Udupi; ಶ್ರೀಕೃಷ್ಣ ಸೇವಾ ಬಳಗ ಅದಮಾರು ಮಠ: ಪೇಜಾವರ ಶ್ರೀಗಳಿಗೆ ಗುರುವಂದನೆ


Team Udayavani, Mar 21, 2024, 11:48 PM IST

pejavar

ಉಡುಪಿ: ಅದಮಾರು ಮಠ, ಶ್ರೀಕೃಷ್ಣ ಸೇವಾ ಬಳಗದಿಂದ ವಿಶ್ವಾರ್ಪಣಮ್‌ 30ನೇ ಕಾರ್ಯಕ್ರಮವಾಗಿ ಮಾ. 23ರ ಸಂಜೆ 3.30ಕ್ಕೆ ಪೂರ್ಣಪ್ರಜ್ಞ ಕಾಲೇಜಿನ ಶ್ರೀ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಗುರುವಂದನೆ ನಡೆಯಲಿದೆ ಎಂದು ಶ್ರೀಕೃಷ್ಣ ಸೇವಾ ಬಳಗದ ಸಂಚಾಲಕ ಗೋವಿಂದರಾಜ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ, ಅನಂತರ ನಡೆದ ಮಂಡಲೋತ್ಸವವನ್ನು ಯಶಸ್ವಿಯಾಗಿ ಪೂರೈಸಿ ಉಡುಪಿಗೆ ಆಗಮಿಸಿರುವ ಪೇಜಾವರ ಶ್ರೀಪಾದರಿಗೆ ಗುರುವಂದನೆ ಏರ್ಪಡಿಸಲು ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಒತ್ತಾಸೆಯಂತೆ ವಿಶ್ವಾರ್ಪಣಮ್‌ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಪೇಜಾವರ ಶ್ರೀಪಾದರು 60 ಸಂವತ್ಸರ  ಗಳನ್ನು ಪೂರೈಸಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರಿಗೆ ಸಮರ್ಪಿಸಿದ್ದಾರೆ ಎಂದು ತಿಳಿಸಿದರು.

ಪೇಜಾವರ ಶ್ರೀಪಾದರು ತಮ್ಮ ಆಶೀರ್ವಚನ ದಲ್ಲಿ ಅಯೋಧ್ಯೆಯ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂಡಲೋತ್ಸವದ ಚೇತೋಹಾರಿ ಸನ್ನಿವೇಶಗಳನ್ನು ವಿವರಿಸಿ ನಮ್ಮೆಲ್ಲರನ್ನು ಆಶೀರ್ವದಿ ಸಲಿದ್ದಾರೆ. ಅಯೋಧ್ಯೆಯಿಂದ ಬಂದಿರುವ ಶ್ರೀರಾಮ ದೇವರ ಮಂತ್ರಾಕ್ಷತೆಯನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಅದಮಾರು ಶ್ರೀಪಾದರು ವಿತರಿಸಿ ಅನುಗ್ರಹಿಸಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ವಾಗ್ಮಿಗಳಾದ ಪ್ರಕಾಶ್‌ ಮಲ್ಪೆ ಅವರು “ಜಗಜ್ಜನನಿ ಭಾರತ’ ಹಾಗೂ ಶ್ರೀಕಾಂತ್‌ ಶೆಟ್ಟಿ ಅವರು “ಅವಿನಾಶಿ ಭಾರತ’ ವಿಚಾರದಲ್ಲಿ ಚಿಂತನ ಮಂಥನ ನಡೆಸಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಾದ ಪಿಪಿಸಿ ನಿವೃತ್ತ ಪ್ರಾಧ್ಯಾಪಕ ಡಾ| ಬಿ.ಎಂ. ಸೋಮಯಾಜಿ, ಲೆಕ್ಕಪರಿಶೋಧಕ ವಿ.ಕೆ. ಹರಿದಾಸ ಹಾಗೂ ಫ‌ರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನದ ಪದಾ ಧಿಕಾರಿಗಳನ್ನು ಸಮ್ಮಾನಿಸ ಲಾಗುವುದು.
ಕಲಾವಿದ ಪ್ರಾದೇಶ್‌ ಆಚಾರ್ಯ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವೂ ಇರಲಿದೆ ಎಂದು ವಿವರಿಸಿದರು.

ಶ್ರೀಕೃಷ್ಣ ಸೇವಾ ಬಳಗದ ಶ್ಯಾಮಪ್ರಸಾದ್‌ ಕುಡ್ವ, ವಿಷ್ಣುಪ್ರಸಾದ್‌ ಪಾಡಿಗಾರು ಮಾತನಾಡಿ, ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಶ್ರೀಪಾದದ್ವಯರು ಗೋಪೂಜೆ ನೆರವೇರಿಸಲಿದ್ದಾರೆ. ಗೋಗ್ರಾಸ ನಿಧಿ ಅರ್ಪಣೆಗೂ ಅವಕಾಶವಿದೆ. ಶ್ರೀಪಾದರಿಗೆ ಹಾರಗಳ ಅರ್ಪಣೆ ಮಾಡುವ ಬದಲು ಗೋ ಗ್ರಾಸ ನಿಧಿ ದೇಣಿಗೆ ನೀಡುವುದರ ಮೂಲಕ ಸೇವೆ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಶ್ರೀಕೃಷ್ಣ ಸೇವಾ ಬಳಗದ ನಳಿನಿ ಪ್ರದೀಪ್‌ರಾವ್‌, ನಟೇಶ್‌, ಓಂಪ್ರಕಾಶ್‌, ಅಜಿತ್‌ ಪೈ, ಸುಮಿತ್ರಾ ಕೆರೆಮಠ ಪತ್ರಿಕಾಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.