Agriculture ಡಿಪ್ಲೊಮಾ ಕಾಲೇಜು ಉಳಿಸಲು ಹೋರಾಟ


Team Udayavani, Jun 13, 2024, 12:28 AM IST

Agriculture ಡಿಪ್ಲೊಮಾ ಕಾಲೇಜು ಉಳಿಸಲು ಹೋರಾಟ

ಮಣಿಪಾಲ: ಬ್ರಹ್ಮಾವರ ಡಿಪ್ಲೊಮಾ ಮಹಾವಿದ್ಯಾಲಯವನ್ನು ಮುಂದುವರಿಸಿ ಪೂರ್ಣ ಪ್ರಮಾಣದ ಕೃಷಿ ಕಾಲೇಜು ಆರಂಭಿಸಿ ಕಾಲೇಜು ಬೋಧಕ, ಬೋಧಕೇತರ ಉದ್ಯೋಗ ಉಳಿಸಬೇಕು ಎಂದು ಆಗ್ರಹಿಸಿ ಕೃಷಿ ಕಾಲೇಜು ಉಳಿಸಿ ಹೋರಾಟ ಸಮಿತಿ ಹಾಗೂ ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯವನ್ನು ಉಳಿಸಲು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಸಚಿವೆ ಲಕ್ಷ್ಮೀ ಮಾತನಾಡಿ, ಈ ಬಗ್ಗೆ ಪರಿಶೀಲನೆ ಮಾಡಲಾಗುವುದು. ಯಾವ ಕಾರಣಕ್ಕೆ ಡಿಪ್ಲೊಮಾ ಕೋರ್ಸ್‌ ರದ್ದು ಮಾಡಲಾಗಿದೆ. ಮೂಲ ಸಮಸ್ಯೆ ಏನು ಎಂಬುದನ್ನು ತಿಳಿಯಬೇಕಿದೆ. ಈ ಬಗ್ಗೆ ಹೋರಾಟ ಸಮಿತಿ ನಿಯೋಗದೊಂದಿಗೆ ಜೂ. 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯ ಸ್ವಾಮಿ ಅವರನ್ನು ಭೇಟಿ ಮಾಡಿಸಲಾಗುವುದು ಎಂದರು.

ಮಾಜಿ ಸಭಾಪತಿ ಹಾಗೂ ಜಿಲ್ಲಾ ರೈತ ಸಂಘದ ರೂವಾರಿ ಕೆ. ಪ್ರತಾಪ್‌ಚಂದ್ರಶೆಟ್ಟಿ, ಪ್ರಗತಿಪರ ಕೃಷಿಕ ಸತೀಶ್‌ ಕುಮಾರ್‌ ಶೆಟ್ಟಿ ಯಡ್ತಾಡಿ, ವಕೀಲ ರವಿ ಶೆಟ್ಟಿ ಮೊದಲಾದವರು ಮಾತನಾಡಿ, ಯಾವುದೇ ಕಾರಣಕ್ಕೂ ಸರಕಾರ ಕೃಷಿ ಡಿಪ್ಲೊಮಾ ಕಾಲೇಜು ಬಂದ್‌ ಮಾಡಬಾರದು. ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೊಮಾ ಕಾಲೇಜಿನ ಜತೆಗೆ ಕೃಷಿ ಕಾಲೇಜು ಆರಂಭಿಸಬೇಕು. ಈ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದ್ದೇವೆ ಎಂದರು.

ಜಿಲ್ಲಾ ರೈತ ಸಂಘದ ಪ್ರಮುಖರಾದ ಎಸ್‌. ಸಂಜೀವ್‌ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಉದಯ ಕುಮಾರ್‌ ಶೆಟ್ಟಿ, ಸುಧಾಕರ ಶೆಟ್ಟಿ ಮೈರ್ಮಾಡಿ, ಹರೀಶ್‌ ಚಂದ್ರ, ಡಿಎಸ್‌ಎಸ್‌ನ ಪ್ರಶಾಂತ್‌, ಕರ್ನಾಟಕ ಪ್ರಾಂತ ರೈತ ಸಂಘದ ಚಂದ್ರಶೇಖರ್‌, ಸಿಐಟಿಯುನ ಬಾಲಕೃಷ್ಣ ಶೆಟ್ಟಿ, ಸುರೇಶ್‌ ಕಲ್ಲಗಾರ, ಎಚ್‌. ನರಸಿಂಹ, ಶಶಿಧರ ಗೊಲ್ಲ, ಕೃಷಿ ಕೂಲಿ ಕಾರ್ಮಿಕರ ಸಂಘದ ವೆಂಕಟೇಶ ಕೋಣಿ, ಬೋಧಕೇತರ ಸಿಬಂದಿ ಲತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Nejar Case: Accused Praveen Chowgule’s bail application dismissed by High Court

Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.