Kaljiga: ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
Team Udayavani, Sep 17, 2024, 5:23 PM IST
ಉಡುಪಿ: ಕಲ್ಜಿಗ ಸಿನೆಮಾದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ. ಸಿನೆಮಾ ನೋಡಿದವರಿಗೆ ಇದು ಮನವರಿಕೆಯಾಗಿದೆ. ಸಿನೆಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದರೆ ಉತ್ತಮ ಎಂದು ಕಲ್ಜಿಗ ಸಿನೆಮಾ ನಿರ್ದೇಶಕ ಸುಮನ್ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಕರಾವಳಿ ಭಾಗದ ಜನತೆ ಕಲೆಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಮಕ್ಕಳಿಂದ ಹಿರಿಯರವರೆಗೂ ಚಿತ್ರ ನೋಡಿದವರು ಈಗಾಗಲೇ ಮೆಚ್ಚುಗೆ ಸೂಚಿಸಿ ಮತ್ತೊಮ್ಮೆ ಚಿತ್ರಮಂದಿರದತ್ತ ಬರುತ್ತಿರುವುದು ಮತ್ತಷ್ಟು ಖುಷಿ ನೀಡುತ್ತಿದೆ. ಹೊಡೆದಾಟ, ಬಡಿದಾಟದ ಚಿತ್ರಗಳೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ನಡುವೆ ಈ ಚಿತ್ರ ಭಿನ್ನ ರೀತಿಯಲ್ಲಿ ಮೂಡಿಬಂದಿದೆ ಎಂದರು.
ನಿರ್ಮಾಪಕ ಶರತ್ ಕುಮಾರ್ ಮಾತನಾಡಿ, ಉಡುಪಿ, ಕುಂದಾಪುರ, ಮಣಿಪಾಲ ಭಾಗದಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಧರ್ಮ, ಸತ್ಯದ ಸಿನೆಮಾ ಇದಾಗಿದೆ. ಯಾವುದೇ ಸಿನೆಮಾದಲ್ಲಿ ದೇವರನ್ನು ದೇವರ ಹಾಗೆ ಹಾಗೂ ದೈವವನ್ನು ದೈವದ ರೀತಿಯಲ್ಲಿ ಚಿತ್ರೀಕರಿಸಿದರೆ ಯಾವುದೇ ಸಮಸ್ಯೆಯಾಗದು. ಆದರೆ ಅಪಹಾಸ್ಯ ಮಾಡುವಂತಾಗಬಾರದು. ಈ ಚಿತ್ರದಲ್ಲಿ ಅಂತಹ ಯಾವುದೇ ಅಂಶಗಳಿಲ್ಲ ಎಂದರು.
ನಟ ಅರ್ಜುನ್ ಕಾಪಿಕಾಡ್ ಮಾತನಾಡಿ, ಕುಟುಂಬಸ್ಥರೆಲ್ಲ ಒಟ್ಟಾಗಿ ಚಿತ್ರಮಂದಿರಕ್ಕೆ ಬರುತ್ತಿರುವುದು ಚಿತ್ರದ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ತುಳು ಭಾಷೆಯ ಮೂಲ ಗೊತ್ತಾಗಬೇಕೆಂಬ ಉದ್ದೇಶದಿಂದಲೇ ಕನ್ನಡ ಸಿನೆಮಾವಾದರೂ ತುಳು ಟೈಟಲ್ ಇಡಲಾಗಿದೆ ಎಂದರು.
ಕಲಾವಿದ ಮಂಜು ಸುವರ್ಣ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.