ಲಾಕ್ ಡೌನ್ ನಡುವೆಯೇ ಮನೆ ರಿಪೇರಿ ಮಾಡಿಕೊಟ್ಟು ಮಾದರಿಯಾದ ಸತ್ಯದ ತುಳುವೆರ್ ಜವನೆರ್


Team Udayavani, Jul 19, 2020, 3:49 PM IST

ಲಾಕ್ ಡೌನ್ ನಡುವೆಯೇ ಮನೆ ರಿಪೇರಿ ಮಾಡಿಕೊಟ್ಟು ಮಾದರಿಯಾದ ಸತ್ಯದ ತುಳುವೆರ್ ಜವನೆರ್

ಕಾಪು: ಕೋವಿಡ್-19 ವೈರಸ್ ರೋಗಾಣು ಹರಡುವಿಕೆಯ ಆತಂಕಕ್ಕೆ ಸಿಲುಕಿ ಸಂಕಷ್ಟಕ್ಕೆ ಸಿಲುಕಿರುವ ಉಡುಪಿ- ಮಂಗಳೂರಿನ ಕುಟುಂಬಗಳ ಸಮಸ್ಯೆಗೆ ಸ್ಪಂದಿಸುವ ಸಲುವಾಗಿ ಅಸ್ತಿತ್ವಕ್ಕೆ ಬಂದಿರುವ ಸತ್ಯದ ತುಳುವೆರ್ ತಂಡದ ಸದಸ್ಯರು ಜು.19ರ ರವಿವಾರದ ಲಾಕ್ ಡೌನ್ ಪ್ರಯುಕ್ತ ಇನ್ನಂಜೆ ಗ್ರಾಮದ ಮಡುಂಬುವಿನಲ್ಲಿ ಶ್ರಮದಾನ ನಡೆಸಿ, ಮಾದರಿಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಇನ್ನಂಜೆ ಗ್ರಾಮದ ಮಡುಂಬುವಿನ ವಿಶ್ವನಾಥ ಆಚಾರ್ಯ ಅವರ ಮನೆಯ ಒಂದು ಪಾರ್ಶ್ವ ಕುಸಿದಿತ್ತು. ಇದರಿಂದಾಗಿ ಅವರ ಮನೆಗೂ ಅಪಾಯದ ಭೀತಿ ಉಂಟಾಗಿತ್ತು.

ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿರುವ ವಿಶ್ವನಾಥ ಆಚಾರ್ಯ ಅವರು ಕೋವಿಡ್-19 ಕಾರಣದಿಂದಾಗಿ ಮೂರುವರೆ ತಿಂಗಳಿನಿಂದ ಸರಿಯಾಗಿ ಕೆಲಸವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ಅವಧಿಯಲ್ಲೇ ಮನೆಯೂ ಕುಸಿತಕ್ಕೊಳಗಾದ ಕಾರಣ ತೀವ್ರ ಆತಂಕಕ್ಕೆ ಒಳಗಾಗಿದ್ದರು.

ಈ ಸಂದರ್ಭದಲ್ಲಿ ಕುಟುಂಬದ ನೆರವಿಗೆ ಬಂದ ಸತ್ಯದ ತುಳುವೆರ್ ಉಡುಪಿ-ಮಂಗಳೂರು ತಂಡವು ರವಿವಾರದ ಲಾಕ್ ಡೌನ್ ಪ್ರಯುಕ್ತದ ತಮ್ಮ ಬಿಡುವಿನ ದಿನವನ್ನು ಇವರ ಮನೆ ರಿಪೇರಿಗೆಂದು ಮೀಸಲಿಟ್ಟು ಮಾದರಿಯಾಗಿದ್ದಾರೆ.

ಶ್ರಮದಾನ

ಕಲ್ಯಾಣಪುರ, ಉಪ್ಪೂರು, ಹಿರಿಯಡಕ, ಮಲ್ಪೆ, ತೊಟ್ಟಂ, ಮಟ್ಟು, ಪಾಂಗಾಳ, ಹೆಬ್ರಿ, ಕುರ್ಕಾಲು, ಹೆಜಮಾಡಿ ಮೊದಲಾದೆಡೆಗಳ ಮೂವತ್ತಕ್ಕೂ ಅಧಿಕ ಮಂದಿ ಶ್ರಮಾದಾನದಲ್ಲಿ ಪಾಲ್ಗೊಂಡಿದ್ದು, ಮನೆ ರಿಪೇರಿಗೆ ಬೇಕಾದ ಸಾಮಾಗ್ರಿ ಮತ್ತು ಲೇಬರ್ ಗೆ ಸುಮಾರು 20 ಸಾವಿರ ಖರ್ಚು ತಗುಲಿದ್ದು, ಅದನ್ನು ತಂಡದ ಸದಸ್ಯರೇ ಭರಿಸಿದ್ದಾರೆ. ಮರದ ತುಂಡು ಪಕ್ಕಾಸುಗಳನ್ನು ಉಡುಪಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ ಅವರು ಒದಗಿಸಿದ್ದಾರೆ.

ಸತ್ಯದ ತುಳೆವೆರ್ ತಂಡದ ಗೌರವಾಧ್ಯಕ್ಷ ಕುರ್ಕಾಲು ದಿನಕರ ಶೆಟ್ಟಿ, ಅಧ್ಯಕ್ಷ ಪ್ರವೀಣ್ ಬಂಗೇರ ಮಲ್ಪೆ, ಕಾರ್ಯದರ್ಶಿ ರಿತೇಶ್ ಬಂಗೇರ ಮಲ್ಪೆ, ಕೋಶಾಧಿಕಾರಿ ಶಿವಪ್ರಸಾದ್ ಕುರ್ಕಾಲು, ಭಾರತೀಯ ಭೂಸೇನೆಯ ಯೋಧ ಶಿವಪ್ರಕಾಶ್ ಮಲ್ಪೆ ಮೊದಲಾದವರು ಸಹಯೋಗ ನೀಡಿದ್ದಾರೆ.

ಟಾಪ್ ನ್ಯೂಸ್

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

19

Malpe: ವಿಜಯದಶಮಿಗೆ ದೇವಿ, ಪಂಜುರ್ಲಿ ಮೆರವಣಿಗೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

14

Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.