ಕಾಂಪೌಂಡ್‌ ಕುಸಿದು ಒಂದು ವರ್ಷವಾದರೂ ದುರಸ್ತಿಯಾಗಿಲ್ಲ, ಶಾಲಾ ಕಟ್ಟಡವೂ ಕುಸಿತ ಭೀತಿ

ಹೆಬ್ರಿ: ಕೊಂಕಣಾರಬೆಟ್ಟು ಶಾಲೆ

Team Udayavani, Oct 15, 2020, 4:52 AM IST

ಕಾಂಪೌಂಡ್‌ ಕುಸಿದು ಒಂದು ವರ್ಷವಾದರೂ ದುರಸ್ತಿಯಾಗಿಲ್ಲ, ಶಾಲಾ ಕಟ್ಟಡವೂ ಕುಸಿತ ಭೀತಿ

ವರ್ಷದ ಹಿಂದೆ ಕುಸಿದು ಬಿದ್ದ ಕೊಂಕಣಾರಬೆಟ್ಟು ಶಾಲೆಯ ಕಾಂಪೌಂಡ್‌.

ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಕೊಂಕಣಾರಬೆಟ್ಟು ಶಾಲಾ ಕಾಂಪೌಂಡ್‌ ಕಳೆದ ವರ್ಷದ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದ್ದು ವರ್ಷ ಕಳೆದರೂ ಇನ್ನೂ ದುರಸ್ತಿಗೊಂಡಿಲ್ಲ . ಈಗ ಭಾರೀ ಮಳೆಯಿರುವುದರಿಂದ ಶಾಲಾ ಮೈದಾನದ ಮಣ್ಣು ಕುಸಿಯುತ್ತಿದ್ದು ಶಾಲಾ ಕಟ್ಟಡವೂ ಕುಸಿಯುವ ಭೀತಿ ಎದುರಾಗಿದೆ.

ಕಳೆದ ವರ್ಷ ಮಳೆಗಾಲದಲ್ಲಿ ಶಾಲಾ ಕಾಂಪೌಂಡ್‌ ತಾಗಿ ಖಾಸಗಿ ಕಂಪೆನಿಯವರು ಪೈಪ್‌ಲೈನ್‌ ಅಳವಡಿಸಲು ಹೊಂಡ ತೋಡಿದ್ದು ಅದರ ಜತೆಗೆ ವಿಪರೀತ ಮಳೆಯ ಕಾರಣ ಕಾಂಪೌಂಡ್‌ ಸಂಪೂರ್ಣ ಕುಸಿದು ಬಿದ್ದಿತ್ತು. ಮಳೆಯ ನೀರು ಮೈದಾನದಲ್ಲಿ ರಭಸದಿಂದ ಹರಿದ ಪರಿಣಾಮ ಶಾಲಾ ಮೈದಾನ ಕೂಡ ಕುಸಿಯುವ ಹಂತಕ್ಕೆ ತಲುಪಿದ್ದು ಕಟ್ಟಡವೂ ಕುಸಿಯುವ ಭೀತಿ ಇದೆ. ಈ ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಈ ಹಿಂದೆ ಭೇಟಿ ನೀಡಿ ಪ್ರಕೃತಿ ವಿಕೋಪ ನಿಧಿಯಲ್ಲಿ ದುರಸ್ತಿ ಮಾಡುವುದಾಗಿ ತಿಳಿಸಿದ್ದರು. ಆದರೆ ಇದುವರೆಗೂ ದುರಸ್ತಿ ಕಾಣದಿರುವುದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಸ್ಥಳೀಯಾಡಳಿತದವರಲ್ಲಿ ವಿಚಾರಿಸಿದಾಗ ಶಾಲಾ ಕಾಂಪೌಂಡ್‌ ದುರಸ್ತಿ ಮಾಡುವಷ್ಟು ಅನುದಾನ ನಮ್ಮ ಪಂಚಾಯತ್‌ನಲ್ಲಿ ಇಲ್ಲದ ಕಾರಣ ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಮುದ್ರಾಡಿಯಿಂದ ಕಬ್ಬಿನಾಲೆಗೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಇದರ ಬದಿಯಲ್ಲಿಯೇ ಶಾಲಾ ಆವರಣ ಕುಸಿದು ಬಿದ್ದಿದ್ದು ಗೋಡೆಯ ಬದಿಯಲ್ಲಿ ದೊಡ್ಡ ಗಾತ್ರದ ಕಲ್ಲುಗಳ ರಾಶಿ ಇದ್ದು ಸಂಚರಿಸಲು ಆತಂಕವಾಗುತ್ತಿದೆ. ಇದೀಗ ಮಳೆ ಕೂಡ ಹೆಚ್ಚಾಗಿದ್ದು ಈ ಭಾಗ ದಲ್ಲಿ ವಾಹನ ಸಂಚಾರ, ಜನರ ಓಡಾಟ ಅಪಾಯ ದಿಂದ ಕೂಡಿದೆ ಎಂದು ಸ್ಥಳೀಯರು ದೂರಿದ್ದಾರೆ.

ಗ್ರಾಮಸ್ಥರಿಂದಲೇ ನಿರ್ಮಾಣ
ರಸ್ತೆಯ ಬದಿಯಲ್ಲಿ ಶಾಲೆ ಇರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತದೆ ಎಂಬ ಕಾರಣದಿಂದ ಸುಮಾರು 20 ವರ್ಷಗಳ ಹಿಂದೆ ಸ್ಥಳೀಯರು ಸೇರಿ ಈ ಶಾಲೆಗೆ ವಿಸ್ತಾರವಾದ ಮೈದಾನ ಹಾಗೂ ಆವರಣ ಗೋಡೆಯನ್ನು ನಿರ್ಮಿಸಿದ್ದರು. ಆದರೆ ಶಾಲಾ ಆವರಣ ಗೋಡೆ ಮಳೆಗೆ ಕುಸಿದು ಬಿದ್ದು ವರ್ಷ ಕಳೆದರೂ ಅದನ್ನು ನಿರ್ಮಿಸಲು ಯಾವುದೇ ಕ್ರಮವನ್ನು ಇಲಾಖೆ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಹಲವಾರು ಬಾರಿ ಮನವಿ
ಈ ಬಗ್ಗೆ ಶಾಲಾ ಸಿಬಂದಿಗೆ, ಶಿಕ್ಷಣ ಇಲಾಖೆ, ಸ್ಥಳೀಯ ಜನಪ್ರತಿನಿಧಿ, ಸ್ಥಳೀಯ ಪಂಚಾಯತ್‌ಗೆ ಹಲವಾರು ಬಾರಿ ದೂರು ನೀಡಿದ್ದರೂ ಯಾವುದೇ ಪ್ರತಿಕ್ರಿಯೆಯಾಗಲಿ, ಆಶ್ವಾಸನೆಯಾಗಲಿ ಬಂದಿಲ್ಲ, ಶಾಲಾ ಕಾಂಪೌಂಡ್‌ ಕುಸಿತದಿಂದ ಶಾಲಾ ಮೈದಾನದ ಮಣ್ಣು ರಸ್ತೆಗೆ ಆವರಿಸಿದ್ದು ವಾಹನ ಸಂಚಾರಕ್ಕೂ ತೊಂದರೆಯಾಗಿದೆ, ಆದಷ್ಟು ಬೇಗ ಸಂಬಂಧಪಟ್ಟವರು ಶಾಲಾ ಆವರಣ ಗೋಡೆಯನ್ನು ನಿರ್ಮಿಸಿಕೊಡಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಅಪಾಯ ತಪ್ಪಿದ್ದಲ್ಲ
ಶಾಲಾ ಕಾಂಪೌಂಡ್‌ ಸಂಪೂರ್ಣ ಕುಸಿದಿದ್ದು ಕಾಂಪೌಂಡ್‌ಗೆ ತಾಗಿದಂತೆ ಶಾಲಾ ಕಟ್ಟಡವಿದ್ದು ಪಕ್ಕದಲ್ಲಿರುವ ಶಾಲಾ ಮೈದಾನ ಕೂಡ ಮಳೆ ನೀರಿನ ಹರಿವಿನಿಂದ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅಲ್ಲದೆ ಕಳೆದ 3 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಶಾಲಾ ಕಟ್ಟಡ ಕೂಡಾ ಕುಸಿಯುವ ಭೀತಿ ಎದುರಾಗಿದೆ. ಕೂಡಲೇ ಸಂಬಂಧಪಟ್ಟವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಶೀಘ್ರ ದುರಸ್ತಿ
ಕೊಂಕಣಾರಬೆಟ್ಟು ಸ.ಕಿ. ಪ್ರಾ. ಶಾಲೆಯ ಕಂಪೌಂಡ್‌ ದುರಸ್ತಿಗೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ 93 ಮೀ. ಉದ್ದದ ಕಂಪೌಂಡ್‌ ನಿರ್ಮಾಣಕ್ಕೆ 2ಲಕ್ಷ 95 ಸಾ.ರೂ. ಹಣ ಇಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಶೀಘ್ರವಾಗಿ ಶಾಲಾ ಕಾಂಪೌಂಡ್‌ ದುರಸ್ತಿ ಕಾರ್ಯ ನಡೆಯಲಿದೆ.
– ಶಶಿಧರ್‌ ಜಿ.ಎಸ್‌. ಕ್ಷೇತ್ರ ಶಿಕ್ಷಾಣಾಧಿಕಾರಿ, ಕಾರ್ಕಳ

ಅಪಾಯ ಖಂಡಿತ
ಶಾಲಾ ಕಾಂಪೌಂಡ್‌ ಇನ್ನೂ ದುರಸ್ತಿಯಾಗದಿರುವುದು ಬೇಸರದ ಸಂಗತಿ. ಕಾಂಪೌಂಡ್‌ನೊಂದಿಗೆ ಶಾಲಾ ಮೈದಾನ ಕೂಡ ಅಪಾಯದಲ್ಲಿದೆ. ಈ ಬಗ್ಗೆ ಸ್ಥಳೀಯಾಡಳಿತ, ಜಿಲ್ಲಾಡಳಿತ ಹಾಗೂ ಸರಕಾರ ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಅಪಾಯ ಖಂಡಿತ.
– ಶ್ರೀಕರ್‌ ಭಾರದ್ವಾಜ್‌, ಸಾಮಾಜಿಕ ಕಾರ್ಯಕರ್ತರು, ಕಬ್ಬಿನಾಲೆ

ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.