ಟ್ರಾಫಿಕ್‌ ನಿಯಮ ಉಲ್ಲಂಘನೆ : ಸವಾರರಿಗೆ ಹೊಸ ದರ ಬಿಸಿ; ಶೀಘ್ರ ಕಟ್ಟುನಿಟ್ಟು


Team Udayavani, Jul 3, 2019, 3:43 PM IST

04200107ASTRO10

ಉಡುಪಿ: ರಾಜ್ಯ ಸರಕಾರವು ರಸ್ತೆ ಸುರಕ್ಷೆಯ ದೃಷ್ಟಿಯಿಂದ ಸಂಚಾರ ನಿಯಮ ಉಲ್ಲಂ ಸುವವರ ಮೇಲೆ ಭಾರೀ ದಂಡ ವಿಧಿಸಲು ಆದೇಶಿಸಿದ್ದು, ನಿಧಾನಕ್ಕೆ ಅನುಷ್ಠಾನವಾಗುತ್ತಿದೆ. ಈ ನಡುವೆ ಪೊಲೀಸರು ನಿಯಮ ಮೀರು ವವರ ವಿರುದ್ಧ ಕಾರ್ಯಾಚರಣೆಯನ್ನು ಬಿಗಿಗೊಳಿಸಿದ್ದಾರೆ. ದಂಡದ ಪ್ರಮಾಣವನ್ನು 10ರಿಂದ 20 ಪಟ್ಟು ಹೆಚ್ಚಿಸು ವಂತೆ ಜೂ.25ರಂದು ರಾಜ್ಯ ಸರಕಾರ ಆದೇಶ ಹೊರಡಿ ಸಿದೆ. ರಾಜಧಾನಿಯ ಕೆಲವೆಡೆ ಜೂ.27ರಿಂದ ಜಾರಿಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಹೊಸ ದರದ ಅನ್ವಯ ದಂಡ ವಿಧಿಸಲಾಗುತ್ತಿದೆ.

ಹೇಗಿದೆ ಹೊಸ ದರ?
ವಾಹನ ಚಾಲನೆ ಮಾಡುವಾಗ ಮೊಬೈಲ್‌ ಫೋನ್‌ ಬಳಸಿದರೆ ದಂಡದ ಮೊತ್ತ 1 ಸಾವಿರ ರೂ.ಗೆ ಏರಿಸಲಾಗಿದೆ. ಅನಂತರದಲ್ಲಿ ಎಷ್ಟೇ ಬಾರಿ ಸಿಕ್ಕಿ ಬಿದ್ದರೂ 2 ಸಾವಿರ ರೂ. ಕಕ್ಕಬೇಕು. ನೋ ಪಾರ್ಕಿಂಗ್‌ ಜಾಗದಲ್ಲಿ ವಾಹನ ನಿಲ್ಲಿಸಿದರೆ ಮತ್ತು ನಿಗದಿತ ವೇಗಮಿತಿ ಮೀರಿದರೆ ವಿಧಿಸುವ ದಂಡವನ್ನು 1,000 ರೂ.ಗೆ ಹೆಚ್ಚಿಸಲಾಗಿದೆ. ವಿಮೆ ರಹಿತ ವಾಹನ ಚಾಲನೆಗೂ ದಂಡ 1 ಸಾವಿರ ರೂ. ನೋಂದಣಿಯಾಗದ ವಾಹನ ಚಾಲನೆಗೆ ಮೊದಲ ಬಾರಿ 5 ಸಾವಿರ ರೂ. ಮತ್ತು ಅನಂತರದಲ್ಲಿ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಫಿಟೆ°ಸ್‌ ಪ್ರಮಾಣಪತ್ರ ಇಲ್ಲದ ವಾಹನಗಳಿಗೆ ಮೊದಲ ಬಾರಿ 2 ಸಾವಿರ ರೂ. ಮತ್ತು ಅನಂತರದಲ್ಲಿ 5 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಆದೇಶ ಬಂದಿದೆ
ಹೊಸದರ ಅನುಷ್ಠಾನಗೊಳಿಸುವಂತೆ ಈಗಾಗಲೇ ಆದೇಶ ಬಂದಿದೆ. ಆದರೆ ಎಲೆಕ್ಟ್ರಾನಿಕ್‌ ಡಿವೈಸ್‌ಗೆ ಹೊಸದರ ಅಪ್‌ಡೇಟ್‌ ಆಗಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. – ನಿಶಾ ಜೇಮ್ಸ್‌
ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು

ಬೆಂಗಳೂರಿನಲ್ಲಿ ಮಾತ್ರ ಡಿವೈಸ್‌ ಅಪ್‌ಡೇಟ್‌
ಹೊಸ ದರವನ್ನು ಟ್ರಾಫಿಕ್‌ ಪೊಲೀಸರ ಡಿವೈಸ್‌ ಸಾಫ್ಟ್ ವೇರ್‌ಗೆ ಅಪ್‌ಡೇಟ್‌ ಬೆಂಗಳೂರಿನಲ್ಲಿ ಮಾತ್ರ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಯ ಡಿವೈಸ್‌ಗಳಿಗೆ ಇದನ್ನು ಅಳವಡಿಸಲು ಸಾಕಷ್ಟು ಸಮಯಾವಕಾಶ ಬೇಕು. ಉಭಯ ಜಿಲ್ಲೆಯಲ್ಲಿ ನೋಂದಾಯಿತ ಡಿವೈಸ್‌ ಅಪ್‌ಡೇಟ್‌ ಮಾಡುವ ಸೆಂಟರ್‌ಗಳನ್ನು ಗುರುತಿಸುವ ಕೆಲಸವೂ ನಡೆಯುತ್ತಿದೆ.
ಸರಕಾರದ ಅಧಿಸೂಚನೆ ತತ್‌ಕ್ಷಣದಿಂದ ಜಾರಿಗೊಳಿಸುವ ನಿಟ್ಟಿನಲ್ಲಿ ಬಂದ ಮಾಹಿತಿಯಂತೆ ಈಗಾಗಲೇ ಪೊಲೀಸ್‌ ಠಾಣೆಗಳಿಗೆ ಒದಗಿಸಿರುವ ಪಿಡಿಎ ಉಪಕರಣಗಳಲ್ಲಿ ಪರಿಷ್ಕೃತ ದರವನ್ನು ಅಡಕಗೊಳಿ ಸಲು ಸಂಬಂಧಪಟ್ಟ ಠಾಣಾಧಿ ಕಾರಿಗಳು ಕ್ರಮ ಕೈಗೊಳ್ಳುವಂತೆ ಮತ್ತು ಪಿಡಿಎ ಉಪಕರಣಗಳಲ್ಲಿ ಪರಿಷ್ಕೃತ ದರವನ್ನು ಅಡಕಗೊಳಿಸುವ ತನಕ ಹಳೆಯ ವಿಧಾನದ ಪ್ರಕಾರ ದಂಡ ವಸೂಲಾತಿ ಪುಸ್ತಕದಲ್ಲಿಯೇ ಪರಿಷ್ಕೃತ ದರದಲ್ಲಿಯೇ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.