Udupi: ಕೃಷ್ಣನೂರಿನಲ್ಲಿ ಜನ್ಮಾಷ್ಟಮಿಗೆ ಸಕಲ ಸಿದ್ಧತೆ

ಕಂಬ ನೆಡುವ ಕಾರ್ಯ | ಹುಲಿವೇಷ, ಜಾನಪದ ನೃತ್ಯಗಳಿಗೆ ಈ ಬಾರಿ ಪರ್ಯಾಯ ಮಠದಿಂದ ನಗದು ಬಹುಮಾನ

Team Udayavani, Aug 18, 2024, 2:55 PM IST

14

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆ. 26ರಂದು ನಡೆಯಲಿದ್ದು, ಆ. 27ರಂದು ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ನಡೆಯಲಿದೆ. ಇದಕ್ಕಾಗಿ ರಥಬೀದಿಯಲ್ಲಿ ಸಿದ್ಧತೆ ಆರಂಭಗೊಂಡಿದ್ದು, ವಿಟ್ಲಪಿಂಡಿಯಂದು ಗೋವಳರು ಮೊಸರು ಕುಡಿಕೆಗಳನ್ನು ಒಡೆಯುವ ಗುರ್ಜಿಗಳನ್ನು ನೆಡುವ ಕೆಲಸ ನಡೆಯುತ್ತಿದೆ.

15 ಗುರ್ಜಿಗಳನ್ನು ರಥಬೀದಿಯಲ್ಲಿ ನೆಡಲಾಗುತ್ತದೆ. ಇದರಲ್ಲಿ ಎರಡು ಮಂಟಪ ಮತ್ತು ಏಳು ಗುರ್ಜಿಗಳು ಕೃಷ್ಣಮಠಕ್ಕೆ ಸಂಬಂಧಿಸಿದವು.

ಏಳು ಗುರ್ಜಿಗಳು ಏಳು ಮಠಗಳಿಗೆ, ಎರಡು ಮಂಟಪಗಳು ಪರ್ಯಾಯ ಮಠ ಮತ್ತು ಶ್ರೀಕೃಷ್ಣಮಠಕ್ಕೆ ಸಂಬಂಧಿಸಿವೆ. ಚಂದ್ರಮೌಳೀಶ್ವರ ದೇವಸ್ಥಾನದ ಎದುರಿನ ಮೂರು, ರಥ ನಿಲ್ಲುವ ಮಂಟಪದ ಬಳಿಕದ ಮೂರು ಗುರ್ಜಿಗಳು ಹೀಗೆ ತಲಾ ಮೂರು ಗುರ್ಜಿಗಳು ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ಸಂಬಂಧಿಸಿದವು.

ಕೃಷ್ಣಾಷ್ಟಮಿ ಸಂಭ್ರಮಕ್ಕೆ ಪ್ರತ್ಯೇಕ ಸಮಿತಿಗಳನ್ನು ರಚಿಸಿ ಪ್ರಮುಖರಿಗೆ ಜವಾಬ್ದಾರಿ ವಹಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಲಹೆ, ಮಾರ್ಗದರ್ಶನದಂತೆ ತಯಾರಿ ಕಾರ್ಯ ಆರಂಭಗೊಂಡು, ಈಗಾಗಲೇ ಹಲವು ಪೂರ್ವಭಾವಿ ಸಭೆಗಳು ನಡೆದಿದೆ.

ಹುಲಿವೇಷಕ್ಕೆ ತಂಡಗಳ ಸಜ್ಜು

ನಗರದಲ್ಲಿ ಹುಲಿ ವೇಷ ತಂಡಗಳು ಅಷ್ಟಮಿಗೆ ಹುಲಿ ಕುಣಿತ ಪ್ರದರ್ಶಿಸಲು ಸಜ್ಜುಗೊಳ್ಳುತ್ತಿವೆ. ನಗರ, ಗ್ರಾಮಾಂತರ ಭಾಗದ ಖ್ಯಾತ ಹುಲಿವೇಷಧಾರಿಗಳ ತಂಡದ ಪೋಸ್ಟರ್‌ಗಳು ರಾರಾಜಿಸುತ್ತಿವೆ. ವಿವಿಧ ಸಂಘ, ಸಂಸ್ಥೆಗಳು ಕೃಷ್ಣ ವೇಷ ಸ್ಪರ್ಧೆ ಮತ್ತು ಹುಲಿ ಕುಣಿತ ಸ್ಪರ್ಧೆ ಆಯೋಜಿಸಲು ತಯಾರಿ ನಡೆಸಿವೆ.

ಭಕ್ತರು, ಪ್ರವಾಸಿಗರು

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಉತ್ಸವ ಕಣ್ತುಂಬಿಕೊಳ್ಳಲು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. 4ನೇ ಶನಿವಾರ, ರವಿವಾರ ರಜೆ ಇರುವುದರಿಂದ ಮತ್ತು ಆ. 26, 27 ಹೆಚ್ಚುವರಿ ರಜೆ ಇದ್ದಲ್ಲಿ ಸ್ಥಳೀಯರು ಸಹಿತ, ಹೊರ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಬಹುತೇಕ ಹೊಟೇಲ್‌, ಛತ್ರ, ಲಾಡ್ಜ್ಗಳಲ್ಲಿ ದೂರದ ಊರಿನ ಭಕ್ತರು ಕೊಠಡಿಗಳನ್ನು ಕಾದಿರಿಸಿದ್ದಾರೆ.

ನಗದು ಬಹುಮಾನ

ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮುದ್ದುಕೃಷ್ಣ, ರಂಗೋಲಿ, ಚಿತ್ರಕಲೆ ಸಹಿತ ಮೊದಲಾದ ಸ್ಪರ್ಧೆಗಳನ್ನು ಕೃಷ್ಣಮಠದಲ್ಲಿ ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪರ್ಯಾಯ ಮಠದ ವತಿಯಿಂದ ನಗದು ಬಹುಮಾನವನ್ನು ಪೌರಾಣಿಕ, ಹುಲಿವೇಷ, ಜಾನಪದ ನೃತ್ಯಗಳಿಗೆ ಕೊಡಲಾಗುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾಸೋತ್ಸವದ ನಿಮಿತ್ತ ಆ. 1ರಿಂದಲೇ ವಿವಿಧ ಕಾರ್ಯಕ್ರಮ, ಸ್ಪರ್ಧೆ ಇತ್ಯಾದಿ ಆರಂಭಗೊಂಡಿದೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.