ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ : ಗುರ್ಮೆ ಸುರೇಶ್‌ ಶೆಟ್ಟಿ

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿರುಸಿನ ಮತಯಾಚನೆ 

Team Udayavani, May 2, 2023, 2:28 PM IST

 ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ : ಗುರ್ಮೆ ಸುರೇಶ್‌ ಶೆಟ್ಟಿ

ಕಾಪು : ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯೊಂದಿಗೆ ಜನಸಾಮಾನ್ಯರ ಬಹುತೇಕ ಬೇಡಿಕೆಗಳಿಗೆ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಪೂರಕವಾಗಿ ಸ್ಪಂಧಿಸಿದ್ದಾರೆ. ಅವರದ್ದೇ ಹಾದಿಯಲ್ಲಿ ಮುಂದುವರಿಯುತ್ತಾ ಕಾಪುವಿನ ಸುಂದರ ಭವಿಷ್ಯಕ್ಕಾಗಿ ದೂರದರ್ಶಿತ್ವದ ಯೋಜನೆಗಳುಳ್ಳ ಸಮಗ್ರ ಅಭಿವೃದ್ಧಿಯ ಕಲ್ಪನೆಯೊಂದಿಗೆ ನೀಲ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಲ್ಪನೆಯ ಸಾಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ವಿನಂತಿಸಿದ್ದಾರೆ.

ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ವಾರ್ಡ್‌, ಪೊಲಿಪುಗುಡ್ಡೆ, ಭಾರತ್‌ನಗರ, ಕಲ್ಯ, ದಂಡತೀರ್ಥ, ಕೋತಲಕಟ್ಟೆ, ಕೈಪುಂಜಾಲು, ಕಾಪು ಪರಿಸರದಲ್ಲಿ ಮತಯಾಚನೆ ನಡೆಸಿ, ಜೇಸಿ ಭವನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಿ.ಎಸ್‌. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಮಹತ್ವಾಕಾಂಕ್ಷಿಯ ಜನೋಪಯೋಗಿ ಜನ ಸೇವಾ ಕಾರ್ಯಕ್ರಮಗಳು ಬಿಜೆಪಿಯ ಗೆಲುವಿಗೆ ಪೂರಕವಾಗಲಿವೆ. ಅದರ ಜತೆಗೆ ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಕಳೆದ ಐದು ವರ್ಷಗಳಲ್ಲಿ ನಡೆಸಿರುವ ಮೂರು ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳು ಪಕ್ಷದ ಗೆಲುವಿನ ಅಂತರವನ್ನು ಹೆಚ್ಚಿಸುವ ವಿಶ್ವಾಸವಿದೆ ಎಂದರು.

ಸರ್ವ ವ್ಯಾಪಿ, ಸರ್ವ ಸ್ಪರ್ಷಿ ಚಿಂತನೆಯನ್ನು ಬೆಂಬಲಿಸಿ : ಸರ್ವ ವ್ಯಾಪಿ, ಸರ್ವ ಸ್ಪರ್ಷಿ ಚಿಂತನೆಯೊಂದಿಗೆ ಎಲ್ಲಾ ಜಾತಿ, ಧರ್ಮ, ಮತ, ಸಮುದಾಯದ ಜನರ ಸೇವೆಗಾಗಿ ನನ್ನ ಜೀವನದ ಪ್ರತೀಯೊಂದು ಕ್ಷಣಗಳನ್ನೂ ಮುಡಿಪಾಗಿಟ್ಟುಕೊಂಡು ಬಂದಿದ್ದೇನೆ.
ಈವರೆಗೂ ನಾನು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿರದೇ, ಜಾತಿಯ ಪರಿಮಿತಿಯಲ್ಲದೇ ಎಲ್ಲಾ ವರ್ಗಗಳ ಜನರ ಭಾವನೆಗಳಿಗೂ ಸ್ಪಂಧಿಸಿಕೊಂಡು ಬಂದಿದ್ದೇನೆ. ಕ್ಷೇತ್ರದ ಪ್ರತೀಯೊಬ್ಬ ಮತದಾರರ ಆಶೋತ್ತರಗಳಿಗೆ ಸ್ಪಂಧಿಸುವ ಗುರಿಯೊಂದಿಗೆ ಚುನಾವಣಾ ಕಣದಲ್ಲಿದ್ದೇನೆ. ತಾವೆಲ್ಲರೂ ಬೆಂಬಲಿಸಿ, ಗೆಲ್ಲಿಸುವಿರೆಂಬ ವಿಶ್ವಾಸವಿದೆ ಎಂದರು.

ಸೇವೆಗಾಗಿಯೇ ಜೀವನ ಮುಡಿಪಾಗಿಟ್ಟಿರುವ ಗುರ್ಮೆ ಸುರೇಶ್‌ ಶೆಟ್ಟಿ : ಮಟ್ಟಾರು
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ವೃತ್ತಿಯಲ್ಲಿ ಉದ್ಯಮಿಯಾಗಿ, ಪ್ರವೃತ್ತಿಯಲ್ಲಿ ಸಮಾಜ ಸೇವಕರಾಗಿರುವ ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪರ್ಯಾಯವಾಗುವ ವ್ಯಕ್ತಿ ಬೇರೊಬ್ಬರಿಲ್ಲ. ಸಮಾಜ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟುಕೊಂಡಿರುವ ಸುರೇಶ್‌ ಶೆಟ್ಟಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಅವರನ್ನು ಬಹುಮತದಿಂದ ಆರಿಸಿ, ವಿಧಾನಸಭೆಗೆ ಕಳುಹಿಸುವ ಮೂಲಕ ಕಾಪು ಕ್ಷೇತ್ರದ ಗೌರವವನ್ನು ಎತ್ತಿಹಿಡಿಯೋಣ. ಅದಕ್ಕಾಗಿ ನಾವು ನಿರಂತರವಾಗಿ ಶ್ರಮಿಸೋಣ ಎಂದರು.

ಬಿಜೆಪಿ ಅಭ್ಯರ್ಥಿ ಪ್ರಮುಖ್‌ ಗಂಗಾಧರ ಸುವರ್ಣ, ಕಾಪು ಪುರಸಭಾ ವ್ಯಾಪ್ತಿ ಮಹಾಶಕ್ತಿ ಕೆಂದ್ರದ ಅಧ್ಯಕ್ಷ ಸಂದೀಪ್‌ ಶೆಟ್ಟಿ ಕನ್ಯಾನಗುತ್ತು, ಪುರಸಭೆ ಮಾಜಿ ಅಧ್ಯಕ್ಷ ಅನಿಲ್‌ ಕುಮಾರ್‌, ಸದಸ್ಯರಾದ ಅರುಣ್‌ ಶೆಟ್ಟಿ ಪಾದೂರು, ಕಿರಣ್‌ ಆಳ್ವ, ರತ್ನಾಕರ ಶೆಟ್ಟಿ, ಸುರೇಶ್‌ ದೇವಾಡಿಗ, ಲತಾ ದೇವಾಡಿಗ, ಮಾಜಿ ಸದಸ್ಯರಾದ ರಮೇಶ್‌ ಹೆಗ್ಡೆ, ಗುಲಾಬಿ ಪಾಲನ್‌, ಪ್ರದೀಪ್‌ ಯು., ಪಕ್ಷದ ಮುಖಂಡರಾದ ರಮಾ ವೈ. ಶೆಟ್ಟಿ, ಮೋಹನ್‌ ಕಲ್ಯ, ನರೇಶ್‌ ಕೈಪುಂಜಾಲು, ರಮೇಶ್‌ ಪೂಜಾರಿ, ಚಂದ್ರಹಾಸ ಶೆಟ್ಟಿ, ರಂಜಿತ್‌ ದೇವಾಡಿಗ, ಸುನಿಲ್‌ ಮಡಿವಾಳ, ಅಶೋಕ್‌ ಶೆಟ್ಟಿ, ಪೂರ್ಣಿಮಾ ಚಂದ್ರಶೇಖರ್‌ ಮೊದಲಾದವರು ಉಪಸ್ಥಿತರಿದ್ದರು.

ಸರಕಾರದ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಪೂರಕ : ಲಾಲಾಜಿ ಆರ್‌. ಮೆಂಡನ್‌
ಪಡುಬಿದ್ರಿ : ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಸೋಮವಾರ ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಕಾಪು ಕ್ಷೇತ್ರದಲ್ಲಿ ಹಿಂದಿಗಿಂತಲೂ ಅದ್ಬುತ ರೀತಿಯಲ್ಲಿ ಬಿಜೆಪಿಗೆ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲಾ ಕಡೆಗಳಲ್ಲೂ ನಾವು ನಡೆಸಿರುವ ಅಭಿವೃದ್ಧಿ ಕೆಲಸಗಳು ಮಾತನಾಡುತ್ತಿವೆ. ಇನ್ನಷ್ಟು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇವೆ ಎಂದು ಜನ ಹೇಳುತ್ತಿದ್ದು ಇದು ಕಾಂಗ್ರೆಸಿಗರ ಹತಾಶೆಗೆ ಕಾರಣವಾಗುತ್ತಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಮತಗಳೊಂದಿಗೆ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರನ್ನು ಗೆಲ್ಲಿಸುವ ಹೊಣೆ ಹೊರಬೇಕಿದೆ. ಇನ್ನುಳಿದ ಅಲ್ಪ ದಿನಗಳು ನಿರ್ಣಾಯಕ ದಿನಗಳಾಗಿದ್ದು ಯಾವುದೇ ಕ್ಷಣದಲ್ಲೂ ಮೈಮರೆಯದೇ ಪಕ್ಷ ಮತ್ತು ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕಿದೆ ಎಂದರು. ಪಕ್ಷದ ಮುಖಂಡರಾದ ಶಿವರಾಮ ಭಂಡಾರಿ, ರವೀಂದ್ರ ಪ್ರಭು, ಸಚಿನ್‌ ಮುದರಂಗಡಿ, ಉದಯ್‌ ಮೊದಲಾದವರು ಜತೆಗಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.