಯಲ್ಲಿದೆ.

ಗುಡ್ಡೆಯಂಗಡಿ ಕಾರ್ಕಳ ಲೋಕೋಪಯೋಗಿ ಇಲಾಖೆ ಉಪವಲಯ ವ್ಯಾಪ್ತಿಯಿಂದ ಕಾರ್ಕಳವರೆಗೆ ಹೊಸ ರಸ್ತೆ ನಿರ್ಮಾಣಗೊಂಡಿದೆ.

ಹಿರಿಯಡಕದಿಂದ ಗುಡ್ಡೆಯಂಗಡಿವರೆಗೆ ರಸ್ತೆ ಹಲವು ವರ್ಷಗಳಿಂದ ಅಭಿವೃದ್ಧಿಯೇ ಕಂಡಿಲ್ಲ.

ಹಲವು ಸವಾರರು ಬಿದ್ದಿದ್ದಾರೆ.

ಗುಂಡಿಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ.

ರಸ್ತೆ ದುರವಸ್ಥೆಯಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ಘನ ಮತ್ತು ಲಘು ವಾಹನಗಳ ತಾಂತ್ರಿಕ ಸಮಸ್ಯೆ ಎದುರಿಸುತ್ತವೆ.

ಈ ರಸ್ತೆಯಲ್ಲಿ ಆ್ಯಂಬುಲೆನ್ಸ್‌ ಸಹ ಚಲಿಸಲು ಅಸಾಧ್ಯವಾಗಿದೆ.

ಟೆಂಡರ್‌ ಹಂತದಲ್ಲೇ ವರ್ಷಗಳು ಕಳೆದವು
ಪೇತ್ರಿ-ಹಿರಿಯಡಕ-ಗುಡ್ಡೆಯಂಗಡಿ 11ರಿಂದ 13 ಕಿ.ಮೀ. ವ್ಯಾಪ್ತಿ ಕಾರ್ಕಳ ಸಂಪರ್ಕ ರಸ್ತೆ ಅಭಿವೃದ್ಧಿಗೆ 3 ಕೋ.ರೂ. ಅನುದಾನ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದು ಪಿಡಬ್ಲ್ಯುಡಿ ಇಲಾಖೆ ಎರಡು ವರ್ಷಗಳ ಹಿಂದೆ ತಿಳಿಸಿತ್ತು. ಪ್ರಸ್ತುತ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮ ಅಡಿಯಲ್ಲಿ ರಸ್ತೆ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ! ಹೀಗೆ ಹಲವು ವರ್ಷಗಳಿಂದ ಟೆಂಡರ್‌ ಪ್ರಕ್ರಿಯೆಯಲ್ಲೇ ಕಾಲ ಕಳೆಯು ವಂತಾಗಿದೆ!

ದುರಸ್ತಿಗೆ ಮಳೆ ಅಡ್ಡಿ
ಹಿರಿಯಡಕ-ಗುಡ್ಡೆಯಂಗಡಿ ವ್ಯಾಪ್ತಿ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿ ರಾಜ್ಯ ಹೆದ್ದಾರಿ ನಿಗಮದಿಂದ ನಡೆಯಲಿದ್ದು, ಇದು ಟೆಂಡರ್‌ ಹಂತದಲ್ಲಿದೆ. ಪ್ರಸ್ತುತ ಸವಾರರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರಸ್ತೆಗಳನ್ನು ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಂಡಿದ್ದೇವೆ. ಆಗಾಗ ಮಳೆಯಾಗುತ್ತಿರುವುದರಿಂದ ದುರಸ್ತಿಗೂ ಅಡ್ಡಿಯಾಗುತ್ತಿದೆ.

– ಸೋಮನಾಥ್‌, ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.