Udupi:ಚೌತಿಗೆ ಸ್ವತ್ಛತೆ ಸಂಕಲ್ಪ;ಉದಯವಾಣಿ, ನಗರಸಭೆ, ಕಾಪು ಪುರಸಭೆ,ಸಾಲಿಗ್ರಾಮ ಪ.ಪಂ.ಅಭಿಯಾನ


Team Udayavani, Sep 4, 2024, 4:22 PM IST

Udupi:ಚೌತಿಗೆ ಸ್ವತ್ಛತೆ ಸಂಕಲ್ಪ;ಉದಯವಾಣಿ, ನಗರಸಭೆ, ಕಾಪು ಪುರಸಭೆ,ಸಾಲಿಗ್ರಾಮ ಪ.ಪಂ.ಅಭಿಯಾನ

ಉಡುಪಿ: ಗಣೇಶನ ಆರಾಧನೆಗೆ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದ್ದು, ಮನೆ, ಮನೆಗಳಲ್ಲಿ ಗೌರಿ ಗಣೇಶನ ಆರಾಧನೆ ಸಂಭ್ರಮ ಮೇಳೈಸಲಿದೆ. ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಎಲ್ಲೆಡೆ ತಯಾರಿ ನಡೆಯುತ್ತಿದೆ. ಗಣಪತಿ ಹಬ್ಬವನ್ನು ಆಚರಿಸುವಾಗ ಭಕ್ತಿಯ ಜತೆಗೆ ಸ್ವತ್ಛತೆಗೂ ಸಂಕಲ್ಪ ಮಾಡಬೇಕಿದೆ.

ಇತ್ತೀಚೆಗೆ ಸ್ವತ್ಛ ನಾಗರಪಂಚಮಿ ಅಭಿಯಾನ ಯಶಸ್ವಿಯಾಗಲು ಜನರು ಸಂಪೂರ್ಣ ಸಹಕಾರ ನೀಡಿದ್ದರು. ಅದೇ ಮಾದರಿಯಲ್ಲಿ ಸ್ವತ್ಛತೆ ಉದ್ದೇಶದಿಂದ ಗಣೇಶ ಚತುರ್ಥಿ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಡೆಂಗ್ಯೂ, ಮಲೇರಿಯಾ, ಇನ್ನಿತರ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಬ್ಬಹರಿದಿನಗಳ ವೇಳೆ ನಮ್ಮ ಪರಿಸರದಲ್ಲಿ ಸ್ವತ್ಛತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಮುಖ ಸಾರ್ವಜನಿಕ ಗಣೇಶೋತ್ಸವ ಕೇಂದ್ರಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಕ್ಕೆ ಸ್ಥಳೀಯಾಡಳಿತ ಸಂಸ್ಥೆ ವತಿಯಿಂದಲೇ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಭಕ್ತರು ಪೂಜೆ ಸಲ್ಲಿಸಲು ಬರುವಾಗ ಸಾಧ್ಯವಾದಷ್ಟು ಪ್ಲಾಸ್ಟಿಕ್‌ ತೊಟ್ಟೆಗಳನ್ನು ತರದೆ, ಚೀಲ, ಪೇಪರುಗಳಲ್ಲಿ ಅಗತ್ಯ ವಸ್ತುಗಳನ್ನು ಕೊಂಡೊಯ್ಯಬಹುದು.

ಈಗಾಗಲೆ ಅನುಮತಿ ಕೋರಿ ಕೆಲವು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ನಗರಸಭೆಗೆ ಅರ್ಜಿ ಸಲ್ಲಿಸಿವೆ. ಕೆಲವು ಗಣೇಶೋತ್ಸವ ಕೇಂದ್ರಗಳನ್ನು ನಗರಸಭೆಯಿಂದಲೇ ಗುರುತಿಸಲಾಗುತ್ತಿದ್ದು, ಉಳಿದವರು ಅಭಿಯಾನಕ್ಕಾಗಿ ಸಂಪರ್ಕಿಸಿ ನೋಂದಾಯಿಸಬಹುದು ಎಂದು ನಗರಸಭೆ ಪರಿಸರ ಎಂಜಿನಿಯರ್‌ ಸ್ನೇಹಾ ಮಾಹಿತಿ ತಿಳಿಸಿದ್ದಾರೆ. ಕಾಪು ಪುರಸಭೆ ಮತ್ತು ಸಾಲಿಗ್ರಾಮ ಪ.ಪಂ. ಆಡಳಿತಗಳೂ ಈ ಅಭಿಯಾನಕ್ಕೆ ಕೈಜೋಡಿಸಿವೆ.

ಜನರ ಸಂಪೂರ್ಣ ಸಹಕಾರದ ಅಗತ್ಯ
ನಗರಸಭೆ-ಉದಯವಾಣಿ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸ್ವತ್ಛತಾ ಅಭಿಯಾನಕ್ಕೆ ಜನರ ಸಂಪೂರ್ಣ ಸಹಕಾರದ ಅಗತ್ಯವಿದೆ. ಸಾರ್ವಜನಿಕ ಗಣೇಶೋತ್ವವ ಸಮಿತಿ ಆಚರಣೆ ಕೇಂದ್ರಗಳಿಗೆ ನಗರಸಭೆ ವತಿಯಿಂದ ಡಸ್ಟ್ ಬಿನ್‌, ಚೀಲಗಳನ್ನು ವ್ಯವಸ್ಥೆ ಮಾಡಿಕೊಟ್ಟು ವ್ಯವಸ್ಥಿತವಾಗಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತದೆ. ಅನ್ನ ಸಂತರ್ಪಣೆ ದಿನ ಎಲ್ಲಿಯೂ ತ್ಯಾಜ್ಯ ಎಸೆಯಬಾರದು. ಆಹಾರ ತ್ಯಾಜ್ಯ ವಿಲೇವಾರಿಗೆ ನಗರಸಭೆ ವತಿಯಿಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತದೆ. ಈ ಕುರಿತು ನಗರಸಭೆ ಸಿಬಂದಿಗೆ ನಿರ್ದೇಶನ ನೀಡಲಾಗಿದೆ.
– ಪ್ರಭಾಕರ ಪೂಜಾರಿ, ಅಧ್ಯಕ್ಷರು, ರಾಯಪ್ಪ, ಪೌರಾಯುಕ್ತರು, ಉಡುಪಿ ನಗರಸಭೆ

ಜನಜಾಗೃತಿಯನ್ನೂ ರೂಪಿಸಲಿದ್ದೇವೆ
ನಾಗರಪಂಚಮಿ ಹಬ್ಬದಂದು ಸ್ವತ್ಛತೆಗೆ ಆದ್ಯತೆ ನೀಡಿದಂತೆ ಗಣೇಶೋತ್ಸವ ಸಂದರ್ಭದಲ್ಲಿಯೂ ಸ್ವತ್ಛ ಪುರಸಭೆಯಾಗಿ ರೂಪುಗೊಳ್ಳಲು ಆದ್ಯತೆ ನೀಡುತ್ತೇವೆ. ಸಮಿತಿಗಳು ಸಂಪರ್ಕಿಸಿದಲ್ಲಿ ಹಸಿ ಕಸ, ಒಣ ಕಸ ವಿಲೇವಾರಿಗೆ ಉಪಕರಣಗಳನ್ನು ಪೂರೈಸುವುದರ ಜತೆ ಜನಜಾಗೃತಿಯನ್ನೂ ರೂಪಿಸಲಿದ್ದೇವೆ.
– ಹರಿಣಾಕ್ಷಿ ದೇವಾಡಿಗ, ಅಧ್ಯಕ್ಷರು, ನಾಗರಾಜ್‌ ಸಿ., ಮುಖ್ಯಾಧಿಕಾರಿಗಳು, ಕಾಪು ಪುರಸಭೆ

ಪ.ಪಂ. ಕಚೇರಿಯನ್ನು ಸಂಪರ್ಕಿಸಬಹುದು
ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಕೆಲವು ವರ್ಷಗಳಿಂದ ತ್ಯಾಜ್ಯ ವಿಲೇವಾರಿಗೆ ವಿಶೇಷ ಗಮನ ಕೊಡುತ್ತಿದೆ. ಈ ವರ್ಷವೂ ಗಣೇಶೋತ್ಸವ ಸಮಿತಿಗಳಿಗೆ ಡಸ್ಟ್‌ಬಿನ್‌, ಚೀಲಗಳನ್ನು ಪೂರೈಸುತ್ತೇವೆ. ಈ ಕುರಿತು ಸಮಿತಿಗಳು ಪ.ಪಂ. ಕಚೇರಿಯನ್ನು ಸಂಪರ್ಕಿಸಬಹುದು.
– ಸುಕನ್ಯಾ ಶೆಟ್ಟಿ, ಅಧ್ಯಕ್ಷರು, ಶಿವ ನಾಯ್ಕ, ಮುಖ್ಯಾಧಿಕಾರಿಗಳು, ಸಾಲಿಗ್ರಾಮ ಪ.ಪಂ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.