Ullal: ಹೊಂಡದಿಂದಾಗಿ ಸಂಚಾರವೇ ಸರ್ಕಸ್‌

ಚರಂಡಿ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ಹೊಂಡಗಳ ಸೃಷ್ಟಿ , ವಾಹನ ಚಾಲಕರು, ಜನರಿಗೆ ಆಪತ್ತು

Team Udayavani, Aug 7, 2024, 1:59 PM IST

Screenshot (127)

ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯ ತೊಕ್ಕೊಟ್ಟುವಿನಿನ ಭಟ್ನಗರದಿಂದ ಚೆಂಬುಗುಡ್ಡೆ ಹಿಂದೂ ರುದ್ರಭೂಮಿ ಸಂಪರ್ಕಿಸುವ ರಸ್ತೆ ಹೊಂಡಮಯವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಈ ರಸ್ತೆ ಸುಸಜ್ಜಿತವಾಗಿ ನಿರ್ಮಾಣಗೊಂಡರೂ ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ರಸ್ತೆ ಹೊಂಡಮಯವಾಗಿದೆ. ಪಾದಚಾರಿಗಳು, ವಾಹನ ಸವಾರರು ಈ ಹೊಂಡಕ್ಕೆ ಬಿದ್ದು, ಗಾಯಗೊಂಡರೂ ಮುಚ್ಚುವ ಕಾರ್ಯ ಇನ್ನೂ ನಡೆದಿಲ್ಲ. ಜೀವ ತಿನ್ನುವ ಈ ರಸ್ತೆ ಹೊಂಡದಿಂದ ಮುಕ್ತಿ ಕೊಡಿ ಎನ್ನುವುದು ವಾಹನ ಚಾಲಕರ, ಸಾರ್ವಜನಿಕರ ಆಗ್ರಹ.

ತೊಕ್ಕೊಟ್ಟು ಭಟ್ನಗರ ಕ್ರಾಸ್‌ನಿಂದ ಹಿಂದೂ ರುದ್ರಭೂಮಿಯಾಗಿ ಚೆಂಬುಗುಡ್ಡೆ, ಪಿಲಾರ್‌, ಮಂಗಳೂರು ವಿವಿ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ. ತೊಕ್ಕೊಟ್ಟು ಜಂಕ್ಷನ್‌ ಬಂದ್‌ ಆದರೆ ಕೇರಳ ಸೇರಿದಂತೆ, ಮಂಗಳೂರಿಗೆ ತಲುಪಲು ಇದು ಪರ್ಯಾಯ ರಸ್ತೆಯಾಗಿದೆ. ಆದರೆ ಹೆದ್ದಾರಿಯ ಸರ್ವೀಸ್‌ ರಸ್ತೆಯನ್ನು ಸಂಪರ್ಕಿಸುವ ತಿರುವಿನಲ್ಲಿ ಹೊಂಡ ಬಿದ್ದಿದ್ದು, ರಾತ್ರಿ ವೇಳೆ ವಾಹನಗಳ ಅಪಘಾತ ಇಲ್ಲಿ ಸರ್ವೇ ಸಾಮಾನ್ಯವಾಗಿದೆ.

ಈ ಹೊಂಡವನ್ನು ತಪ್ಪಿಸಲು ವಾಹನಗಳು ಒಂದೇ ಬದಿಯಲ್ಲಿ ಸಂಚರಿಸುವ ಸಂದರ್ಭದಲ್ಲಿ ತೊಕ್ಕೊಟ್ಟಿನಿಂದ ಭಟ್ನಗರ, ಕಾಪಿಕಾಡು ಕಡೆ ಸಂಚರಿಸುವ ವಾಹನಗಳಿಗೆ ಸಂಚಾರಕ್ಕೆ ತಡೆಯಾಗುತ್ತಿದ್ದು, ವಾಹನಗಳು ಇಲ್ಲಿ ಸಂಚರಿಸುವುದೇ ಕಷ್ಟವಾಗಿದೆ.

ಜನನಿಬಿಡ ಪ್ರದೇಶದಲ್ಲೇ ಅಪಾಯ

ತೊಕ್ಕೊಟ್ಟು ಭಟ್ನಗರ ಕ್ರಾಸ್‌ನಿಂದ ಚೆಂಬುಗುಡ್ಡೆ ಸಂಪರ್ಕಿಸುವ ರಸ್ತೆ ಜನನಿಬಿಡ ಪ್ರದೇಶ. ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬ್ಯಾಂಕ್‌ ಸೇರಿದಂತೆ ಜನವಸತಿ ಹೊಂದಿದೆ. ದಿನವೊಂದಕ್ಕೆ ಸಾವಿರಾರು ಜನರು ವಾಹನಗಳಲ್ಲಿ ಸಾಗುತ್ತಾರೆ. ಇಲ್ಲಿ ಪಾದಚಾರಿಗಳು ಕೂಡಾ ನಡೆಯಲು ಹೆದರುವಂತಾಗಿದೆ. ಕ್ರಾಸ್‌ನಲ್ಲಿ ಒಂದು ಹೊಂಡ ಬಿದ್ದಿದ್ದರೆ, ಸ್ಪೂರ್ತಿ ಕ್ಲಿನಿಕ್‌ ಎದುರು ದೊಡ್ಡ ಹೊಂಡವಿದೆ.

ತುರ್ತು ಕಾಮಗಾರಿ ಬೇಕಾಗಿದೆ

ಎರಡು ತಿಂಗಳಿನಿಂದ ಇಲ್ಲಿ ಹೊಂಡ ಸಮಸ್ಯೆ ಇದ್ದರೂ ಸ್ಥಳಿಯ ನಗರಾಡಳಿತವಾಗಲಿ, ಜನಪ್ರತಿನಿಧಿಗಳಾಗಲೀ ಗಮನ ಹರಿಸಿಲ್ಲ. ಮಳೆ ಕಡಿಮೆಯಾದಾಗ ಸ್ಥಳೀಯರು ಮಣ್ಣು ತುಂಬಿಸಿದರೂ ಮಳೆ ನೀರಿಗೆ ಪುನ: ಹೊಂಡ ಬಿದ್ದಿದೆ. ಈ ಹೊಂಡಕ್ಕೆ ತುರ್ತು ಕಾಮಗಾರಿಯಾಗಿ ಕಾಂಕ್ರಿಟ್‌ ಹಾಕಿದರೆ ಸಮಸ್ಯೆ ಬಗೆಹರಿಯಬಹುದು ಎನ್ನುತ್ತಾರೆ ಸ್ಥಳೀಯರು. ಒಂದು ಕಿ. ಮೀ. ಉದ್ದವಿರುವ ಈ ರಸ್ತೆಗೆ ಚರಂಡಿ ನಿರ್ಮಾಣ ಅಗತ್ಯವಾಗಿದೆ.

ಹೆದರುತ್ತಾರೆ

ಭಟ್ನಗರ ಕ್ರಾಸ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಮಳೆ ಸಂದರ್ಭದಲ್ಲಿ ನೀರು ತುಂಬಿದ ಹೊಂಡದಲ್ಲಿ ಹೊಸದಾಗಿ ಬರುವವರು ಹೊಂಡದ ಆಳದ ಅರಿವಿಲ್ಲದೆ ಈ ಹೊಂಡದ ಮೇಲೆ ವಾಹನ ಸಂಚರಿಸಿ ಬಿದ್ದು ಗಾಯಗಳಾಗಿವೆ. ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸಂಚರಿಸಲು ಹೆದರುತ್ತಾರೆ.

– ವಿಶ್ವನಾಥ್‌ ಪಿಲಾರ್‌, ಪಿಲಾರ್‌ ನಿವಾಸಿ

ಮಾರ್ಗಕ್ಕಿಂತ ಎತ್ತರದಲ್ಲಿ ಚರಂಡಿ!

ತೊಕ್ಕೊಟ್ಟುವಿನ ಇಳಿಜಾರು ರಸ್ತೆಗಳಲ್ಲಿ ಮಾಡಿರುವ ಚರಂಡಿ ಮಾರ್ಗಕ್ಕಿಂತಲೂ ಎತ್ತರದಲ್ಲಿದೆ. ಹೀಗಾಗಿ ನೀರು ಚರಂಡಿಗೆ ಇಳಿಯದೆ ರಸ್ತೆಯಲ್ಲೇ ಹರಿಯುತ್ತದೆ. ಒಳರಸ್ತೆಗಳಿಗೆ ಇಲ್ಲಿ ಚರಂಡಿಯೇ ನಿರ್ಮಾಣವಾಗಿಲ್ಲ. ಕೋಟ್ಯಾಂತರ ರೂ. ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದ್ದರೂ ಚರಂಡಿ ಸರಿ ಇಲ್ಲದೆ ನೀರು ರಸ್ತೆಯಲ್ಲೇ ಹರಿದು ರಭಸಕ್ಕೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ.

– ವಸಂತ್‌ ಎನ್‌.ಕೊಣಾಜೆ

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.