Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

ಖಾಸಗಿಯಾಗಿ ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಿ

Team Udayavani, Jul 23, 2024, 2:39 PM IST

2-udupi

ಉಡುಪಿ: ಪ್ರವಾಸಿ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಜು.23ರ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿ, ಟ್ಯಾಾಕ್ಸಿ ಉದ್ಯಮದವರು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಿದರೆ ಯಶಸ್ಸು ಸಿಗಲಿದೆ. ಸರಕಾರ ಮನಸ್ಸು ಮಾಡಿದರೆ ಈ ಸಮಸ್ಯೆಯನ್ನು ಸುಲಭದಲ್ಲಿ ಪರಿಹಾರ ಮಾಡಬಹುದು. ಟ್ಯಾಾಕ್ಸಿಯ ಹೊಸ ವಾಹನಗಳಿಗೆ ಅಳವಡಿಕೆ ಮಾಡುವ ನಿರ್ಧಾರವನ್ನು ಸರಕಾರ ಮಾಡಬೇಕು ಎಂದರು.

ಹಳೆ ವಾಹನಗಳಿಗೆ ಇದನ್ನು ಅಳವಡಿಸುವ ಸ್ಥಿತಿಯಲ್ಲಿ ಚಾಲಕರು-ಮಾಲಕರು ಇಲ್ಲ. ಈಗಾಗಲೇ ಟ್ಯಾಕ್ಸಿ ಚಾಲಕ-ಮಾಲಕರು ಹಲವಾರು ತೆರಿಗೆಗಳನ್ನು ಪಾವತಿಸಿ ನಷ್ಟದಲ್ಲಿ ದಿನ ದೂಡುತ್ತಿದ್ದಾಾರೆ. ಬೆಂಗಳೂರಿನಂತಹ ನಗರಗಳಲ್ಲಿ ಇದು ನಡೆಯಬಹುದು. ಆದರೆ ಸೀಮಿತ ಜನಸಂಖ್ಯೆ ಇರುವ ಉಡುಪಿಯಲ್ಲಿ ಇದು ಅಸಾಧ್ಯದ ಮಾತು ಎಂದು ಹೇಳಿದರು.

ವೈಟ್‌ಬೋರ್ಡ್‌ನಲ್ಲಿ ಬಾಡಿಗೆ ಮಾಡುವವರಿಗೆ ಸರಕಾರ ಕಡಿವಾಣ ಹಾಕಿದರೆ ಈ ಉದ್ಯಮ ಚೇತರಿಕೆ ಕಾಣಲು ಸಾಧ್ಯವಿದೆ. ಸರಕಾರ ಇದನ್ನು ಗಮನಿಸಿ ಕಳ್ಳ ಉದ್ಯಮಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಗಮನಹರಿಸಬೇಕು. ಸಾಧ್ಯವಿದ್ದರೆ ಖಾಸಗಿಯಾಗಿ ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಟ್ಯಾಾಕ್ಸಿಮನ್‌ಗಳ ಧ್ವನಿಯನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡು ಇದಕ್ಕೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಟ್ಯಾಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೆಟಿಡಿಓ ಅಧ್ಯಕ್ಷ ರಮೇಶ್ ಕುಂದಾಪುರ, ಉಪಾಧ್ಯಕ್ಷರಾದ ಮಂಜು ಪೂಜಾರಿ, ರಾಘವೇಂದ್ರ ಸೋಮಯಾಜಿ, ಜಯಕರ ಕುಂದರ್, ರವಿ ಶೆಟ್ಟಿ, ಸತೀಶ್ ನಾಯಕ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಜತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನ ಕಾರ್ಯದರ್ಶಿಗಳಾದ ವಿಕ್ರಂ ರಾವ್, ಸತೀಶ್ ಶೆಟ್ಟಿ, ಮಹೇಶ್ ಕುಮಾರ್, ವಿನ್ಸಿ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಅನಂತರ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯ್‌ಕ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.