Udupi: ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ: ಬಂಧನ
ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯ-ದೂರು
Team Udayavani, Sep 4, 2024, 6:15 AM IST
ಉಡುಪಿ: ವೈದ್ಯನೊಬ್ಬ ತನ್ನ ಸಹಪಾಠಿ ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಈ ಸಂಬಂಧ ಆಕೆ ನೀಡಿದ ದೂರಿನಂತೆ ಉಡುಪಿಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುಕುಳ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ಮತ್ತು ಆರೋಪಿ ಇಬ್ಬರೂ ಹೊರರಾಜ್ಯದವರಾಗಿದ್ದು, ಆರಂಭದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗ ಡ್ಯಾನಿಷ್ ಮದುವೆಯ ಪ್ರಸ್ತಾವ ಮುಂದಿಟ್ಟಿದ್ದ ಎನ್ನಲಾಗಿದೆ. ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಕ್ಯಾಂಪಸ್ನಲ್ಲಿ ಪರಿಚಯವಾಗಿದ್ದರು. ಅನಂತರ 2024ರ ಜ. 22ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಡ್ಯಾನಿಶ್ ಮಾತನಾಡಿರುವುದಾಗಿ ಆರೋಪಿಸಲಾಗಿದೆ.
ಮಾ.11ರಂದು ಆತ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಅನಂತರ ಎ. 17ರಂದು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದಾಗ ಡ್ಯಾನಿಶ್ ತನ್ನ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದು ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದ. 2024ರ ಆ. 28ರ ವರೆಗೂ ಫೋನ್ನಲ್ಲಿ ತನ್ನನ್ನು ಸಂಪರ್ಕಿಸಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ವೈದ್ಯಕೀಯ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.