Udupi: ಆಸ್ಪತ್ರೆ ಕಟ್ಟಡ ಹೊಂಡದಿಂದ ಅಪಾಯ!

ಅರ್ಧಕ್ಕೆ ನಿಂತ ಆಸ್ಪತ್ರೆ ನಿರ್ಮಾಣದ ಯೋಜನೆ; ಸೊಳ್ಳೆ ಉತ್ಪತ್ತಿ ತಾಣವಾಗಿ ಪರಿಸರದಲ್ಲಿ ಭೀತಿ

Team Udayavani, Oct 23, 2024, 6:25 PM IST

13(1)

ಉಡುಪಿ: ನಗರದ ಕೆಎಂ ಮಾರ್ಗ ನಗರಸಭೆ ಎದುರಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ತೋಡಿದ್ದ ಬೃಹತ್‌ ಹೊಂಡ ಹಲವು ವರ್ಷಗಳಿಂದ ಹಾಗೆಯೇ ಇದ್ದು, ಪ್ರಸ್ತುತ ಇದು ಅಪಾಯಕಾರಿ ಸ್ವರೂಪದಲ್ಲಿದೆ.

ಇದಕ್ಕೆ ತಾಗಿಕೊಂಡಿರುವ ರಸ್ತೆಯ ಕಾಂಪೌಂಡ್‌ ಗೋಡೆಯು ಸಹ ಬೀಳುವ ಹಂತದಲ್ಲಿದೆ. ಅಲ್ಲದೆ ಈ ಜಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿದ್ದು, ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿದೆ. ಪರಿಸರದಲ್ಲಿ ಸೊಳ್ಳೆ ಹರಡುವ ಭೀತಿ ಜನರನ್ನು ಕಾಡುತ್ತಿದೆ.

ಈ ಗುಂಡಿಯ ಅಕ್ಕಪಕ್ಕ ಗಿಡಗಂಟಿಗಳ ರಾಶಿ ಬೆಳೆದುಕೊಂಡಿದೆ. ಇಲ್ಲಿ ವಿಷ ಜಂತುಗಳು, ಅಪಾಯಕಾರಿ ಸರೀಸೃಪಗಳು ವಾಸವಿರುವ ಸಾಧ್ಯತೆ ಇದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೆ ಸುರಕ್ಷತೆ ದೃಷ್ಟಿಯಿಂದ ಎತ್ತರದ ಕಬ್ಬಿಣ ಶೀಟ್‌ಗಳನ್ನು ಸುತ್ತಲೂ ಅಳವಡಿಸಲಾಗಿದ್ದರೂ, ಕೆಲವರು ಒಳಹೋಗಿ ತ್ಯಾಜ್ಯ ಎಸೆಯುವುದು ಸಹಿತ ಮದ್ಯಪಾನ, ಇನ್ನಿತರೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಡೆಯುತ್ತಿದೆ ಎಂದು ನಾಗರಿಕರು ದೂರಿದ್ದಾರೆ.

ಖಾಸಗಿ ಸಹಭಾಗಿತ್ವದಲ್ಲಿ ಸರಕಾರಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭದಲ್ಲಿ ವ್ಯವಸ್ಥಿತವಾಗಿದ್ದರೂ ಅನಂತರ ದಿನಗಳಲ್ಲಿ ಕಾರಣಾಂತರಗಳಿಂದ ಇಡೀ ಯೋಜನೆಗೆ ಹಿನ್ನಡೆಯಾಗಿ ಇದೀಗ ಸಂಪೂರ್ಣ ಸರಕಾರಿ ಹಿಡಿತದಲ್ಲೆ ಆರೋಗ್ಯ ಸೇವೆ ನೀಡಲಾಗುತ್ತಿದೆ. ಇಲ್ಲಿಯೂ ಮೂಲ ಸೌಕರ್ಯ ಮತ್ತು ನಿರ್ವಹಣೆ ಸಮಸ್ಯೆಗಳಿದ್ದರೂ, ಸದ್ಯಕ್ಕೆ ಆಸ್ಪತ್ರೆ ಸೇವೆ ಸರಕಾರಿ ಆಸ್ಪತ್ರೆ ಮಾದರಿಯಲ್ಲಿ ಎಂದಿನಂತೆ ನಡೆಯುತ್ತಿದೆ.

ಭೂಪದರ ಕುಸಿಯುವ ಆತಂಕ
ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಯೋಜನೆ ಭಾಗವಾಗಿ ತೋಡಲಾಗಿದ್ದ ಈ ಗುಂಡಿ ಅಡಿಪಾಯ ಕೆಲಸ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತಿದೆ. ಪಿಲ್ಲರ್‌ ಏರಿಸಲು ಸರಳುಗಳನ್ನು ಕಟ್ಟಿರುವುದು ಹಾಗೇ ಇದೆ. ಈಗಾಗಲೆ ಹಲವು ಮಳೆಗಾಲದಲ್ಲಿ ನೀರು ತುಂಬಿಕೊಂಡು ಬತ್ತಿರುವ ಪ್ರಕ್ರಿಯೆ ಕೆಲವು ವರ್ಷಗಳಿಂದ ನಡೆಯುತ್ತಿದೆ. ಸಾಕಷ್ಟು ಆಳವಾದ ಗುಂಡಿ ಖಾಲಿ ಇರುವುದರಿಂದ ಸುತ್ತಮುತ್ತಲಿನ ಭೂ ಪದರವು ಸಡಿಲಗೊಂಡು ಗುಂಡಿಯ ಕಡೆಗೆ ಜರಿಯುವ ಸಾಧ್ಯತೆ ಹೆಚ್ಚಿದೆ. ಪರಿಣಾಮ ರಸ್ತೆ ಮತ್ತು ಸುತ್ತಮುತ್ತಲಿನ ಕಟ್ಟಡಗಳಿಗೂ ಈ ಅಪಾಯ ಎದುರಾಗುವ ಸಾಧ್ಯತೆ ಇದೆ ತಜ್ಞರ ಅಭಿಪ್ರಾಯವಾಗಿದೆ.

ಮಣ್ಣು ತುಂಬಿಸಲು ಸಲಹೆ
ಕೆರೆಯಂತಾದ ಈ ಹೊಂಡಕ್ಕೆ ಮಣ್ಣು ತುಂಬಿಸಿ ಭರ್ತಿ ಮಾಡಲು ಬಹುತೇಕರು ಸಲಹೆ ನೀಡಿದ್ದಾರೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಪ್ರತಿಭಟನೆಯನ್ನೂ ನಡೆಸಿದ್ದರು. ಸರಕಾರಿ ಸಂಬಂ ಧಿತ ಯೋಜನೆ, ರಸ್ತೆ ವಿಸ್ತರಣೆ ವೇಳೆ ದೊರೆಯುವ ಮಣ್ಣು, ಕಾಂಕ್ರಿಟ್‌ ತುಂಡುಗಳನ್ನು ಇಲ್ಲಿ ತುಂಬಿಸಿ ಎಂದಿನಂತೆ ಸಮತಟ್ಟು ಮಾಡುವಂತೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ನಗರಸಭೆ ಪೂರಕ ಕ್ರಮ ತೆಗೆದುಕೊಳ್ಳಲು ನಾಗರಿಕರು ಆಗ್ರಹಿಸಿದ್ದಾರೆ.

ಜಿಲ್ಲಾಡಳಿತದ ಸಹಕಾರ ಅಗತ್ಯ
ಆಸ್ಪತ್ರೆ ನಿರ್ಮಾಣ ಯೋಜನೆ ಅರ್ಧಕ್ಕೆ ನಿಂತ ಬಳಿಕ ಕಟ್ಟಡ ನಿರ್ಮಾಣಕ್ಕೆ ತೋಡಿದ್ದ ಗುಂಡಿ ಸಾಕಷ್ಟು ಆಳ ಹೊಂದಿದೆ. ನಗರದ ಮಧ್ಯೆ ಇರುವುದರಿಂದ ಹಲವು ಸಮಸ್ಯೆಗಳಿಗೂ ಕಾರಣವಾಗಿದೆ. ಇದಕ್ಕೆ ಪರಿಹಾರವಾಗಿ ಕ್ರಮ ತೆಗೆದುಕೊಳ್ಳಲು ನಗರಸಭೆಗೂ ಸಾಧ್ಯವಿಲ್ಲದಂತಾಗಿದೆ. ಮಣ್ಣು ತುಂಬಿಸಿ ಭರ್ತಿ ಮಾಡಲು ಸಾಕಷ್ಟು ಅನುದಾನ ಅಗತ್ಯವಿದೆ. ಜಿಲ್ಲಾಡಳಿತ ಸಹಕಾರ ನೀಡಿದಲ್ಲಿ ಈ ಬಗ್ಗೆ ಕ್ರಮವಹಿಸಿ ಪರಿಹಾರ ಕಂಡುಕೊಳ್ಳಬಹುದು.
– ಪ್ರಭಾಕರ್‌ ಪೂಜಾರಿ, ಅಧ್ಯಕ್ಷರು, ಉಡುಪಿ ನಗರಸಭೆ

ಟಾಪ್ ನ್ಯೂಸ್

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

14

Katpadi – ಶಿರ್ವ: ರಸ್ತೆ ಗುಂಡಿಗೆ ತೇಪೆ

12

Udupi: ಇನ್ನೂ ಘೋಷಣೆಯಾಗದ ಗಾಂಧಿ ಗ್ರಾಮ ಪುರಸ್ಕಾರ

8-

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ; ಅ.27 ರಂದು ʼಶತಾಭಿವಂದನಂ’ ಆಚರಣೆ ಸಮಾರೋಪ ಸಂಭ್ರಮ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.