Udupi; ಜಿಲ್ಲೆಯ 170 ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲ

1,052 ಅಂಗನವಾಡಿಗಳು ಸ್ವಂತ ಕಟ್ಟಡ ಹೊಂದಿದ್ದರೂ ಸುಸಜ್ಜಿತವಾಗಿಲ್ಲ

Team Udayavani, Sep 10, 2024, 3:30 PM IST

Udupi; ಜಿಲ್ಲೆಯ 170 ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲ

ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 1,222 ಅಂಗನವಾಡಿ ಕೇಂದ್ರಗಳಲ್ಲಿ 170 ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ. ಸರಕಾರಿ ಶಾಲೆ, ಗ್ರಾ.ಪಂ. ಕಟ್ಟಡ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಈ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ.

ಪ್ರಸ್ತುತ ಅಂಗನವಾಡಿ ಕೇಂದ್ರಗಳನ್ನು ಮಾಂಟಸ್ಸರಿಯಾಗಿ ರೂಪಿಸಲು ರಾಜ್ಯ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈಗಾಗಲೇ ಯೋಜನೆ ರೂಪಿಸಿ ಅನುಷ್ಠಾನ ಮಾಡಿದೆ. ಬೆಂಗಳೂರಿನಲ್ಲಿ ಈ ಪ್ರಕ್ರಿಯೆಯೂ ಆರಂಭವಾಗಿದೆ. ಪ್ರಸಕ್ತ ಸಾಲಿನಲ್ಲಿ ಬೇರೆ ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆಯೂ ಘೋಷಣೆಯಾಗಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಈ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ.

ಅಂಗನವಾಡಿಗಳನ್ನು ಮೊಂಟಸ್ಸರಿಯಾಗಿ ಪರಿವರ್ತಿಸಿದ ತತ್‌ಕ್ಷಣದಿಂದಲೇ ಮಕ್ಕಳು ಬರಲು ಸಾಧ್ಯವಿಲ್ಲ. ಮಕ್ಕಳನ್ನು ಆಕರ್ಷಿಸಲು ಬೇಕಾದ ವ್ಯವಸ್ಥೆಯನ್ನು ರೂಪಿಸಬೇಕಾಗುತ್ತದೆ. ಮೂಲ ಸೌಲಭ್ಯ ಅತಿ ಮುಖ್ಯವಾಗುತ್ತದೆ. 1,052 ಅಂಗನವಾಡಿಗಳು ಸ್ವಂತ ಕಟ್ಟಡ ಹೊಂದಿದ್ದರೂ ಸುಸಜ್ಜಿತ ಕಟ್ಟಡವಲ್ಲ. ಕೆಲವು ಕಡೆಗಳಲ್ಲಿ ಹೆಂಚಿನ ಮೇಲ್ಛಾವಣಿ ಸೋರುವ ಸ್ಥಿತಿಯಲ್ಲಿವೆ. ಇನ್ನು ಕೆಲವು ಕಟ್ಟಡಗಳಲ್ಲಿ ನೀರಿನ ಸಮಸ್ಯೆಯಿದೆ. ಹೀಗೆ ಹತ್ತಾರು ಸಮಸ್ಯೆಗಳನ್ನು ಸ್ವಂತ ಕಟ್ಟಡ ಹೊಂದಿರುವ ಅಂಗನವಾಡಿಗಳು ಎದುರಿಸುತ್ತಿವೆ. ಕೆಲವು ಕಟ್ಟಡವಂತೂ ಸುಣ್ಣಬಣ್ಣ ಕಾಣದೇ ವರ್ಷವೇ ಕಳೆದಿದೆ. ಮಕ್ಕಳಿಗೆ ಆಟವಾಡಲು ಬೇಕಾದ ಪರಿಕರವೂ ಕೆಲವು ಕಡೆಗಳಲ್ಲಿ ಇಲ್ಲ. ಹೀಗಾಗಿ ಅಗತ್ಯ ವ್ಯವಸ್ಥೆ ಕಲ್ಪಿಸಿದ ಅನಂತರವಷ್ಟೇ ಮಕ್ಕಳನ್ನು ಆಕರ್ಷಿಸಲು ಸಾಧ್ಯ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಸದ್ಯ ಜಿಲ್ಲೆಯಲ್ಲಿ 1,222 ಅಂಗನವಾಡಿ ಕೇಂದ್ರಗಳಿವೆ. ಅವುಗಳಲ್ಲಿ 1,064 ಗ್ರಾಮೀಣ ಪ್ರದೇಶದಲ್ಲಿ ಹಾಗೂ 158 ನಗರ ಪ್ರದೇಶದಲ್ಲಿದೆ. 1052 ಸ್ವಂತ ಕಟ್ಟಡದಲ್ಲಿದ್ದರೆ, 29 ಅಂಗನವಾಡಿ ಸಮುದಾಯ ಭವನಗಳಲ್ಲಿ ನಡೆಯುತ್ತಿದೆ. 9 ಅಂಗನವಾಡಿಗಳು ಪಂಚಾಯತ್‌ ಕಟ್ಟಡದಲ್ಲಿ, 4 ಯುವಕ ಮಂಡಲದಲ್ಲಿ, 2 ಮಹಿಳಾ ಮಂಡಲ ದಲ್ಲಿ, 90 ಅಂಗನವಾಡಿಗಳು ಶಾಲಾವರಣ ದಲ್ಲಿ, 5 ಪರ್ಯಾಯ ವ್ಯವಸ್ಥೆಯ ಮೂಲಕ ಮತ್ತು 31 ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. 1,150ಕ್ಕೂ ಅಧಿಕ ಅಂಗನವಾಡಿಗಳಲ್ಲೂ ಕಾರ್ಯ ಕರ್ತೆಯರಿದ್ದಾರೆ. ನಿವೃತ್ತಿಯಿಂದ ಹುದ್ದೆ ಖಾಲಿಯಾದಂತೆ ಭರ್ತಿ ಪ್ರಕ್ರಿಯೆಯೂ ನಡೆಯುತ್ತಿದೆ.

ವ್ಯಾಪ್ತಿ- ಅಂಗನವಾಡಿ ಸಂಖ್ಯೆ
ಉಡುಪಿ:282
ಕಾರ್ಕಳ:232
ಕುಂದಾಪುರ: 432
ಬ್ರಹ್ಮಾವರ:276

ಮಕ್ಕಳ ಆರೈಕೆಯೇ ಮುಖ್ಯ
ಅಂಗನವಾಡಿಗಳಲ್ಲಿ ಮಕ್ಕಳಿಗೆ ಕಲಿಕೆಯ ಜತೆಗೆ ಆರೈಕೆಯೂ ಮುಖ್ಯವಾಗುತ್ತದೆ. ಬಹುತೇಕ ಅಂಗನ ವಾಡಿ ಗಳಲ್ಲಿ ಕಲಿಕೆ ಮತ್ತು ಆರೈಕೆಗೆ ಪೂರಕವಾದ ವ್ಯವಸ್ಥೆಯಿಲ್ಲ. ಮಕ್ಕಳಿಗೆ ಸರಕಾರದಿಂದ ಬರುವ ಪೌಷ್ಠಿಕ ಆಹಾರ ಒದಗಿಸಲಾಗುತ್ತದೆ. ಆದರೆ ಅಂಗನವಾಡಿ ಸಹಾಯಕಿಯರಿಗೆ ಪೂರ್ಣ ಪ್ರಮಾಣದಲ್ಲಿ ಮಕ್ಕಳ ಆರೈಕೆ, ಕಲಿಕೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾರಣ, ಅವರಿಗೆ ಆಡಳಿತಾತ್ಮಕ ಕೆಲಸವೂ ಹೆಚ್ಚಿರುತ್ತದೆ. ಸರಕಾರದ ಸರ್ವೆ, ಆರೋಗ್ಯ ಸಂಬಂಧಿಸಿದ ಅಭಿಯಾನ ಸಹಿತ ಬೇರೆ ಬೇರೆ ಕಾರ್ಯಗಳಿಗೂ ಅವನ್ನು ನಿಯೋಜಿಸಲಾಗುತ್ತದೆ.

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.