ಆನ್‌ಲೈನ್‌ ಕಂಪೆನಿಗಳಿಂದ ಸಮಸ್ಯೆ: ಮೊಬೈಲ್‌ ವ್ಯಾಪಾರಿಗಳ ಆತಂಕ


Team Udayavani, Aug 26, 2020, 12:43 AM IST

ಆನ್‌ಲೈನ್‌ ಕಂಪೆನಿಗಳಿಂದ ಸಮಸ್ಯೆ: ಮೊಬೈಲ್‌ ವ್ಯಾಪಾರಿಗಳ ಆತಂಕ

ಉಡುಪಿ: ಇತ್ತೀಚೆಗೆ ತಲೆಎತ್ತಿರುವ ಆನ್‌ಲೈನ್‌ ಕಂಪೆನಿಗಳಿಂದಾಗಿ ಹಲವಾರು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಎಲ್ಲ ಚೈನೀಸ್‌ ಮೊಬೈಲ್‌ ಕಂಪೆನಿಗಳು ಸಾಥ್‌ ನೀಡುತ್ತಿವೆ. ಇದು ಹೀಗೆಯೇ ಮುಂದುವರಿದರೆ ವ್ಯಾಪಾರ ಅವನತಿಯತ್ತ ಸಾಗುವುದರಲ್ಲಿ ಸಂಶಯವಿಲ್ಲ ಎಂದು ದ.ಕ., ಉಡುಪಿ ಮೊಬೈಲ್‌ ರಿಟೈಲರ್ ಅಸೋಸಿಯೇಶನ್‌ ಕಾರ್ಯದರ್ಶಿ ಮುನೀರ್‌ ಹೇಳಿದರು.

ಕರಾವಳಿ ಬೈಪಾಸ್‌ ಬಳಿಯ ಮಣಿಪಾಲ ಇನ್‌ಹೊಟೇಲ್‌ನಲ್ಲಿ ಮಂಗಳವಾರ ನಡೆದ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೊಬೈಲ್‌ ರಿಟೈಲರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು. ಆನ್‌ಲೈನ್‌ ಮೊಬೈಲ್‌ ಕಂಪೆನಿಗಳು ಮತ್ತು ಮೊಬೈಲ್‌ ಕಂಪೆನಿಗಳಿಂದ ನ್ಯಾಯ ಸಿಗಬೇಕಾದರೆ ಪ್ರತಿಯೊಬ್ಬ ಮೊಬೈಲ್‌ ವ್ಯಾಪಾರಸ್ಥರು ಎಐಎಂಆರ್‌ಎ ಯೊಂದಿಗೆ ಕೈಜೋಡಿಸಬೇಕು. ಟ್ವಿಟರ್‌ ಮೂಲಕ ನಿರಂತರ ಟ್ವೀಟ್‌ ಮಾಡಬೇಕು. ಈ ಮೂಲಕ ಸರಕಾರಕ್ಕೆ ನಮ್ಮ ಕೂಗು ಕೇಳಿಸಿಕೊಳ್ಳಬೇಕು ಎಂದರು. ಆನ್‌ಲೈನ್‌ ಹಿಂದೆ ಹೋದರೆ ಅಂಗಡಿ ಸಿಬಂದಿ, ಡಿಸ್ಟ್ರಿಬ್ಯೂಟರ್‌ಗಳು, ಎಎಸ್‌ಎಂ, ಆರ್‌ಎಸ್‌ಎಂಗಳು ಬೀದಿಗೆ ಬರಲಿದ್ದಾರೆ. ಈ ಬಗ್ಗೆ ಸರಕಾರ ಕೂಡ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಅನ್ಯಾಯವಾಗದಿರಲಿ
ಎಐಎಂಆರ್‌ಎ ಉಡುಪಿಯ ಕಾರ್ಯದರ್ಶಿ ವಿವೇಕ ಜಿ. ಸುವರ್ಣ (ವಿಕ್ಕಿ) ಮಾತನಾಡಿ, ಆನ್‌ಲೈನ್‌ ಕಂಪೆನಿಗಳು ಮತ್ತು ಮೊಬೈಲ್‌ ಕಂಪೆನಿಗಳಿಂದ ನ್ಯಾಯ ಸಿಗಬೇಕಾದರೆ ಪ್ರತಿಯೊಬ್ಬ ಮೊಬೈಲ್‌ ವ್ಯಾಪಾರಸ್ಥರು ಆಲ್‌ ಇಂಡಿಯಾ ಮೊಬೈಲ್‌ ರಿಟೈಲರ್ಸ್‌ ಅಸೋಸಿಯೇಶನ್‌(ಎಐಎಂಆರ್‌ಎ)ನೊಂದಿಗೆ ಕೈಜೋಡಿಸಬೇಕು. ಮೊಬೈಲ್‌ ಉದ್ಯೋಗದಲ್ಲಿ ಯುವಜನರೇ ಅಧಿಕವಾಗಿದ್ದು, ಸರಕಾರದ ಯಾವುದೇ ಸೌಲಭ್ಯ ಪಡೆಯದೆ ಸೊದ್ಯೋಗದಲ್ಲಿ ತೊಡಗಿರುವುದಲ್ಲದೆ ಅನೇಕ ಮಂದಿಗೆ ಉದ್ಯೋಗ ಕೊಟ್ಟು ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತುಕೊಂಡು ಸ್ಥಳೀಯ ವ್ಯಾಪಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಕೂಡಲೇ ಪರಿಹರಿಸಬೇಕು ಎಂದರು.

ದ.ಕ., ಉಡುಪಿ ಮೊಬೈಲ್‌ ರಿಟೈಲರ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಅಬ್ದುಲ್‌ ಸಲೀಂ, ಉಪಾಧ್ಯಕ್ಷ ಅಝರ್‌, ಎಐಎಂಆರ್‌ಎ ಉಡುಪಿ ಅಧ್ಯಕ್ಷ ಸುಹಾಸ್‌ ಕಿಣಿ ಉಪಸ್ಥಿತರಿದ್ದರು. ವಿವೇಕ ಜಿ. ಸುವರ್ಣ(ವಿಕ್ಕಿ) ಸ್ವಾಗತಿಸಿ, ನಿರ್ವಹಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.