Malpe -ಕಲಾಡಿ: ರಸ್ತೆಯೇ ಮಾಯ, ಎಲ್ಲವೂ ಹೊಂಡಮಯ!

ಶೀಘ್ರ ದುರಸ್ತಿಗೆ ಸಾರ್ವಜನಿಕರ ಆಗ್ರಹ

Team Udayavani, Aug 6, 2024, 6:25 PM IST

Screenshot (122)

ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಎಂದೆನಿಸಿದ ಮಲ್ಪೆ -ಕಲ್ಮಾಡಿ ಮುಖ್ಯ ರಸ್ತೆಯು ತೀರ ಹದಗೆಟ್ಟಿದ್ದು ಸುಗಮ ಸಂಚಾರಕ್ಕೆ ಅಸಾಧ್ಯವಾಗಿದೆ. ಇಲ್ಲಿನ ರಸ್ತೆಯನ್ನು ಶೀಘ್ರ ದುರಸ್ತಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಲ್ಪೆಯಿಂದ ಕಲ್ಮಾಡಿಯವರೆಗೆ ಸುಮಾರು 1 ಕಿ.ಮೀ ರಸ್ತೆ ಒಂದೇ ಸವನೆ ಹೊಂಡದ ರಾಶಿಯೇ ಎದ್ದು ಕಾಣುತ್ತಿದ್ದು ದ್ವಿಚಕ್ರ ಸವಾರರು ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಎಲ್ಲ ವಾಹನ ಚಾಲಕರಂತೂ ಆಡಳಿತ ವ್ಯವಸ್ಥೆಯ ಕುರಿತು ಗೊಣಗುತ್ತಲೇ ವಾಹನ ಓಡಿಸುತ್ತಿದ್ದಾರೆ. ಮಳೆಯ ಅರ್ಭಟಕ್ಕೆ ಈಗ ಸಂಪೂರ್ಣ ಹದಗೆಟ್ಟು ಬಾಯ್ದೆರೆದು ನಿಂತಿದೆ.

ಹದಗೆಟ್ಟ ರಸ್ತೆಯ ಸಮೀಪವೇ ಸರಕಾರಿ ಪದವಿ ಪೂರ್ವ ಕಾಲೇಜು, ಎರಡೂ ಪ್ರೌಢಶಾಲೆಗಳು ಇದ್ದು, ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ. ಮೀನುಗಾರಿಕೆ ಬಂದರು ಇರುವುದರಿಂದ ಪ್ರಸ್ತುತ ಋತು ಆರಂಭವಾಗಿದ್ದು ಇದೀಗ ಇಲ್ಲಿ ದಿನದ ಪೂರ್ತಿ ವಾಹನ ಸಂಚಾರ ಇರುತ್ತದೆ. ಈ ಎಲ್ಲ ವಾಹನಗಳು ಇದೇ ರಸ್ತೆಯಲ್ಲಿ ಪ್ರಯಾಸ ಪಟ್ಟು ಸಂಚಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಎಲ್ಲ ಕಡೆ ಹೊಂಡದ ರಾಶಿಯೇ ಇದ್ದು ವಾಹನ ಚಾಲಕರು ಸರ್ಕಸ್‌ ಮಾಡುತ್ತಲೇ ವಾಹನ ಚಲಾಯಿಸಬೇಕಾಗಿದೆ.
ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಏನೂ ಪ್ರಯೋಜನವಾಗಿಲ್ಲ. ಕೆಲವೇ ದಿನದ ಹಿಂದಷ್ಟೆ ಕೆಲವಡೆ ಕಾಟಚಾರಕ್ಕೆ ಎಂಬಂತೆ ಗುಂಡಿಗೆ ಸಿಮೆಂಟು ಮಿಶ್ರಿತ ಕಲ್ಲುಗಳನ್ನು ಸುರಿದು ತೇಪೆ ಹಚ್ಚುವ ಕಾರ್ಯ ಮಾಡಿದ್ದಾರೆ. ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕಲ್ಲು ಮಣ್ಣುಗಳೆಲ್ಲವೂ ಕೊಚ್ಚಿ ಹೋಗಿ ಪುನ್‌ ಅದೇ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟಿರುವ ರಸ್ತೆಯಿಂದ ಬೇಸತ್ತಿರುವ ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಶೀಘ್ರದಲ್ಲಿ ರಸ್ತೆ ಸರಿ ಪಡಿಸದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ ಯನ್ನು ನೀಡಿದ್ದಾರೆ ಎಂದು ಹೇಳುತ್ತಾರೆ ಮಲ್ಪೆಯ ಮಹೇಶ್‌ ಬಂಗೇರ.

ತುರ್ತು ಅಭಿವೃದ್ಧಿ ಕೈಗೊಳ್ಳಲಿ
ರಸ್ತೆ ವಿಸ್ತರೀಕರಣದ ಟೆಂಡರ್‌ ಪ್ರಕ್ರಿಯೆ ಪ್ರಾರಂಭವಾದ ವರ್ಷಗಳಿಂದ ಇಲ್ಲಿನ ರಸ್ತೆಗೆ ಸರಿಯಾಗಿ ಡಾಮರೀಕರಣವಾಗದೇ ಹೊಂಡ ಗುಂಡಿಗಳಿಂದ ಕೂಡಿದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಿಂದಲೇ ವಾಹನ ಚಲಾಯಿಸಬೇಕಾಗಿದೆ. ಘನ ವಾಹನಗಳು ದಟ್ಟವಾಗಿ ಸಂಚರಿಸುವ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡೇ ಸಂಚರಿಸಬೇಕಾದಂತಹ ಅನಿವಾರ್ಯತೆ ಇದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಜನರ ಹಿತದೃಷ್ಟಿಯಿಂದ ತುರ್ತು ಅಭಿವೃದ್ಧಿಯನ್ನು ಕೈಗೊಳ್ಳಬೇಕಾಗಿದೆ.

– ಸುನೀಲ್‌ದಾಸ್‌ ಎಂ., ಮಲ್ಪೆ, ಸಸಿತೋಟ

ರಿಕ್ಷಾ ಬರಲು ಹಿಂದೇಟು

ಇಲ್ಲಿನ ವಾಹನ ಸಂಚಾರ ಬಿಡಿ ನಡೆದಾಡಲು ಪರದಾಡುವಂತಾಗಿದೆ. ಈ ರಸ್ತೆ ತೀರ ಹದಗೆಟ್ಟಿರುವುದರಿಂದ ರಿಕ್ಷಾ ಚಾಲಕರು ಬಾಡಿಗೆಗೆ ಬರಲು ಹಿಂದೇಟು ಹಾಕುತಿದ್ದಾರೆ. ಮಲ್ಪೆ ರಿಕ್ಷಾ ಉಡುಪಿ ಬಾಡಿಗೆಗೆ, ಉಡುಪಿಯ ರಿಕ್ಷಾ ಮಲ್ಪೆಗೆ ಬಾಡಿಗೆಗೆ ಬರಲು ಈ ರಸ್ತೆಯಲ್ಲಿ ಒಪ್ಪುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಮಲ್ಪೆ -ಕಲ್ಮಾಡಿ ದಾಟುವ ವರೆಗೂ ಆತಂಕ

ಕೆಲವು ವರ್ಷಗಳ ಹಿಂದೆ ಕಲ್ಮಾಡಿ ರಸ್ತೆಯ ಕಾಂಕ್ರೀ ಟಿಕರಣ ನಡೆದಾಗ, ಎರಡೂ ಬದಿಯಲ್ಲಿ ಡಾಮರೀಕರಣ ಮಾಡುವ ಬದಲು ಇಂಟರ್‌ಲಾಕ್‌ಅನ್ನು ಅಳವಡಿಸಲಾಗಿತ್ತು. ಇದು ತಕ್ಕಮಟ್ಟಿಗೆ ರಸ್ತೆಯ ಸಮತಟ್ಟು ಸರಿಹೊಂದುವಂತೆ ಮಾಡಿದರೂ, ದ್ವಿಚಕ್ರ ಸವಾರರಿಗೆ ಕಂಟಕಪ್ರಾಯವಾಯಿತು. ಮೀನು ತುಂಬಿದ ಲಾರಿಗಳು ಬೇಕಾಬಿಟ್ಟಿಯಾಗಿ ನೀರನ್ನು ಚೆಲ್ಲಿಕೊಂಡು ಹೋದ ಕಾರಣ ಹಲವಾರು ದ್ವಿಚಕ್ರ ವಾಹನ ಸವಾರರು ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಇದೀಗ ಹಾಕಿದ ಇಂಟರ್‌ಲಾಕ್‌ ಎದ್ದು ಹಾಳಾಗಿ ವರ್ಷಗಳೆ ಕಳೆದವು. ದ್ವಿಚಕ್ರ ವಾಹನ ಸವಾರರು ಕಲ್ಮಾಡಿ ದಾಟುವವರೆಗೆ ಆತಂಕದಿಂದಲೇ ಇರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಾರೆ ಮಲ್ಪೆಯ ಸುನೀಲ್‌ದಾಸ್‌.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

21

CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್‌ಪಾಲ್‌ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

car-parkala

Bramavara: ಅಪಘಾತ: ಸ್ಕೂಟಿ ಸವಾರ ಸಾವು

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.