

Team Udayavani, Jan 30, 2025, 8:00 PM IST
ಉಡುಪಿ: ನಗರದ ವಸತಿಗೃಹ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಉಡುಪಿಯ ಸೆನ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಕೇಶವ ಎನ್ನುವಾತ ಶಿವಮೊಗ್ಗ ಮೂಲದ ಮಹಿಳೆಯನ್ನು ಕೆಲಸ ಕೊಡುವುದಾಗಿ ಕರೆಯಿಸಿಕೊಂಡು ಹೊಟೇಲ್ನಲ್ಲಿ ಆಕೆಯನ್ನು ಇರಿಸಿ ಬಲವಂತವಾಗಿ ಅನೈತಿಕ ಚಟುವಟಿಕೆಗೆ ದೂಡಿದ ಆರೋಪ ಕೇಳಿ ಬಂದಿದೆ.
ದಾಳಿ ವೇಳೆ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಕೃತ್ಯಕ್ಕೆ ಹೊಟೇಲ್ನಲ್ಲಿ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಾಲಕರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.