Cattle;ಬೇಸಗೆ ಧಗೆ; ಜಾನುವಾರುಗಳಿಗೆ ಸುಸ್ತು-ಸಂಕಟ


Team Udayavani, Apr 14, 2023, 3:54 PM IST

cowಬೇಸಗೆ ಧಗೆ; ಜಾನುವಾರುಗಳಿಗೆ ಸುಸ್ತು-ಸಂಕಟ

ಉಡುಪಿ: ಚರ್ಮಗಂಟು ರೋಗ ಇಳಿಮುಖ ವಾಗಿದ್ದು ಹೈನುಗಾರರು ಚೇತರಿಸಿ ಕೊಳ್ಳುವಷ್ಟರಲ್ಲಿ ಬಿಸಿಲ ಬೇಗೆ ಇನ್ನಷ್ಟು ಸಮಸ್ಯೆ ತಂದೊಡ್ಡುತ್ತಿದೆ.

ಜಿಲ್ಲೆಯಲ್ಲಿ ಬೇಸಗೆ ಧಗೆ ಪ್ರತಿಕೂಲ ಹವಾಮಾನ ಪರಿಣಾಮ ಜಾನುವಾರುಗಳು ಸಂಕಟಪಡು ವಂತಾಗಿದೆ. ಬಹುತೇಕ ಹಸುಗಳು ಬೇಸಗೆ ಬಿಸಿಲಿನಿಂದ ಬಸವಳಿಯುತ್ತಿದ್ದು, ಅನಾರೋಗ್ಯದಿಂದ ವರ್ತಿಸುತ್ತಿದೆ. ಕೆಲವು ಹಸುಗಳು ಕುಳಿತಲ್ಲಿಯೇ ಇದ್ದು ಮೇಲೆ ಎದ್ದೇಳಲು, ಓಡಾಡಲು ಆಗುತ್ತಿಲ್ಲ, ಒಟ್ಟಾರೆ ಬಹುತೇಕ ಜಾನುವಾರುಗಳು ಬಿಸಿಲ ಪರಿಣಾಮ ಸುಸ್ತು ಸಂಕಟದಿಂದ ನರಳಾಡುತ್ತಿವೆ. ಬಿಸಿಲಿನ ತಾಪದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ಸಂಗೋಪನೆ ಇಲಾಖೆ ಹೈನು ಗಾರರಿಗೆ ಮಾರ್ಗಸೂಚಿ ಹೊರಡಿಸಿದೆ.

ಮುಂಜಾನೆ, ಸಾಯಂಕಾಲ ಮಾತ್ರ ಮೇಯಿಸಲು ಬಿಡಬೇಕು. ಮಧ್ಯಾಹ್ನ ಸಮಯದಲ್ಲಿ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಬೇಕು. ರಾಸುಗಳಿಗೆ ಪೌಷ್ಟಿಕ ಆಹಾರ, ಹಸುರು ಹುಲ್ಲು ನೀಡಬೇಕು. ದೇಹದ ಉಷ್ಣತೆಯನ್ನು ಕಾಪಾಡಲು ಗೋಣಿಚೀಲವನ್ನು ನೀರಲ್ಲಿ ತೋಯಿಸಿ ಜಾನುವಾರುಗಳ ಮೈಮೇಲೆ ಹಾಕಬೇಕು ಎಂಬುದು ಪಶುವೈದ್ಯರ ಸಲಹೆಯಾಗಿದೆ.

ನಿರ್ಜಲೀಕರಣ ಸಮಸ್ಯೆ
ಬೇಸಗೆ ಅಧಿಕ ತಾಪಮಾನ ದಿಂದ ಮನುಷ್ಯರಂತೆ ಜಾನು ವಾರುಗಳಲ್ಲಿಯೂ ನಿರ್ಜಲೀಕರಣ ಸಮಸ್ಯೆ ಸಂಭವಿಸುತ್ತದೆ. ಇದರಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ತೀವ್ರ ಸುಸ್ತು ಅನುಭವಿಸುತ್ತವೆ. ದಿನಕ್ಕೆ 2ರಿಂದ 3 ಸಲ ಶುದ್ಧವಾದ ನೀರನ್ನು ಕುಡಿಸಬೇಕು. ಬಿಸಿಲಿನಲ್ಲಿ ಜಾಸ್ತಿ ಓಡಾಡಲು ಬಿಡಬಾರದು. ದಿನಕ್ಕೆ ಒಂದರಿಂದ ಎರಡು ಸಲ ಮೈ ತೊಳೆಯಬೇಕು ಎಂದು ಪಶುವೈದ್ಯರು ಸಲಹೆ ನೀಡಿದ್ದಾರೆ.

ಚರ್ಮಗಂಟು ರೋಗ ಶೂನ್ಯಕ್ಕೆ ಇಳಿಕೆ
ಪ್ರಸ್ತುತ ಜಿಲ್ಲೆಯಲ್ಲಿ ಚರ್ಮಗಂಟು ರೋಗ ಶೂನ್ಯಕ್ಕೆ ತಲುಪಿದ್ದು ಹೈನುಗಾರರು ನಿಟ್ಟುಸಿರು ಬಿಡುವಂತಾಗಿದೆ. ವೈದ್ಯರು, ಸಿಬಂದಿ ಕೊರತೆ ನಡುವೆಯೂ ಜಿಲ್ಲೆಯಲ್ಲಿ 2.27 ಲಕ್ಷ ಜಾನುವಾರುಗಳಿಗೆ ಬೃಹತ್‌ ಲಸಿಕೆ ಪ್ರಕ್ರಿಯೆ ಪೂರ್ಣಗೊಳಿಸಿ ಶೇ.89 ಗುರಿ ಸಾಧಿಸಲಾಗಿದೆ. ಪರಿಣಾಮ ಚರ್ಮಗಂಟು ರೋಗದ ಆತಂಕ ದೂರವಾಗಿದೆ. ರೋಗದಿಂದ 91 ಹಸು, ಕರುಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ 6,375 ಜಾನುವಾರುಗಳಿಗೆ ರೋಗ ಬಾಧಿಸಿದ್ದು, 6,218 ಜಾನುವಾರುಗಳು ಗುಣಮುಖ ಹೊಂದಿದೆ. ಜಿಲ್ಲೆಯಲ್ಲಿ 20,018 ಲಸಿಕೆ ದಾಸ್ತಾನು ಇರಿಸಲಾಗಿದೆ.

ಆತಂಕ ಪಡುವ ಅಗತ್ಯವಿಲ್ಲ
ಬಿಸಿಲ ತಾಪಕ್ಕೆ ಕೆಲವು ಜಾನುವಾರುಗಳಲ್ಲಿ ಸುಸ್ತು, ಬಸವಳಿಯುವ ಲಕ್ಷಣ ಕಂಡು ಬರುತ್ತದೆ. ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ ಎದುರಾಗಿಲ್ಲ. ನೆರಳು ವಾತಾವರಣದಲ್ಲಿ ಜಾನುವಾರುಗಳನ್ನು ಬಿಡಬೇಕು, ಶುದ್ಧನೀರು ಕುಡಿಸಬೇಕು. ಅವುಗಳ ಆಹಾರ ಕ್ರಮದ ಬಗ್ಗೆಯೂ ನಿಗಾ ವಹಿಸಬೇಕು. ಬಿಸಿಲಿನ ತಾಪದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಇಲಾಖೆ ನೀಡಿರುವ ಸಲಹೆಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿಗೆ ಸಮಸ್ಯೆ ಇಲ್ಲ. ಚರ್ಮಗಂಟು ರೋಗ ಶೂನ್ಯಕ್ಕೆ ಇಳಿದಿದೆ.
– ಡಾ| ಶಂಕರ್‌ ಶೆಟ್ಟಿ, ಉಪ ನಿರ್ದೇಶಕ, ಪಶು ಸಂಗೋಪನೆ ಇಲಾಖೆ

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.