ಹೂಳು ತುಂಬಿದ ಬಂದರು: ಮೀನು ಇಳಿಸಲು ಕಾರ್ಮಿಕರ ಹಿಂದೇಟು

ಮಲ್ಪೆ ಬಂದರಿನಲ್ಲಿ ಡ್ರೆಜ್ಜಿಂಗ್‌ ನಡೆಸಲು ಸರಕಾರದ ವಿಳಂಬ ನೀತಿ

Team Udayavani, Nov 24, 2022, 10:07 AM IST

3

ಮಲ್ಪೆ: ಏಷ್ಯಾದ ಅತೀ ದೊಡ್ಡ ಸರ್ವ ಋತು ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ತಂದ ಮೀನನ್ನು ಬೋಟ್‌ನಿಂದ ಇಳಿಸುವುದು ದೊಡ್ಡ ಸಾಹಸದ ಕೆಲಸವಾಗಿದೆ.

ಕಾರಣ ಕಳೆದ 7-8 ವರ್ಷಗಳಿಂದ ಡ್ರೆಜ್ಜಿಂಗ್‌ ಕೆಲಸ ನಡೆಯದಿರುವುದರಿಂದ ಕೆಲಸದ ವೇಳೆ ವ್ಯಕ್ತಿ ಕಾಲುಜಾರಿ ಬೋಟ್‌ನಿಂದ ನೀರಿಗೆ ಬಿದ್ದರೆ, ಬದುಕುವ ಸಾಧ್ಯತೆಯೇ ಇಲ್ಲ. ನೀರಿಗೆ ಬಿದ್ದ ವ್ಯಕ್ತಿ ಹೂಳಿನಡಿಯಲ್ಲಿ ಸಿಲುಕಿ ಮೃತದೇಹವನ್ನು ಪತ್ತೆಮಾಡಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದೀಗ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸಂಕಷ್ಟ ಪರಿಹಾರ ನಿಧಿಯನ್ನು ನೀಡದೆ ಬಾಕಿ ಇರಿಸಿಕೊಂಡಿದೆ.

ಮೀನುಗಾರಿಕೆ ಮುಗಿಸಿ ಬಂದ ಬೋಟ್‌ಗಳಲ್ಲಿ ಮುಂಜಾನೆ 4 ಗಂಟೆಯಿಂದ ಕನ್ನಿ ಮೀನುಗಾರರಿಂದ ಮೀನು ಇಳಿಸುವ ಕಾಯಕ ನಡೆಯುತ್ತದೆ. ಕತ್ತಲೆಯಲ್ಲಿ ಕೆಲಸ ಮಾಡುವುದರಿಂದ ಇವರು ಒಂದು ವೇಳೆ ಕಾಲು ಜಾರಿ ನೀರಿಗೆ ಬಿದ್ದರೆ ಮೇಲೇಳಲು ಸಾಧ್ಯವೇ ಇಲ್ಲ ಎನ್ನುವಂತಾಗಿದೆ. ಬಹುತೇಕ ಮಂದಿ ಭಯದಿಂದ ಇದೀಗ ಮೀನು ಇಳಿಸಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ. ಇದು ಸಹಜವಾಗಿಯೇ ಈ ಭಾಗದ ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ತಂಗುದಾಣ ಸದ್ಯ ಮೃತ್ಯುಕೂಪ

2 ಸಾವಿರಕ್ಕೂ ಅಧಿಕ ಬೋಟ್‌ಗಳು ಲಂಗರು ಹಾಕಬಹುದಾದ ಸುಂದರ ಮೀನುಗಾರಿಕಾ ಬಂದರು ಕಳೆದ 8 ವರ್ಷದಿಂದ ಹೂಳು ತುಂಬಿಕೊಂಡು ಅದೆಂಥ ಅಪಾಯಕಾರಿ ಸ್ಥಿತಿ ತಲುಪಿದೆ. ಪ್ರತೀ ವರ್ಷ ಕನಿಷ್ಠ 20 ಮಂದಿ ಮೀನುಗಾರಿಕಾ ಕಾರ್ಮಿಕರು ಇಲ್ಲಿ ಕಾಲು ಜಾರಿ ಬಿದ್ದು ಸಾಯುತ್ತಿದ್ದಾರೆ. ಅದ್ಯಾವುದೋ ರಾಜ್ಯದಿಂದ ಬಂದ ಈ ಕಾರ್ಮಿಕರ ಸಾವಿನ ಲೆಕ್ಕ ಇಟ್ಟವರಿಲ್ಲ. ಬಡಜನರ ಸಾವಿಗೆ ಬೆಲೆ ಇಲ್ಲ ಎನ್ನುವಂತಾಗಿದೆ. ಇದರಿಂದ ಕೇವಲ ಜೀವ ಅಪಾಯ ಮಾತ್ರವಲ್ಲ, ಬೋಟ್‌ಗಳ ಸಂಚಾರಕ್ಕೂ ಅಡ್ಡಿಯಾಗಿದೆ. ಆದರೆ ಸರಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ.

ಸಿಗದ ಸಂಕಷ್ಟ ಪರಿಹಾರ ನಿಧಿ

ಸಮುದ್ರ ಮೀನುಗಾರಿಕೆಯಲ್ಲಿ ದುರ್ಮರಣ ಹೊಂದಿದ ಮೀನುಗಾರರ ಕುಟುಂಬಕ್ಕೆ 6 ಲಕ್ಷ ರೂ. ಸಂಕಷ್ಟ ಪರಿಹಾರ ನಿಧಿಯನ್ನು ನೀಡುವ ಬಗ್ಗೆ ಸರಕಾರ ಘೋಷಿಸಿತ್ತು. ಆದರೆ ಮಲ್ಪೆಯಲ್ಲಿ ಕಳೆದ 5-6 ವರ್ಷಗಳಿಂದ ನೀರಿಗೆ ಬಿದ್ದು 100ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಸರಕಾರ ಮಾತ್ರ ಮೃತರ ಕುಟುಂಬಕ್ಕೆ ಸಂಕಷ್ಟ ಪರಿಹಾರ ನಿಧಿಯನ್ನು ನೀಡದೆ ಬಾಕಿ ಇರಿಸಿದೆ. ಕಳೆದ 2 ವರ್ಷಗಳಿಂದ ಕರಾವಳಿಯಲ್ಲಿ 35 ಕ್ಕೂ ಅಧಿಕ ಅರ್ಜಿಗಳು ಸರಕಾರಕ್ಕೆ ಸಲ್ಲಿಕೆಯಾಗಿವೆ. ಸುಮಾರು 2 ಕೋ.ರೂ. ಬಾಕಿ ಇದೆ. ಎನ್ನುತ್ತಾರೆ ಡೀಪ್‌ಸಿ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್‌ ಸುವರ್ಣ. ಕಳೆದೊಂದು ವರ್ಷದಿಂದ ಮೀನುಗಾರರ ಮತ್ಸ್ಯಶ್ರಯ ಯೋಜನೆಯ ಹಣವೂ ಬಿಡುಗಡೆಯಾದರೆ ಕೈ ಸೇರಿಲ್ಲ ಎಂದು ಮೀನುಗಾರರು ಆರೋಪಿಸಿದ್ದಾರೆ.

ಪರಿಹಾರಕ್ಕೆ ಕ್ರಮ: ಬಂದರಿನ ಹೂಳು ತೆಗೆಯಲು ಈಗಾಗಲೇ ಟೆಂಡರ್‌ ಆಗಿದೆ. ಮುಂದಿನ ಒಂದು ತಿಂಗಳಲ್ಲಿ ಕಾಮಗಾರಿ ನಡೆಯಲಿದೆ ಈ ಬಗ್ಗೆ ಎಲ್ಲ ಪ್ರಯತ್ನಗಳು ನಡೆದಿದೆ. ದುರ್ಮರಣ ಹೊಂದಿದವರಿಗೆ ಸಂಕಷ್ಟ ಪರಿಹಾರ ನಿಧಿ ಬಾಕಿ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಹಾಗೇನಾದರೂ ಇದ್ದಲ್ಲಿ ತತ್‌ಕ್ಷಣ ಪರಿಹಾರ ನೀಡುವಲ್ಲಿ ಪ್ರಯತ್ನಿಸಲಾಗುವುದು. ಕೆ. ರಘುಪತಿ ಭಟ್‌, ಶಾಸಕರು

ಬಿದ್ದರೆ ಹೆಣವೂ ಸಿಗಲ್ಲ: ಮುಂಜಾನೆ ನಾಲ್ಕು ಗಂಟೆಗೆ ಬಂದರಿನಲ್ಲಿ ಕೆಲಸ ಪ್ರಾರಂಭವಾಗುತ್ತದೆ. ಕೆಲವೊಮ್ಮೆ ರಾತ್ರಿ ಬೋಟ್‌ನಲ್ಲಿ ಬಂದ ಮೀನುಗಳನ್ನು ಖಾಲಿ ಮಾಡುವ ಕೆಲಸ ನಡೆಯುತ್ತಿರುತ್ತದೆ. ಈ ವೇಳೆ ಕಾರ್ಮಿಕರು ಅಚಾನಕ್ಕಾಗಿ ನೀರಿಗೆ ಬೀಳುವ ಪ್ರಮೇಯ ಹೆಚ್ಚು. ಬಿದ್ದವರ ಹೆಣವೂ ಇಲ್ಲಿ ಸಿಗುತ್ತಿಲ್ಲ. ಸರಕಾರ ಮೀನುಗಾರರ ಮೇಲೆ ಚೆಲ್ಲಾಟವಾಡದೆ ತತ್‌ಕ್ಷಣ ಸಮಸ್ಯೆ ಪರಿಹರಿಸಬೇಕು. ದಯಕರ ವಿ. ಸುವರ್ಣ, ಅಧ್ಯಕ್ಷರು ಕನ್ನಿ ಮೀನುಗಾರರ ಸಂಘ, ಮಲ್ಪೆ

ಟೆಂಡರ್‌ ಪ್ರಕಿಯೆ: ಡ್ರೆಜ್ಜಿಂಗ್‌ಗೆ ನಡೆಸಲು ಸರಕಾರದಿಂದ ಅನುಮೋದನೆ ಸಿಕ್ಕಿದೆ. ಟೆಂಡರ್‌ ಪ್ರಕಿಯೆ ನಡೆಯುತ್ತಿದೆ. ತಿಂಗಳೊಳಗೆ ಎಲ್ಲ ಪ್ರಕ್ರಿಯೆ ನಡೆದು ಕಾಮಗಾರಿ ಆರಂಭವಾಗಲಿದೆ. ಚನಲ್‌ ಮತ್ತು ಬಂದರಿನ ಮೂರು ಹಂತದ ಜೆಟ್ಟಿಯ ಡ್ರೆಜ್ಜಿಂಗ್‌ ನಡೆಯಲಿದೆ. –ಉದಯ ಕುಮಾರ್‌, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಬಂದರು ಇಲಾಖೆ

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.