Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

ಗ್ರಾಮೀಣ ಭಾಗದ ಜನರಿಗೆ ಸಿಗದ ಕೆಎಸ್ಸಾರ್ಟಿಸಿ ಸೇವೆ;  ಲಾಭದಾಯಕ ರೂಟ್‌ನಲ್ಲಿ ಮಾತ್ರ ಸಂಚಾರ ಬಸ್‌ ಇಲ್ಲದೆ ಅನ್ಯ ವಾಹನಗಳ ಅವಲಂಬನೆ; ಎಲೆಕ್ಟ್ರಿಕ್‌ ಬಸ್‌, ಹೆಚ್ಚುವರಿ ಬಸ್‌ ಕಥೆ ಹೇಳುವ ಅಧಿಕಾರಿಗಳು!

Team Udayavani, Sep 23, 2024, 2:58 PM IST

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

ಉಡುಪಿ: ಗ್ರಾಮೀಣ ಭಾಗದ ಜನರಿಗೆ ಸೇವೆ ನೀಡಬೇಕೆಂಬ ಉದ್ದೇಶದಿಂದ ಆರಂಭಗೊಂಡ ಕೆಎಸ್ಸಾರ್ಟಿಸಿ ಬಸ್‌ಗಳು ಈಗ ಸೀಮಿತ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಬೇಡಿಕೆ ಇರುವ ರೂಟ್‌ಗಳಲ್ಲಿ ಬಸ್‌ಗಳೇ ಸಂಚರಿಸುತ್ತಿಲ್ಲ. ಈ ಬಗ್ಗೆ ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ ಇನ್ನು ಕೂಡ ಕಾರ್ಯಗತಗೊಂಡಿಲ್ಲ. ಈ ನಡುವೆ ಮಂಜೂರಾದ ಬಸ್‌ಗಳು ಲಾಭದಾಯಕ ರೂಟ್‌ಗಳಲ್ಲಿ ಸಂಚರಿಸುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ಸರಕಾರಿ ಬಸ್‌ ಸೇವೆ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ.

ಪೆರ್ಡೂರು- ಕುಕ್ಕೆಹಳ್ಳಿ- ಬೆಳ್ಳಂಪಳ್ಳಿ-  ಕೊಳಲಗಿರಿ- ಶೀಂಬ್ರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ, ಬ್ರಹ್ಮಾವರದ ನೀಲಾವರ ಸಹಿತ ವಿವಿಧ ಭಾಗಗಳಿಗೆ, ಹೆಜಮಾಡಿ, ಮಟ್ಟು ಭಾಗ, ಶಿರ್ವ ಮಂಚಕಲ್‌, ಕಾಪುವಿನ ವಿವಿಧ ಭಾಗಗಳಿಗೆ ಕೆಎಸ್ಸಾರ್ಟಿಸಿ ಬಸ್‌ಗಳು ಓಡಾಟ ಮಾಡದಿರುವ ಬಗ್ಗೆ ಈಗಾಗಲೇ ಪತ್ರಿಕೆಯಲ್ಲಿ ಸರಣಿ ವರದಿಗಳು ಪ್ರಕಟವಾಗಿತ್ತು. ಈ ನಡುವೆ ಕೆಲವೊಂದು ರೂಟ್‌ಗಳಲ್ಲಿ ಬಸ್‌ಗಳು ಸಂಚರಿಸಿದರೂ ಲಾಭದಾಯಿಕ ರೂಟ್‌ಗಳನ್ನು ಕೇಂದ್ರವಾಗಿರಿಸಿಕೊಂಡಿವೆ.  ಕೆಎಸ್ಸಾರ್ಟಿಸಿ ಕಾರ್ಯಾಚರಿಸುವ ಕಾರಣ ಗ್ರಾಮೀಣ ಭಾಗಕ್ಕೆ ಪೂರ್ಣ ಸೇವೆ ಸಿಗದಂತಾಗಿದೆ.

ಚಾಲಕ-ನಿರ್ವಾಹಕರ ಕೊರತೆ
ಒಂದೆಡೆ ಕೆಎಸ್ಸಾರ್ಟಿಸಿಗೆ ಬಸ್‌ಗಳ ಸಮಸ್ಯೆಯಾದರೆ ಮತ್ತೂಂದೆಡೆ ಚಾಲಕರು ಹಾಗೂ ನಿರ್ವಾಹಕರ ಕೊರತೆಯೂ ರಾಜ್ಯಾದ್ಯಂತ ಎದುರಾಗಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿಯೂ ಸರಕಾರ ಚಿಂತನೆ ನಡೆಸುತ್ತಿದೆ. ಈ ನಡುವೆ ಲಭ್ಯ ಇರುವ ಕೆಲವೊಂದು ಮಂದಿ ಚಾಲಕ-ನಿರ್ವಾಹಕರನ್ನು ಈ ತಿಂಗಳಾಂತ್ಯದೊಳಗೆ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ ನಿಯೋಜಿಸುವ ಚಿಂತನೆಯೂ ನಡೆದಿದೆ.

ಸರಕಾರಕ್ಕೆ ವರದಿ ಸಲ್ಲಿಕೆ
ಲಭ್ಯ ಇರುವ ವಿವಿಧ ರೂಟ್‌ಗಳಿಗೆ ಬಸ್‌ ಹಾಕುವ ಬಗ್ಗೆ ಈಗಾಗಲೇ ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಭೆ ನಡೆಸಿದ್ದು, ಪ್ರಸ್ತಾವಿತ ವರದಿಯನ್ನು ಸರಕಾರಕ್ಕೆ ಕಳುಹಿಸಿದ್ದಾರೆ. ಆದರೆ ವಿವಿಧ ಕಾರಣಗಳಿಂದ ಇದಕ್ಕೆ ಇನ್ನೂ ಅನುಮೋದನೆ ದೊರಕಿಲ್ಲ. ಈ ನಡುವೆ ಎಲೆಕ್ಟ್ರಿಕ್‌ ಬಸ್‌ ಸಹಿತ ಹೊಸ ಬಸ್‌ಗಳನ್ನು ಹಾಕುವ ನಿಟ್ಟಿನಲ್ಲಿಯೂ ವಿವಿಧ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗಿದೆಯಾದರೂ ಅಂತಿಮ ಸೂಚನೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಮಂಜೂರಾದ ರೂಟ್‌ಗಳು
ಉಡುಪಿಯಿಂದ ಕಟಪಾಡಿ, ಕಾಪು, ಪಡುಬಿದ್ರಿ, ಬೆಳ್ಮಣ್‌, ನಿಟ್ಟೆ ಮಾರ್ಗವಾಗಿ ಕಾರ್ಕಳಕ್ಕೆ ಹಾಗೂ ಉಡುಪಿಯಿಂದ ಅಲೆವೂರು, ದೆಂದೂರುಕಟ್ಟೆ ಮಾರ್ಗವಾಗಿ ಮೂಡುಬೆಳ್ಳೆಗೆ ಸಂಚರಿಸಲು ಕೆಎಸ್ಸಾರ್ಟಿಸಿ ಬಸ್‌ಗೆ ಅನುಮತಿ ನೀಡಲಾಗಿದೆ. ಆದರೆ ಬಸ್‌ಗಳು ಮಾತ್ರ ಸಂಚರಿಸುತ್ತಿಲ್ಲ. ಬೆಳಗ್ಗೆ ಹಾಗೂ ಸಂಜೆ ವೇಳೆ ಹಲವಾರು ಮಂದಿ ಪ್ರಯಾಣಿಕರು ಸೂಕ್ತ ಬಸ್‌ ಇಲ್ಲದ ಕಾರಣ ಆಟೋ ರಿಕ್ಷಾಗಳನ್ನೇ ಅವಲಂಬಿಸುತ್ತಿರುವ ದೃಶ್ಯಗಳು ಹಲವೆಡೆ ಕಂಡುಬರುತ್ತಿವೆ.

ಜಿಲ್ಲೆಯ ವಿವಿಧೆಡೆ ಹೆಚ್ಚುವರಿ ಬಸ್‌
ಜಿಲ್ಲೆಯ ವಿವಿಧೆಡೆ ಹೆಚ್ಚುವರಿ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಹಾಕುವ ಬಗ್ಗೆ ಈಗಾಗಲೇ ಹಲವಾರು ಮನವಿಗಳು ಬಂದಿವೆ. ಇವುಗಳನ್ನು ಪರಿಶೀಲನೆ ನಡೆಸಲಾಗುವುದು. ರೂಟ್‌ ಇದ್ದು ಬಸ್‌ಗಳು ಓಡಾಟ ಮಾಡದಿದ್ದರೆ ಅವುಗಳ ಬಗ್ಗೆ ಗಮನಹರಿಸಿ ಬಸ್‌ ಸೇವೆ ಒದಗಿಸಲು ವ್ಯವಸ್ಥೆ ಮಾಡಲಾಗುವುದು.
-ರಾಜೇಶ್‌ ಶೆಟ್ಟಿ, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್ಸಾರ್ಟಿಸಿ ಮಂಗಳೂರು

ಟಾಪ್ ನ್ಯೂಸ್

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

PRAVASI-Mandir

Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Aditya Shashikumar movie rashi

Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.