Belman: ಬೆಳೆಯುತ್ತಿರುವ ಬೆಳ್ಮಣ್‌ಗೆ ಸರಿಯಾದ ಬಸ್‌ ನಿಲ್ದಾಣವೇ ಇಲ್ಲ

ಮಳೆಗೆ ಒದ್ದೆಯಾಗಿ, ಬಿಸಿಲಿಗೆ ಒಣಗಿ ಬಸ್‌ ಕಾಯಬೇಕು

Team Udayavani, Aug 1, 2024, 12:19 PM IST

Screenshot (58)

ಬೆಳ್ಮಣ್‌: ವಿವಿಧ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಬೆಳ್ಮಣ್‌ ಪೇಟೆ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಇಷ್ಟು ದೊಡ್ಡ ಪೇಟೆಯಲ್ಲಿ ಬಸ್‌ ಪ್ರಯಾಣಿಕರಿಗೆ ಸೂಕ್ತವಾದ ಬಸ್ಸು ನಿಲ್ದಾಣವೇ ಇಲ್ಲ. ಪ್ರಯಾಣಿಕರು ಮಳೆಗಾಲದಲ್ಲಿ ನೆನೆಯುತ್ತಾ, ಬೇಸಿಗೆಯಲ್ಲಿ ಒಣಗುತ್ತಾ ಅಂಗಡಿಗಳ ಮುಂದೆ ನಿಲ್ಲಬೇಕಾಗಿದೆ.

ಬೆಳ್ಮಣ್‌ ಬಸ್ಸು ನಿಲ್ದಾಣದಲ್ಲಿ ಹಿಂದಿನಿಂದಲೂ ಮಂಗಳೂರು ಕಡೆಗೆ ಸಾಗುವ ಬಸ್‌ಗಳಿಗೆ ತಂಗುದಾಣವಿದೆ. ಆದರೆ, ಅದು ಕಿರಿದಾಗಿದ್ದು ಕೆಲವೇ ಮಂದಿ ನಿಂತರೂ ತುಂಬಿ ಹೋಗುತ್ತದೆ. ಉಳಿದ ಪ್ರಯಾಣಿಕರು ಮಳೆ ಬಿಸಿಲಿಗೆ ಹೊರಗೆ ನಿಂತುಕೊಂಡೇ ಬಸ್ಸು ಕಾಯುವುದು ಅನಿವಾರ್ಯವಾಗಿದೆ. ಇನ್ನು ಕಾರ್ಕಳ ಹಾಗೂ ಉಡುಪಿ ಕಡೆಯತ್ತ ಬಸ್ಸು ಕಾಯುವ ಮಂದಿಗೆ ಯಾವ ವ್ಯವಸ್ಥೆಯೂ ಇಲ್ಲ. ಅವರು ಗಂಟೆಗಟ್ಟಲೆ ಮಳೆಯಲ್ಲಿ ನೆನೆದು ಬಿಸಿಲಲ್ಲಿ ಬೇಯಲೇಬೇಕು.

ಪ್ರತೀ ದಿನ ನಿಟ್ಟೆ, ಉಡುಪಿ, ಶಿರ್ವ, ಕಾರ್ಕಳ ಹಾಗೂ ಮಂಗಳೂರು ಭಾಗದ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ವಿವಿಧ ಧಾರ್ಮಿಕ ಕೇಂದ್ರ, ಸರಕಾರಿಕಛೇರಿಗಳಿಗೆ ತೆರಳುವ ಜನ ರಸ್ತೆಯ ಬದಿಯಲ್ಲೇ ಬಸ್ಸಿಗಾಗಿ ಕಾಯುವಂತಾಗಿದೆ. ಕೆಲವೊಮ್ಮೆ ಜೋರಾಗಿ ಬೀಸುವ ಗಾಳಿ ಸಹಿತ ಮಳೆಯಿಂದ ರಕ್ಷಿಸಿಕೊಳ್ಳಲು ಸಮೀಪದಲ್ಲಿರುವ ಅಂಗಡಿಗಳ ಆಶ್ರಯವನ್ನು ಪಡೆಯುವಂತಾಗಿದೆ.

ಹೀಗಾಗಿ ಬೆಳ್ಮಣ್‌ನಿಂದ ಮಂಗಳೂರು ಸಾಗುವ ಕಡೆಯಲ್ಲಿ ಸುಂದರವಾದ ಹೆಚ್ಚು ಸಾಮರ್ಥಯವನ್ನು ಹೊಂದುವಂತಹ ತಂಗುದಾಣದ ಜೊತೆಯಲ್ಲಿ ಕಾರ್ಕಳ ಕಡೆಯತ್ತ ಸಾಗುವ ಭಾಗದಲ್ಲಿಯೂ ಪ್ರಯಾಣಿಕರಿಗೆ ಬಸ್ಸು ಕಾಯಲು ಅನುಕೂಲವಾಗುವ ನಿಟ್ಟಿನಲ್ಲೊಂದು ಪ್ರಯಾಣಿಕರ ತಂಗುದಾಣದ ಅಗತ್ಯವಿದೆ ಎನ್ನುವುದು ಪ್ರಯಾಣಿಕರ ಮನವಿ.

ಪ್ರಯಾಣಿಕರಿಗೆ ಸಂಕಷ್ಟ
ಪ್ರಮುಖ ಪೇಟೆಯಾಗಿರುವ ಬೆಳ್ಮಣ್‌ಗೆ ಸೂಕ್ತ ಬಸ್ಸು ತಂಗುದಾಣದ ಅಗತ್ಯ ಇದೆ. ಕಾಲೇಜಿಗೆ ತೆರಳುವವರು ಅಂಗಡಿ ಮುಂಭಾಗದಲ್ಲಿ ಒದ್ದೆಯಾಗಿ ನಿಂತು ಬಸ್‌ ಕಾಯಬೇಕು. ಪ್ರಯಾಣಿಕರ ಕಷ್ಟ ಅರಿತು ಸೂಕ್ತ ನಿಲ್ದಾಣ ನಿರ್ಮಿಸಬೇಕು.
-ರಘುನಾಥ್‌, ಬೆಳ್ಮಣ್‌ ನಿವಾಸಿ, ಪ್ರಸ್ತುತ್‌ ಶೆಟ್ಟಿ, ಕಾಲೇಜು ವಿದ್ಯಾರ್ಥಿ

ಬಸ್‌ ನಿಲ್ದಾಣಕ್ಕೆ ಪ್ರಯತ್ನ
ಪಂಚಾಯತ್‌ನ ಸಭೆಯಲ್ಲಿ ಸಮಾಲೋಚನೆ ನಡೆಸಿ ಪ್ರಯಾಣಿಕರಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್‌ ತಂಗುದಾಣ ನಿರ್ಮಿಸುವ ಪ್ರಯತ್ನ ನಡೆಸಲಾಗುವುದು.
-ರಾಮೇಶ್ವರೀ ಶೆಟ್ಟಿ, ಬೆಳ್ಮಣ್‌ ಗ್ರಾ.ಪಂ. ಅಧ್ಯಕ್ಷೆ

ಬೆಳ್ಮಣ್‌ ಎಂಬ ಜಂಕ್ಷನ್‌ ಪ್ಲೇಸ್‌
ಕಾರ್ಕಳ ನಿಟ್ಟೆ ಭಾಗದಿಂದ, ಮೂಡಬಿದ್ರೆ, ಮುಂಡ್ಕೂರು ಕಿನ್ನಿಗೋಳಿ ಭಾಗದಿಂದ, ಉಡುಪಿ ಶಿರ್ವ ಕಡೆಯಿಂದ ಮತ್ತು ಪಡುಬಿದ್ರೆ, ಅಡ್ವೆ, ನಂದಿಕೂರು ಭಾಗದಿಂದ ಬರುವ ನೂರಾರು ಪ್ರಯಾಣಿಕರಿಗೆ ಬೆಳ್ಮಣ್‌ ಪ್ರಮುಖ ಜಂಕ್ಷನ್‌. ಹೀಗಾಗಿ ಇಲ್ಲಿ ನಿತ್ಯ ನೂರಾರು ಪ್ರಯಾಣಿಕರು ನೆರೆದಿರುತ್ತಾರೆ. ಉಡುಪಿ ಬಸ್‌ಗಳಿಗೆ ಜನ ಹತ್ತುವ, ಇಳಿಯುವ ತಿರುವು ತುಂಬ ಅಪಾಯಕಾರಿಯಾಗಿದ್ದು, ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.

ಪಕ್ಕದಲ್ಲೇ ಜಾಗವಿದೆ, ಮನಸ್ಸಿಲ್ಲ!
ಬೆಳ್ಮಣ್‌ ಬಸ್ಸು ನಿಲ್ದಾಣ ಕಟ್ಟಡಕ್ಕೆ ತಾಗಿಕೊಂಡೇ ಹೆದ್ದಾರಿ ಬದಿಯಲ್ಲಿ ಖಾಲಿ ಜಾಗವಿದ್ದರೂ ಇದಕ್ಕೂ ಉಪಯೋಗಿಸುವಲ್ಲಿ ಸ್ಥಳೀಯ ಆಡಳಿತ ಹಾಗೂ ಜನಪ್ರತಿನಿಧಿಗಳು ಮನಸ್ಸು ಮಾಡುತ್ತಿಲ್ಲ. ಈ ಹಿಂದೆ ರಾಜ್ಯ ಹೆದ್ದಾರಿ1ರ ವಿಸ್ತರಣೆ ಸಂದರ್ಭದಲ್ಲಿ ಹಿಂದಿನ ಪಂಚಾಯತ್‌ ಆಡಳಿತ ಮೀನು ಮಾರುಕಟ್ಟೆಯ ಕಟ್ಟಡವನ್ನು ಸಂಪೂರ್ಣ ಕೆಡವಿತ್ತು. ಅಲ್ಲಿ ಸಂಕೀರ್ಣ ನಿರ್ಮಾಣಕ್ಕೆ ಕಾನೂನು ತೊಡಕುಗಳುಉಂಟಾಗಿದ್ದರಿಂದ ಜಾಗ ಖಾಲಿ ಬಿದ್ದಿದೆ. ಈ ಜಾಗವನ್ನು ಒಂದೋ ಪ್ರಯಾಣಿಕರ ತಂಗುದಾಣಕ್ಕೆ ಇಲ್ಲವೇ ಕಾರು ಹಾಗೂ ಆಟೋರಿಕ್ಷಾ ನಿಲ್ದಾಣವಾಗಿ ಬಳಸಲು ಅವಕಾಶಗಳಿವೆ.

– ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.