ಬಿಸಿಲ ಬೇಗೆ : ತಂಪು ಪಾನೀಯಗಳ ದರವೂ ಜಾಸ್ತಿ


Team Udayavani, Apr 15, 2019, 6:30 AM IST

tampu-paniya

ಮಲ್ಪೆ: ಈ ವರ್ಷದ ಬೇಸಗೆ ಕಳೆದ ವರ್ಷಗಳಿಗಿಂತಲೂ ಅತಿಯಾಗಿದೆ. ರಣ ಬಿಸಿಲಿಗೆ ಬಸವಳಿದ ಜನ ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ. ಬೇಡಿಕೆ ಹೆಚ್ಚಾದಂತೆ ದರವೂ ಏರುತ್ತಿದ್ದು ಜನರ ಜೇಬಿಗೆ ತಂಪು ಪಾನೀಯದ ಬಿಸಿ ತಟ್ಟಿದೆ.

ಇವುಗಳಿಗೆಲ್ಲ ಭಾರಿ ಬೇಡಿಕೆ
ತಂಪು ಪಾನೀಯ ಮಾರಾಟ ಮಳಿಗೆಗಳಲ್ಲಿ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಕಲ್ಲಂಗಡಿ, ಎಳನೀರು, ಮಜ್ಜಿಗೆ, ಲಸ್ಸಿ, ಕಬ್ಬಿನಹಾಲು, ಫ್ರೆಶ್‌ ಲೆಮನ್‌, ಜೀರಾಸೋಡ ಮೊದಲಾದ ಪಾನೀಯಗಳು ಮತ್ತು ಬ್ರಾಂಡೆಡ್‌ ಕಂಪೆನಿಗಳ ಐಸ್‌ಕೀÅಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.

ಬ್ರಾಂಡೆಡ್‌ ಐಸ್‌ಕ್ರೀಂ ಕಂಪೆನಿಗಳು ಈಗಾಗಲೇ ತಮ್ಮ ಉತ್ಸನ್ನಗಳಿಗೆ ಶೇ.20ರಷ್ಟು ದರ ಹೆಚ್ಚಿಸಿದೆ. ಕುಡಿಯುವ ಶುದ್ಧ ನೀರನ್ನು ಅರಸುತ್ತಿರುವ ಜನತೆ ಬಾಟಲಿ ನೀರಿಗೆ ಮೊರೆಹೋಗುತ್ತಿದ್ದಾರೆ. ಹಾಗಾಗಿ ಬಾಟಲಿ ನೀರು ಕೂಡ ಹೆಚಾRಗಿ ಮಾರಾಟವಾಗುತ್ತಿದೆ.

ಬೀದಿ ಬದಿ ವ್ಯಾಪಾರ ಜೋರು
ಹಣ್ಣು, ಜ್ಯೂಸ್‌ ವ್ಯಾಪಾರದ ಬಂಡಿಗಳು ನಗರದ ಪ್ರಮುಖ ಬೀದಿಗಳಲ್ಲಿ , ಮರಗಳ ಅಡಿಯಲ್ಲಿ ಕಾಣುತ್ತಿದೆ. ತಳ್ಳುಗಾಡಿಗಳಲ್ಲಿ ಎಳನೀರು, ಹಣ್ಣುಗಳನ್ನು ಇಟ್ಟುಕೊಂಡು ಬೀದಿ ಸುತ್ತಿ ಮಾರಾಟ ಮಾಡುವವರು ಅಲ್ಲಲ್ಲಿ ಹುಟ್ಟಿಕೊಂಡಿದ್ದಾರೆ. ತಳ್ಳುಗಾಡಿಯಲ್ಲಿ ಕಬ್ಬು ಅರೆಯುವ ಸಣ್ಣ ಯಂತ್ರವನ್ನು ಇಟ್ಟುಕೊಂಡು ಬೀದಿಬದಿಯಲ್ಲಿ ಕಬ್ಬಿನ ಹಾಲು ಮಾರಾಟವೂ ಹೆಚ್ಚಿದೆ. ಬಿಸಿಲಿನ ತಾಪ ಹೆಚ್ಚಾದಂತೆ ಹಣ್ಣು, ಜ್ಯೂಸ್‌, ಎಳನೀರು ಮಾರುವವರಿಗೆ ಇದೀಗ ವ್ಯಾಪಾರದ ಸುಗ್ಗಿಯೇ ಸುಗ್ಗಿ.

ಎಳನೀರಿಗೆ ಭಾರೀ ಡಿಮ್ಯಾಂಡ್‌
ಮಾರುಕಟ್ಟೆಯಲ್ಲಿ ಕೂಡ ಎಳನೀರು ಕಾಣಸಿಗುವುದು ಆಪರೂಪ. ಕರಾವಳಿಯಲ್ಲಿ ಎಳನೀರಿಗೆ ಭಾರಿ ಬೇಡಿಕೆಯಿದ್ದು, 35ರಿಂದ 40 ರೂಪಾಯಿಗೆ ಎಳನೀರು ಮಾರಾಟವಾಗುತ್ತಿದೆ. ದರ ಏರಿಕೆಯಿಂದ ಎಳನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಬಿಸಿಲಿನ ಧಗೆಯಿಂದಾಗಿ ಬೇಡಿಕೆಯೂ ಹೆಚ್ಚಿದೆ. ಆದರೂ ಗ್ರಾಹಕರು ಬಿಸಿಲಿನ ದಾಹವನ್ನು ತಣಿಸಲು ಎಳನೀರು ಕುಡಿಯಲು ಮುಂದಾಗಿದ್ದಾರೆ.

ತೆಂಗಿನಕಾಯಿ ದರ ಏರಿಕೆಯಾಗಿರುವ ಕಾರಣ ಎಳನೀರಿಗೆ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಿದೆ.

ತಾಳೆಬೊಂಡಕ್ಕೂ ಡಿಮ್ಯಾಂಡ್‌
ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಶುದ್ದ ಆಹಾರ ಮತ್ತು ಕಲಬೆರಕೆ ಇಲ್ಲದ ಕೆಲವೇ ಕೆಲವು ಆಹಾರದ‌ಲ್ಲಿ ನಿಸರ್ಗದತ್ತವಾಗಿ ಕೆಲವೊಂದು ಭಾಗಗಳಲ್ಲಿ ಮಾತ್ರ ಸಿಗುವ ತಾಳೆಬೊಂಡಕ್ಕೆ ಮಾತ್ರ ಬೇಡಿಕೆ ಇನ್ನೂ ಕಡಿಮೆಯಾಗಿಲ್ಲ. ರಸ್ತೆಯಲ್ಲಿ ಹಾದು ಹೋಗುವ ಸ್ಥಳೀಯರು ಹಾಗೂ ಪ್ರವಾಸಿಗರೂ ತಾಳೆಬೊಂಡದ ರಾಶಿ ಕಂಡು ವಾಹನವನ್ನು ನಿಲ್ಲಿಸಿ ಖರೀದಿಸುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ. ಮೂರು ಕಣ್ಣುಗಳಿರುವ ಒಂದು ತಾಳೆಬೊಂಡ 20ರಿಂದ 25 ರೂ. ಗೆ ಮಾರಾಟವಾಗುತ್ತಿವೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.