Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು
Team Udayavani, Oct 17, 2024, 9:20 PM IST
ಉಡುಪಿ: ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ಮತ್ತೂಂದು ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ ಘಟನೆ ನಡೆದಿದೆ.
ಸಾಣೂರಿನ ಮನೋಜ್ ಅವರು ಉಡುಪಿಯ ಮಹೀಂದ್ರಾ ಶೋ ರೂಂನಿಂದ ವಾಹನವನ್ನು ಕಾರ್ಕಳ ಮಹೀಂದ್ರಾ ಶೋರೂಂಗೆ ಮಣಿಪಾಲ-ಕಾರ್ಕಳ ಮಾರ್ಗವಾಗಿ ತೆಗೆದುಕೊಂಡು ಹೋಗುತ್ತಿದ್ದರು.
ಬನ್ನಂಜೆಯ ಬಳಿ ತೆರಳುತ್ತಿದ್ದಾಗ ಅವರ ವಾಹನವನ್ನು ವ್ಯಾಗನಾರ್ ಕಾರೊಂದು ಮುಂದೆ ಹೋಗಿ ಅಡ್ಡಗಟ್ಟಿದ್ದು, ಈ ವೇಳೆ ಆ ಕಾರಿನಲ್ಲಿದ್ದ ಚಾಲಕ ಸೇರಿ ಮೂವರು ಕಾರಿನಿಂದ ಇಳಿದು ‘ಏನು ನಿನಗೆ ಕಣ್ಣು ಕಾಣುವುದಿಲ್ಲವ ನನ್ನ ಕಾರಿಗೆ ಗುದ್ದಿಸಿ ಮುಂದೆ ಹೋಗುತ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ಬೈದು ‘ಜಾಸ್ತಿ ಮಾತನಾಡಿದರೆ ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ’ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಅನಂತರ ಮೂರೂ ಮಂದಿ ಸೇರಿ ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ.
ಅದರಲ್ಲಿದ್ದ ಓರ್ವ ವ್ಯಕ್ತಿ ಮರದ ಕೋಲಿನಿಂದ ಬೆನ್ನಿಗೆ ಮತ್ತು ಕಾಲಿಗೆ ಹೊಡೆದು ಬೆದರಿಕೆ ಹಾಕಿದ್ದಾನೆ ಎಂದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Gold Price; ಚಿನ್ನ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.