Udupi: ಕುಸಿಯುತ್ತಲೇ ಇದೆ ಇಂದ್ರಾಣಿ ತಡೆಗೋಡೆ; ಕಲ್ಲುಗಳು ಹೊಳೆಪಾಲು

ದುರಸ್ತಿಗೆ ಪ್ರಸ್ತಾವನೆ ಕಳುಹಿಸಿ ಮೂರು ವರ್ಷಗಳಾದರೂ ಅನುದಾನ ಬಂದಿಲ್ಲ ನೀರು ಸರಿಯಾಗಿ ಹರಿಯದೇ ಸುತ್ತಮುತ್ತ ಕೃತಕ ನೆರೆ ಸೃಷ್ಟಿ

Team Udayavani, Aug 20, 2024, 4:59 PM IST

4

ಉಡುಪಿ: ನಗರದ ಮಧ್ಯ ಭಾಗದಲ್ಲಿ ಹರಿಯುವ ಇಂದ್ರಾಣಿ ಹೊಳೆಯ ತಡೆಗೋಡೆ ಹಲವೆಡೆ ಕುಸಿದು ಬಿದ್ದಿದ್ದು, ಇದರ ದುರಸ್ತಿಗೆ ಪ್ರಸ್ತಾವನೆ ಕಳುಹಿಸಿ ಮೂರು ಮಳೆಗಾಲ ಮುಗಿದರೂ ಸರಕಾರದ ಅನುದಾನ ಮಾತ್ರ ಇನ್ನೂ ಸಿಕ್ಕಿಲ್ಲ. ಎರಡು ವರ್ಷಗಳಿಂದ ತಡೆಗೋಡೆ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಎಲ್ಲ ಕಡೆ ತಡೆಗೋಡೆ ಕುಸಿಯುತ್ತಿದೆ.

ಈಗಾಗಲೇ ಬಹುತೇಕ ಇಂದ್ರಾಣಿ ಕಲುಷಿತಗೊಂಡು ಹರಿಯುತ್ತಿದ್ದು, ನಗರದ ಹಲವು ಕಟ್ಟಡಗಳಿಂದ ತ್ಯಾಜ್ಯ ನೀರು ಇದರ ಒಡಲಿಗೆ ಸೇರುತ್ತಿದೆ. ಮಳೆಗಾಲದಲ್ಲಿ ಹೆಚ್ಚುವರಿ ನೀರು ತೋಡಿಗೆ ಸೇರಿ ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಅಲ್ಲಲ್ಲಿ ತಡೆಗೋಡೆ ಕುಸಿಯುತ್ತಿದೆ. ಈ ಹಿಂದೆ ಕಲ್ಲಿನಲ್ಲಿ ಕಟ್ಟಿದ ತಡೆಗೋಡೆ ಕಲ್ಲುಗಳು ಒಂದೊಂದಾಗಿ ಕೆಳಗೆ ಬೀಳುತ್ತಿವೆ. ಕೆಲವು ಕಡೆಗಳಲ್ಲಿ ಸಾಕಷ್ಟು ಉದ್ದದ ತಡೆಗೋಡೆಗಳು ಕುಸಿದು ಬಿದ್ದಿವೆ. ಕಲ್ಸಂಕ ವೃತ್ತದ ಬಳಿ ಕೃಷ್ಣಮಠಕ್ಕೆ ಸಾಗುವ ರಸ್ತೆ, ಗುಂಡಿಬೈಲು ಸೇರಿದಂತೆ ಹಲವು ಕಡೆಗಳಲ್ಲಿ ಹಲವು ವರ್ಷಗಳ ಹಿಂದೆ ಕಲ್ಲಿನಿಂದ ಕಟ್ಟಲಾಗಿದ್ದ ಬೃಹತ್‌ ತಡೆಗೋಡೆಗಳು ಕುಸಿದಿದ್ದು, ನೀರು ಸರಿಯಾಗಿ ಹರಿಯದೇ ಸುತ್ತಮುತ್ತಲೂ ಕೃತಕ ನೆರೆ ಸಂಭವಿಸಲು ಇದು ಒಂದು ಕಾರಣ ಎನ್ನುತ್ತಾರೆ ಸ್ಥಳೀಯರು.

ಇಂದ್ರಾಣಿಯಲ್ಲಿ ಕುಸಿದ ಅವಶೇಷಗಳು ಅಲ್ಲಲ್ಲಿಯೇ ಸಿಲುಕಿಕೊಂಡಿದ್ದು, ನದಿ ನೀರಿನ ಸರಾಗ ಹರಿಯುವಿಕೆಗೆ ಅಡಚಣೆ ಉಂಟಾಗಿರುವ ಬಗ್ಗೆ ಈಗ ಸ್ಪಷ್ಟವಾಗಿ ಕಾಣುತ್ತದೆ. ಜನರಲ್ಲಿ ನಿರಂತರ ಜಾಗೃತಿ, ಹೋರಾಟದ ಅನಂತರವೂ ಜನತೆ ಇಂದ್ರಾಣಿ ನದಿಗೆ ತ್ಯಾಜ್ಯ ಎಸೆಯುವುದನ್ನು ಮಾತ್ರ ಇನ್ನೂ ನಿಲ್ಲಿಸಿಲ್ಲ. ಮದ್ಯದ ಬಾಟಲಿಗಳು, ಹಳೆ ಬಟ್ಟೆಗಳ ಗಂಟು, ಉಪಯೋಗಿಸಿದ ಹಳೆಯ ಹಾಸಿಗೆ, ಗೃಹೋಪಯೋಗಿ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳು ಕಾಣ ಸಿಗುತ್ತಿದ್ದು, ಪ್ರತೀವರ್ಷ ಟನ್‌ಗಟ್ಟಲೇ ತ್ಯಾಜ್ಯವನ್ನು ಟ್ರ್ಯಾಶ್‌ ಬ್ಯಾರಿಯರ್‌ನಿಂದ ಸಂಗ್ರಹಿಸಲಾಗುತ್ತಿದೆ.

ಜಿಲ್ಲಾಡಳಿತಕ್ಕೂ ಮಾಹಿತಿ
ಇಂದ್ರಾಣಿ ತಡೆಗೋಡೆ ಅಲ್ಲಲ್ಲಿ ಕುಸಿಯುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಲಾಗಿದೆ. ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್‌ ಜತೆಗೂ ಈ ಬಗ್ಗೆ ಚರ್ಚಿಸಲಾಗಿದ್ದು, ಇಲಾಖೆಯವರು ಈ ಹಿಂದೆ ಕಳುಹಿಸಿದ ಪ್ರಸ್ತಾವನೆಗೆ ಒಪ್ಪಿಗೆ ಸಿಗದೇ ಅನುದಾನ ಮಂಜೂರಾತಿಯಾಗಿಲ್ಲ.
– ರಾಯಪ್ಪ, ಪೌರಾಯುಕ್ತರು, ಉಡುಪಿ

ಪ್ರಸ್ತಾವನೆಗೆ ಧೂಳು ಹಿಡಿದಿದೆ
ಸಣ್ಣ ನೀರಾವರಿ ಇಲಾಖೆ ವತಿಯಿಂದ ನಗರ ಭಾಗದಲ್ಲಿ ಇಂದ್ರಾಣಿ ಸಾಗುವ ಪ್ರದೇಶದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ತಡೆಗೋಡೆಗಳನ್ನು ಗುರುತಿಸಿ ಎಲ್ಲೆಲ್ಲಿ ತಡೆಗೋಡೆ ನಿರ್ಮಾಣವಾಗಬೇಕು ಎಂಬ ಪ್ರಸ್ತಾವನೆಯನ್ನು ಸರಕಾರಕ್ಕೆ ಮೂರ್ನಾಲ್ಕು ವರ್ಷಗಳ ಹಿಂದೆಯೇ ಕಳುಹಿಸಲಾಗಿತ್ತು. ಆದರೆ ಸರಕಾರ ಇದಕ್ಕೆ ಅನುಮೋದನೆ ನೀಡಿಲ್ಲ. ಪ್ರಸ್ತಾವನೆ ಕಡತವು ಬೆಂಗಳೂರಿನಲ್ಲಿ ಧೂಳು ಹಿಡಿದುಕೊಂಡು ಬಿದ್ದಿದೆ. 4 ವರ್ಷಗಳ ಹಿಂದೆ 15 ಕೋ.ರೂ. ವೆಚ್ಚದಲ್ಲಿ ರಥಬೀದಿ ಪಾರ್ಕಿಂಗ್‌, ಕಟ್ಟೆ ಆಚಾರ್ಯ ಮಾರ್ಗ ಸಮೀಪ, ಸಿಟಿ ಬಸ್‌ನಿಲ್ದಾಣ ಹಿಂಬದಿ ಮಠದಬೆಟ್ಟು ಸಮೀಪ ಹರಿಯುವ ಇಂದ್ರಾಣಿಗೆ 1,800 ಮೀ. ಉದ್ದದ ತಡೆಗೋಡೆ ನಿರ್ಮಿಸಿದ್ದು, ಬಿಟ್ಟರೆ ಅನಂತರ ಅನುದಾನವೇ ಬಿಡುಗಡೆಯಾಗಿಲ್ಲ.

ತಡೆಗೋಡೆಯಾಗದಿದ್ದರೆ ಸಮಸ್ಯೆಗಳೇನು?
1 ಕೆಲವು ಮನೆಗಳ ಸಮೀಪದಲ್ಲಿಯೇ ಇಂದ್ರಾಣಿ ಹರಿಯುತ್ತದೆ
2 ಮಳೆಗಾಲದಲ್ಲಿ ಕೃತಕ ನೆರೆಯಿಂದ ಕಲ್ಸಂಕ, ತೆಂಕಪೇಟೆ, ಗುಂಡಿಬೈಲು ನೆರೆಭೀತಿ
3 ಅಲ್ಲಲ್ಲಿ ತ್ಯಾಜ್ಯ ಸಿಲುಕಿ ನೀರು ಸರಾಗವಾಗಿ ಹರಿಯಲು ತೊಂದರೆ
4 ಬೇಸಗೆಯಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿಯದೇ ದುರ್ವಾಸನೆ ಆತಂಕ

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.