Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ


Team Udayavani, Oct 6, 2024, 4:00 PM IST

8

ಉಡುಪಿ: ನವರಾತ್ರಿ ಪ್ರಯುಕ್ತ ಶಾಲಾ-ಮಕ್ಕಳಿಗೆ ರಜೆ ಇದ್ದು, ನಗರದಾದ್ಯಂತ ವಿವಿಧ ಅಂಗಡಿ-ಮುಂಗಟ್ಟುಗಳಲ್ಲಿ ಜನದಟ್ಟಣೆ ಕಂಡುಬರುತ್ತಿದೆ. ಧಾರ್ಮಿಕ ಕೇಂದ್ರಗಳ ಎದುರು ಭಾಗದಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಳ ಕಂಡುಬಂದಿದೆ. ದಟ್ಟನೆ ಇರುವ ಭಾಗದಲ್ಲಿ ಕೆಲವು ದಿನಗಳ ಮಟ್ಟಿಗಾದರೂ ಟ್ರಾಫಿಕ್‌ ಪೊಲೀಸರು ಅಥವಾ ಹೋಂಗಾರ್ಡ್‌ಗಳನ್ನು ನಿಯೋಜಿಸುವ ಬಗ್ಗೆ ಸಾರ್ವಜನಿಕ ವಲಯದಿಂದ ಆಗ್ರಹಗಳು ಕೇಳಿಬರುತ್ತಿವೆ.

ಬೆಳಗ್ಗಿನಿಂದ ರಾತ್ರಿಯವರೆಗೂ ಈ ಸಮಸ್ಯೆ ತಪ್ಪಿದ್ದಲ್ಲ. ಈ ನಡುವೆ ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುತ್ತಿರುವ ಕಾರಣ ಸಮಸ್ಯೆ ಎದುರಾಗುತ್ತಿದೆ. ನಗರದ ಸಿಟಿ ಬಸ್‌ ನಿಲ್ದಾಣ, ಸರ್ವಿಸ್‌ ಬಸ್‌ ನಿಲ್ದಾಣ, ಕಲ್ಸಂಕ, ಕರಾವಳಿ ಬೈಪಾಸ್‌, ತೆಂಕಪೇಟೆ, ಬಡಗುಪೇಟೆ, ಕಿನ್ನಿಮೂಲ್ಕಿ ಹೀಗೆ ವಿವಿಧೆಡೆ ಹಿಂದಿಗಿಂತಲೂ ಅಧಿಕ ವಾಹನಗಳು ಸಂಚರಿಸುತ್ತಿವೆ.

ಕಿತ್ತುಹೋದ ಕೋನ್‌ಗಳು
ಕಲ್ಸಂಕ ಬಳಿ ಎಡಬದಿಗೆ ಹೋಗುವ ವಾಹನಗಳ ಸಂಚಾರಕ್ಕೆ ಕೋನ್‌ ಅಳವಡಿಕೆ ಮಾಡಿದ್ದು, ಅದು ಸಂಪೂರ್ಣ ಕಿತ್ತುಹೋಗಿದ್ದು, ಕಬ್ಬಿಣ ಮೇಲೆ ಎದ್ದು ಕಾಣುತ್ತಿದೆ. ಇದೇ ಕೆಎಂ ಮಾರ್ಗದ ಬಳಿಯೂ ಕೋನ್‌ಗಳು ಸಂಪೂರ್ಣ ಕಿತ್ತುಹೋಗಿವೆ. ಪರಿಣಾಮ ವಾಹನಗಳು ಎಲ್ಲೆಂದರಲ್ಲಿ ಜಾಗ ಇರುವೆಡೆ ನುಗ್ಗಿಸಿಕೊಂಡು ಚಲಿಸುತ್ತವೆ.

ನೋ ಪಾರ್ಕಿಂಗ್‌ ಸ್ಥಳದಲ್ಲಿ ನಿಲುಗಡೆ
ನಗರದ ಹಲವೆಡೆ ನೋ ಪಾರ್ಕಿಂಗ್‌ ಫ‌ಲಕ ಹಾಕಲಾಗಿದ್ದು, ಇದರ ಎದುರು ಭಾಗದಲ್ಲಿಯೇ ವಾಹನಗಳನ್ನು ನಿಲ್ಲಿಸುತ್ತಿರುವ ಪರಿಣಾಮ ಮತ್ತಷ್ಟು ಸಂಚಾರ ದಟ್ಟನೆ ಎದುರಾಗುತ್ತಿದೆ. ಕೆಲವು ಸಿಗ್ನಲ್‌ ಫ‌ಲಕಗಳು ಕೂಡ ಕಿತ್ತು ಹೋಗಿರುವ ಪರಿಣಾಮ ಅದು ಯಾವ ಸಿಗ್ನಲ್‌ ಎಂಬುವುದು ಪ್ರಯಾಣಿಕರಿಗೆ ತಿಳಿಯುವುದೂ ಇಲ್ಲ.

ಸಿಬಂದಿ ನೇಮಕ
ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ವಿವಿಧ ಭಾಗಗಳಿಗೆ ಕೋನ್‌ ಹಾಗೂ ಸಿಗ್ನಲ್‌ ಲೈಟ್‌ಗಳನ್ನು ಅಳವಡಿಸುವ ಬಗ್ಗೆ ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ. ಆಯಾಕಟ್ಟಿನ ಭಾಗದಲ್ಲಿ ಟ್ರಾಫಿಕ್‌ ಪೊಲೀಸರು ಸಂಚಾರ ದಟ್ಟಣೆೆ ನಿಯಂತ್ರಿಸುತ್ತಿದ್ದಾರೆ. ಹೆಚ್ಚಿನ ದಟ್ಟಣೆ ಕಂಡುಬರುತ್ತಿರುವ ಸ್ಥಳಗಳಲ್ಲಿ ಅಧಿಕ ಮಂದಿ ಸಿಬಂದಿಯನ್ನೂ ನಿಯೋಜಿಸಲಾಗುವುದು.
-ಸುದರ್ಶನ ದೊಡ್ಡಮನಿ, ಪೊಲೀಸ್‌ ಉಪನಿರೀಕ್ಷಕರು, ಸಂಚಾರ ಠಾಣೆ

ಉಡುಪಿಯಲ್ಲಿ ನಿತ್ಯ ಬ್ಲಾಕ್‌
ನಗರದ ಕಿದಿಯೂರು ಹೊಟೇಲ್‌ ಮುಂಭಾಗದಲ್ಲಿ ಡ್ರೈನೇಜ್‌ ಕಾಮಗಾರಿ ಮಾಡುತ್ತಿರುವ ಕಾರಣ ಅಲ್ಲಿಂದ ಶಿರಿಬೀಡು ಮಾರ್ಗವಾಗಿ ಸಿಟಿ ಬಸ್‌ ನಿಲ್ದಾಣ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಣಿಪಾಲಕ್ಕೆ ಹೋಗುವವರು ಕಿದಿಯೂರು ಹೊಟೇಲ್‌ನಿಂದ ಬಲಬದಿಗೆ ತಿರುಗಿ ಸಿಟಿ ಬಸ್‌ನಿಲ್ದಾಣದ ಮೂಲಕ ಹೋಗಬೇಕು. ನಗರಕ್ಕೆ ಹೋಗುವವರೂ ಇದೇ ಮಾರ್ಗದಲ್ಲಿ ಹೋಗಬೇಕಿರುವ ಕಾರಣ ಸಿಟಿ ಬಸ್‌ ನಿಲ್ದಾಣದ ತುಂಬಾ ಬೆಳಗ್ಗಿನಿಂದ ರಾತ್ರಿಯವರೆಗೂ ಟ್ರಾಫಿಕ್‌ ದಟ್ಟನೆ ಕಂಡುಬರುತ್ತಿದೆ. ಇಲ್ಲಿ ಇಬ್ಬರು ಟ್ರಾಫಿಕ್‌ ಪೊಲೀಸರನ್ನು ನಿಯೋಜಿಸಲಾಗಿದೆಯಾದರೂ ಕಿರಿದಾದ ಏಕಮುಖ ರಸ್ತೆಯಾದ ಕಾರಣ ನಿತ್ಯ ಈ ಸಮಸ್ಯೆ ಎದುರಾಗುತ್ತಿದೆ. ಆದಷ್ಟು ಬೇಗ ಪೂರ್ಣ ಗೊಳಿಸಿ ಸಂಚಾರ ಮುಕ್ತಗೊಳಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಇಲ್ಲವಾದರೆ ಕಾಮಗಾರಿ ಆಗು ವಾಗಲೇ ವಾಹನ ಸಂಚಾರ ಮಾಡುವ ಸಾಧ್ಯತೆಯೂ ಹೆಚ್ಚಿದೆ ಎಂದು ಸ್ಥಳೀಯರು ದೂರಿದ್ದಾರೆ.

ಟಾಪ್ ನ್ಯೂಸ್

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.