Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

ಸುದಿನ ವರದಿಗೆ ಸ್ಪಂದಿಸಿದ ಪಿತ್ರೋಡಿಯ 12-16 ವರ್ಷದ ಬಾಲಕರು

Team Udayavani, Oct 18, 2024, 3:59 PM IST

11

ಶಿರ್ವ: 12ರಿಂದ 16ರ ಹರೆಯದ ಪೋರರ ತಂಡವೊಂದು ನವರಾತ್ರಿಯ ಸಂದರ್ಭದಲ್ಲಿ ಹುಲಿ ವೇಷ ಹಾಕಿ ಅದರಲ್ಲಿ ಉಳಿದ ಹಣವನ್ನು ಶಿರ್ವದ ತಮ್ಮದೇ ವಯಸ್ಸಿನ ಅನಾರೋಗ್ಯ ಪೀಡಿತ ಬಾಲಕನಿಗೆ ಚಿಕಿತ್ಸೆಗಾಗಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್‌ ಕುಮಾರ್‌ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್‌ ಕುಮಾರ್‌ ಹಲವಾರು ವರ್ಷಗಳಿಂದ ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿದ್ದಾನೆ. ಊರವರು ಮತ್ತು ಹಿತೈಷಿಗಳ ಸಹಾಯದಿಂದ ಬಾಲಕನಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಡ ಕುಟುಂಬದ ಜೀವನ ನಿರ್ವಹಣೆಯೂ ಸೇರಿದಂತೆ ಬಾಲಕನ ಚಿಕಿತ್ಸೆಗಾಗಿ ದಾನಿಗಳ ನೆರವಿನ ಅಗತ್ಯವಿರುವ ಬಗ್ಗೆ ಉದಯವಾಣಿ ಸುದಿನದಲ್ಲಿ ಸೆ. 22ರಂದು ವರದಿ ಪ್ರಕಟಿಸಿತ್ತು.

ಇದನ್ನು ಗಮನಿಸಿದ ಪಿತ್ರೋಡಿಯ ಗೌತಮ್‌, ಸುಹಾನ್‌, ರಿತೇಶ್‌ ಮತ್ತು ಸುರೇಶ್‌ ನೇತೃತ್ವದ 15 ಮಂದಿಯ ಟೀಂ ಯುವ ಫ್ರೆಂಡ್ಸ್‌ ತಂಡ ಈ ಬಾರಿಯ ಹುಲಿ ವೇಷದಲ್ಲಿ ಉಳಿದ ಮೊತ್ತವನ್ನು ಬಾಲಕನಿಗೆ ನೀಡಲು ನಿರ್ಧರಿಸಿದರು.

ಅ. 11ರಂದು ಲೋಬಾನ ಸೇವೆ ನೆರವೇರಿಸಿ ಪಿತ್ರೋಡಿಯ ಗೋವಿಂದ ನಗರದಿಂದ ಹೊರಟು ಉದ್ಯಾವರ, ಸಂಪಿಗೆ ನಗರ, ಪಿತ್ರೋಡಿ ಮತ್ತು ಮಲ್ಪೆ ಸುತ್ತಮುತ್ತ ಪರಿಸರದಲ್ಲಿ ಸಂಚರಿಸಿ ಹಣ ಸಂಗ್ರಹಿಸಿತು. ತಂಡವು ಅ. 17ರಂದು ಮನೆಗೆ ತೆರಳಿ ಹಸ್ತಾಂತರಿಸಿದೆ. ಸೌತ್‌ ಕೆನರಾ ಫೋಟೋಗ್ರಾಫರ್ ಎಸೋಸಿಯೇಶನ್‌ನ ಕಾಪು ವಲಯದ ಮಾಜಿ ಅಧ್ಯಕ್ಷ ರವಿಕುಮಾರ್‌ ಕಟಪಾಡಿ, ಟೀಂ ಯುವ ಫ್ರೆಂಡ್ಸ್‌ ನ ಬಾಲಕರ ತಂಡದ ಗೌತಮ್‌, ಸುಹಾನ್‌, ರಿತೇಶ್‌, ಬಾಲಕನ ತಂದೆ ಅರುಣ್‌ ಕುಮಾರ್‌, ತಾಯಿ ಮತ್ತು ಸಹೋದರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.