Solar Panel: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್‌ ಶಕ್ತಿ…

ಉಡುಪಿ, ದ.ಕ. ತಲಾ 61 ಕೇಂದ್ರಗಳಿಗೆ ಯೋಜನೆ

Team Udayavani, Aug 15, 2024, 6:30 AM IST

Solar Panel: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್‌ ಶಕ್ತಿ

ಉಡುಪಿ ಜಿಲ್ಲೆಗೆ ಒಟ್ಟು 2.60 ಕೋ.ರೂ.ವೆಚ್ಚ
ಕಾರ್ಕಳ: ದೇಶವು ಸ್ವಾತಂತ್ರೋತ್ಸವ ಸಂಭ್ರಮದಲ್ಲಿರುವ ಹೊತ್ತಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿಶೇಷ ಉಡುಗೊರೆ ಸಿಗಲಿದೆ.

ಉಡುಪಿ ಜಿಲ್ಲೆಯ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೆಲ್ಕೋ ಸೋಲಾರ್‌ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೇತೃತ್ವದಲ್ಲಿ ಸೋಲಾರ್‌ ಅಳವಡಿಕೆಯನ್ನು ಆರಂಭಿಸಿ ಸ್ವಾತಂತ್ರ್ಯದ ದಿನದಂದು ಪೂರ್ಣಗೊಳಿಸಿ ಹಸ್ತಾಂತರಿಸಲಿದೆ. ಸೋಲಾರ್‌ ಅಳವಡಿಕೆಯ ಒಟ್ಟು ಖರ್ಚಿನ ಶೇ.50ರಷ್ಟನ್ನು ಸೆಲ್ಕೋ ಭರಿಸುತ್ತಿದೆ. ಉಳಿದ ಹಣ ಹೊಂದಾಣಿಕೆಗೆ 17 ಸಂಘ ಸಂಸ್ಥೆಗಳು ಕೈಜೋಡಿಸಿವೆ. 61 ಆರೋಗ್ಯ ಕೇಂದ್ರಗಳಲ್ಲಿ 2.60 ಕೋ.ರೂ. ವೆಚ್ಚದಲ್ಲಿ ವಿದ್ಯುತ್‌ ಸಂಪರ್ಕ ನೀಡಲಾಗಿದೆ.

ರಾಜ್ಯದಲ್ಲಿರುವ 2,500 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ 1,152 ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ಸೆಲ್ಕೋ ಫೌಂಡೇಶನ್‌ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಸೋಲಾರ್‌ ವ್ಯವಸ್ಥೆ ಕಲ್ಪಿಸುವ ಚಿಂತನೆಯೂ ಇದೆ ಎಂದು ಸೆಲ್ಕೋತಿಳಿಸಿದೆ.

ಎಲ್ಲೆಲ್ಲಿ ಸೋಲಾರ್‌ ಬೆಳಕು: ಉಡುಪಿ ಜಿಲ್ಲೆಯ 52 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1 ಉಪ ಆರೋಗ್ಯ ಕೇಂದ್ರ, 1 ಆಯುರ್ವೇದ ಸೆಂಟರ್‌, ಮುಖ್ಯ ಮಲೇರಿಯಾ ಸೆಂಟರ್‌ ಸಹಿತ ಒಟ್ಟು 61 ಆರೋಗ್ಯ ಕೇಂದ್ರಗಳಲ್ಲಿ ಸೋಲಾರ್‌ ದೀಪ ಬೆಳಗಲಿದೆ. ಇದರ ಒಟ್ಟು ವೆಚ್ಚ 2.60 ಕೋಟಿ ರೂ. ಇದರಿಂದಾಗಿ ಈ ಕೇಂದ್ರಗಳಿಂದ ಸರಕಾರಕ್ಕೆ ಹೊರೆಯಾಗುತ್ತಿದ್ದ 5 ಲಕ್ಷ ರೂ. ವಿದ್ಯುತ್‌ ಬಿಲ್‌ ಕಡಿಮೆಯಾಗಲಿದೆ.

ದ.ಕ. ಜಿಲ್ಲೆಯಲ್ಲೂ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಲಾರ್‌ ಅಳವಡಿಕೆಗೆ ನಿರ್ಧರಿಸಲಾಗಿದೆ. 5 ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ. ಅಲ್ಲಿ ಅಳವಡಿಕೆ ಸಂಬಂಧ ಸಹಭಾಗಿತ್ವ ಸಂಸ್ಥೆಗಳ ಸಂಪರ್ಕ ನಡೆದಿದೆ. ಜಿಲ್ಲಾ ಆರೋಗ್ಯಾಧಿಕಾರಿ, ಜಿ.ಪಂ. ಅಧಿಕಾರಿಗಳ ಜತೆ ಚರ್ಚೆ ನಡೆದು ಪ್ರಗತಿ ಹಂತದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ವಿಶೇಷವಾಗಿ ಈಗ ಪೂರ್ಣಗೊಂಡಿದೆ.

ಕೊರೊನಾ ಕಾಲದಲ್ಲೂ ಕೈ ಹಿಡಿದಿತ್ತು
2021ರಲ್ಲಿ ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಲಾರ್‌ ಅಳವಡಿಸುವ ಮೂಲಕ ಈ ಅಭಿಯಾನ ಆರಂಭಗೊಂಡಿತು. 2021ರ ಕೊರೊನಾ ಕಾಲಘಟ್ಟದಲ್ಲಿ ಸೋಲಾರ್‌ ಆಧಾರಿತ ಕಿಯೋಸ್ಕ್ ಸ್ವಾಬ್‌ ಕಲೆಕ್ಷನ್‌ ಸೆಂಟರ್‌ ಹಾಗು ಸೋಲಾರ್‌ ಆಧಾರಿತ ಮೊಬೈಲ್‌ ಸ್ವಾಬ್‌ ಕಲೆಕ್ಷನ್‌ ಸೆಂಟರ್‌ ಅನ್ನು ಸೆಲ್ಕೋ ಸೋಲಾರ್‌ ರೂಪಿಸಿತ್ತು.

ಯಾವ್ಯಾವ ಸಂಸ್ಥೆಗಳ ನೆರವು?
ಟಿಎಂಜಿ ಸುನಿಧಿ ಫೌಂಡೇಶನ್‌ ಮಣಿಪಾಲ, ಕ್ಯಾನ್‌ಫಿನ್‌ ಹೋಮ್ಸ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಎಆರ್‌ಎಸ್‌ ಕಮಿಟಿ ಬೆಳ್ವೆ ಮತ್ತು ಶಂಕರ ನಾರಾಯಣ, ರೋಬೋಸಾಫ್ಟ್ ಉಡುಪಿ, ಇನ್ವೆಂಜರ್‌ ಟೆಕ್ನಾಲಜೀಸ್‌ ಕಟಪಾಡಿ, ಕೆ.ಎಂ.ಉಡುಪ ಫೌಂಡೇಶನ್‌ ಮಂದಾರ್ತಿ, ಕುಸುಮ ಫೌಂಡೇಶನ್‌, ರೋಟರಿ ಕ್ಲಬ್‌ ಸಂತೆಕಟ್ಟೆ, ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ, ಕೆ.ಸಿ. ಹೆಗ್ಡೆ ಫ್ಯಾಮಿಲಿ, ಹಟ್ಟಿಯಂಗಡಿ ಸಿದ್ದಿವಿನಾಯಕ ಶಾಲೆ, ಡಾ| ನವೀನ್‌ ಬಲ್ಲಾಳ್‌ ಅಂಬಲಪಾಡಿ ಸ್ಕಾನಿಂಗ್‌ ಸೆಂಟರ್‌, ರೋಟರಿ ಸಂಸ್ಥೆಗಳು, ಅಸ್ಪೆನ್‌ ಇನಾ#† ಪಡುಬಿದ್ರಿ ಸಂಸ್ಥೆಗಳು ಸೆಲ್ಕೋ ಜತೆ ಸಹಕರಿಸುತ್ತಿವೆ.

ಸೆಲ್ಕೋ ಇತರ ಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಕೇಂದ್ರಗಳಿಗೆ ಬೆಳಕು ನೀಡುವ ಪ್ರಕ್ರಿಯೆ ಎರಡು ವರ್ಷಗಳ ಹಿಂದೆ ಆರಂಭಗೊಂಡಿತ್ತು. ಸ್ವಾತಂತ್ರೊತ್ಸವದ ಸಂಭ್ರಮಕ್ಕೆ ಈಗ ಬೆಳಕು ಹರಿದಿರುವುದು ಹೊಸ ಮೈಲುಗಲ್ಲು.
– ಡಾ| ಗಡಾದ್‌, ಜಿಲ್ಲಾ ಆರೋಗ್ಯಾಧಿಕಾರಿ

ಗುಡ್ಡಗಾಡು ಹಾಗೂ ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್‌ ಬೆಳಕು ಹರಿಸಲು ನಾವೆಲ್ಲ ಕೈ ಜೋಡಿಸಿದ್ದೇವೆ.
– ಗುರುಪ್ರಕಾಶ್‌ ಶೆಟ್ಟಿ, ಡಿಜಿಎಂ, ಸೆಲ್ಕೋ ಸೋಲಾರ್‌ ಸಂಸ್ಥೆ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.