Udupi: ಸಹಪಾಠಿ ಶ್ರೀಪಾದರೊಂದಿಗೆ ಜನ್ಮ ನಕ್ಷತ್ರ ಆಚರಿಸಿದ ಪುತ್ತಿಗೆ ಶ್ರೀ


Team Udayavani, Sep 10, 2024, 6:11 PM IST

8-putthige

ಉಡುಪಿ: ತಮ್ಮೆಲ್ಲ ಸಾಧನೆಗಳಿಗೆ ಸ್ಫೂರ್ತಿದಾಯಕರಾಗಿ ಶ್ರೀ ವಿಬುಧೇಶತೀರ್ಥರ ನೆನಪಲ್ಲಿ ವಿಶ್ವಪ್ರಿಯರನ್ನು, ಗುರು ವಿದ್ಯಾಮಾನ್ಯರ ಪ್ರತೀಕರಾಗಿ ಶ್ರೀ ವಿದ್ಯೇಶತೀರ್ಥರನ್ನು ಕಾಣುತ್ತಿದ್ದೇವೆ. ಇವರಿಬ್ಬರ ಆಶೀರ್ವಾದ ಫಲವನ್ನು ಇಲ್ಲಿ ನೋಡುತ್ತಿದ್ದೇವೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನುಡಿದರು.

ಶ್ರೀಕೃಷ್ಣ ಮಠದಲ್ಲಿ ಜರಗಿದ ಪುತ್ತಿಗೆ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರ ಕಾರ್ಯಕ್ರಮದಲ್ಲಿ ಸಹಪಾಠಿಗಳಾದ ಶ್ರೀ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಗೌರವಿಸಿ ತಮ್ಮ ವಿದ್ಯಾಭ್ಯಾಸ ಕಾಲವನ್ನು ಸ್ಮರಿಸಿದರು.

ಪರ್ಯಾಯ ಮಠದ ವತಿಯಿಂದ ದಿವಾನರಾದ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯರು ಅದಮಾರು ಮತ್ತು ಭಂಡಾರಕೇರಿ ಶ್ರೀಪಾದರನ್ನು ಮಾಲಿಕೆ ಮಂಗಳಾರತಿ ಮಾಡಿ ಸಂಸ್ಥಾನ ಗೌರವ ಅರ್ಪಿಸಿದರು. ಪರ್ಯಾಯ ಶ್ರೀಪಾದರು ಗಂಧಾದ್ಯುಪಚಾರಗಳನ್ನು ಮಾಡಿ ಇತರರನ್ನೂ ಸತ್ಕರಿಸಿದರು.

ಆದಮಾರು ಶ್ರೀಪಾದರು ಶ್ರೀ ಪುತ್ತಿಗೆ ಶ್ರೀಗಳನ್ನು ಸಮ್ಮಾನಿಸಿ, ಶ್ರೀಪಾದರು ವಿಶ್ವಂಭರನೆನಿಸಿದ ಗಣೇಶನ ಹಬ್ಬದ ದಿನಗಳ ಮಧ್ಯೆ ಹುಟ್ಟಿದ್ದರಿಂದ ವಿಶ್ವದಾದ್ಯಂತ ಧರ್ಮಪ್ರಚಾರ ಮಾಡುತ್ತಾ ವಿಶ್ವಂಭರನ ಕೃಪೆಗೆ ಪಾತ್ರರಾಗಿದ್ದಾರೆ. ಅವರ ಸಾಧನೆ ಇನ್ನಷ್ಟು ಉತ್ತುಂಗಕ್ಕೇರಲಿ ಎಂದು ಅನುಗ್ರಹಿಸಿದರು.

ಭಂಡಾರಕೇರಿ ಶ್ರೀಪಾದರು ಪುತ್ತಿಗೆ ಶ್ರೀಗಳನ್ನು ಗೌರವಿಸಿ, ಶ್ರೀಗಳ ಬಾಲ್ಯ ಸಾಧನೆಗಳನ್ನು ನೆನಪಿಸಿದರು. ಧರ್ಮ ಪ್ರಚಾರವನ್ನು ಶ್ರೀಪಾದರು ಸುಗುಣ ವಿದ್ಯಾಪೀಠ ಮತ್ತು ಸುಗುಣಮಾಲಾ ಪತ್ರಿಕೆಗಳ ರೂಪದಲ್ಲಿ  ಅತ್ಯಂತ ವ್ಯವಸ್ಥಿತವಾಗಿ ನಡೆಸುತ್ತಿರುವುದನ್ನು ಶ್ಲಾಘನೀಯ ಎಂದರು.

ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರಿಂದ್ರತೀರ್ಥ ಶ್ರೀಪಾದರು ಮಾತನಾಡಿ, ಗುರುಗಳು 63ರಂತೆ ಇಲ್ಲದೆ 36 ವರ್ಷದಂತೆ ಯುವ ಉತ್ಸಾಹದಲ್ಲಿ ಕರ್ತವ್ಯಗಳನ್ನು ನಡೆಸುತ್ತಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಅವರ ಅನುಗ್ರಹದಿಂದ ನಾವು ಸಾಧನೆ ಮಾಡುವಂತಾಗಲಿ ಎಂದು ಪ್ರಾರ್ಥಿಸಿದರು.

ಗುರುಗಳಿಗೆ ಪುಷ್ಪದ ಕಿರೀಟ ತೊಡಿಸಿದರು.

ಶ್ರೀಪಾದರಿಗೆ ಶ್ರೀ ಪುತ್ತಿಗೆ ವಿದ್ಯಾಪೀಠದ ಹಳೇ ವಿದ್ಯಾರ್ಥಿಗಳು, ಮಠದ ಸಿಬಂದಿ ಮಾಲಿಕೆ ಮಂಗಳಾರತಿಯೊಂದಿಗೆ ವಿಶೇಷ ಗೌರವ ಅರ್ಪಿಸಿದರು. ಶ್ರೀಪಾದರ ಎರಡು ಕೃತಿಗಳನ್ನು ಅದಮಾರು ಶ್ರೀಪಾದರು, ಭಂಡಾರಕೇರಿ ಶ್ರೀಪಾದರು ಬಿಡುಗಡೆಗೊಳಿಸಿದರು. ಕೃತಿ ಸಂಗ್ರಹ ಮಾಡಿ ಪ್ರಕಟಿಸಲು ಶ್ರಮಿಸಿದ ಓಂಪ್ರಕಾಶ ಭಟ್ಟರನ್ನು ಶ್ರೀಪಾದರು ಗೌರವಿಸಿದರು.

ವಿದ್ವಾಂಸರು, ಶ್ರೀ ಪುತ್ತಿಗೆ ವಿದ್ಯಾಪೀಠದ ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮಠದ ವಿದ್ವಾಂಸ ಡಾ| ಬಿ. ಗೋಪಾಲಾಚಾರ್ಯ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.