Udupi; ಐತಿಹಾಸಿಕ ಕಟ್ಟಡದ ಯುಗಾಂತ್ಯ

ಹಿಂದೆ ಸಬ್‌ ಜೈಲ್‌ ಆಗಿದ್ದ ಉಡುಪಿ ಹಳೆ ತಾಲೂಕು ಕಚೇರಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ

Team Udayavani, Aug 30, 2024, 6:04 PM IST

8

ಉಡುಪಿ: ನಗರದ ಐತಿಹಾಸಿಕ ಕಟ್ಟಡಗಳಲ್ಲಿ ಒಂದಾದ, ಸ್ವಾತಂತ್ರ್ಯ ಪೂರ್ವದಲ್ಲಿ ಸಬ್‌ ಜೈಲ್‌ ಆಗಿದ್ದ, ಹಳೆ ತಾಲೂಕು ಕಚೇರಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಬ್ರಿಟಿಷರ ಆಳ್ವಿಕೆ ಇದ್ದ 1906ರಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡವನ್ನು ಪಾರಂಪರಿಕ ಕಟ್ಟಡ ಮಾನ್ಯತೆಯೊಂದಿಗೆ ಉಳಿಸಲು ನಡೆಸಿದ ಪ್ರಯತ್ನಗಳು ವಿಫ‌ಲವಾಗಿವೆ. ಇದೀಗ ಕಟ್ಟಡವನ್ನು ನೆಲಸಮಗೊಳಿಸುವ ನಿಟ್ಟಿನಲ್ಲಿ ಅದರ ಹೆಂಚುಗಳನ್ನು ತೆಗೆಯುವ ಕಾರ್ಯ ಆರಂಭಗೊಂಡಿದೆ. ಈ ಜಾಗದಲ್ಲಿ ಇನ್ನು ನಗರಸಭೆಯ ಹೊಸ ಕಟ್ಟಡ ನಿರ್ಮಾಣವಾಗಲಿದೆ.

ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿ ಉಡುಪಿ ನಗರದಲ್ಲಿರುವ ವಿರಳ ಪಾರಂಪರಿಕ ಕಟ್ಟಡಗಳಲ್ಲಿ ಇದೂ ಒಂದು. ಸಣ್ಣ ಕೆಂಪು ಇಟ್ಟಿಗೆಗಳನ್ನು ಬಳಸಿ ಮದ್ರಾಸ್‌ ರೂಫಿಂಗ್‌ ಮಾದರಿಯಲ್ಲಿ ನಿರ್ಮಿಸಿದ ಕಟ್ಟಡ ಇದು. ನಿರ್ಮಾಣದ ಆರಂಭದಲ್ಲಿ ಈ ಕಟ್ಟಡದಲ್ಲಿ ಕೋರ್ಟ್‌ ಕಲಾಪಗಳು ನಡೆಯುತ್ತಿದ್ದವು ಮತ್ತು ಜೈಲು ಕೂಡಾ ಇಲ್ಲೇ ಇತ್ತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಹಲವರು ಇಲ್ಲೇ ಜೈಲುವಾಸ ಅನುಭವಿಸಿದ್ದರು.

ಈ ಕಟ್ಟಡದ ಮೇಲಂತಸ್ತಿನಲ್ಲಿ 12 ಮತ್ತು ಕೆಳ ಅಂತಸ್ತಿನಲ್ಲಿ 12 ಸೆಲ್‌ಗಳಿವೆ. ಉಡುಪಿಯಲ್ಲಿ ಹೊಸ ಜೈಲು ನಿರ್ಮಾಣವಾಗುವವರೆಗೂ ಇದೇ ಜೈಲಿನಲ್ಲಿ ಕೈದಿಗಳನ್ನು ಇಡಲಾಗುತ್ತಿತ್ತು. ಸುಮಾರು 10 ವರ್ಷದಿಂದ ಈ ಕಟ್ಟಡ ಪಾಳುಬಿದ್ದಿದೆ.

ಆದರೆ ಕಟ್ಟಡ ಕೆಡವದೆ ಸಂರಕ್ಷಿಸಬೇಕು ಎಂಬ ನಿಟ್ಟಿನಲ್ಲಿ ಕಲಾವಿದರು, ಕಟ್ಟಡ ವಿನ್ಯಾಸಕರು ದೊಡ್ಡ ಆಂದೋಲನ ಮಾಡಿದ್ದರು. ಆದರೆ ಅಂತಿಮವಾಗಿ ನಗರಸಭೆಯ ಹೊಸ ಕಟ್ಟಡವನ್ನು ಈ ಜಾಗದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ. ಸುಮಾರು 10 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ಕೆಡವಲು 12 ಲಕ್ಷ ರೂ.ಗಳಿಗೆ ಟೆಂಡರ್‌ ಆಗಿದ್ದು, ಈಗ ಹೆಂಚು ತೆಗೆಯುವ ಕೆಲಸ ಆರಂಭವಾಗಿ ದೆ. ಈ ನಡುವೆ ಸಬ್‌ಜೈಲಿನ ಭಾಗವನ್ನು ಉಳಿಸಿ ಉಳಿದ ಕೆಲಸವನ್ನು ಮುಂದುವರಿಸುವಂತೆ ಡಿಸಿ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

ನಗರಸಭೆ ಹೊಸ ಕಟ್ಟಡಕ್ಕೆ ಬೇಡಿಕೆ

ಕವಿ ಮುದ್ದಣ ಮಾರ್ಗದಲ್ಲಿರುವ ಈಗಿನ ನಗರ ಸಭಾ ಕಚೇರಿ ಇಕ್ಕಟ್ಟಿನಿಂದ ಕೂಡಿದ್ದು, ಹೊರಗೂ ವಾಹನ ಪಾರ್ಕಿಂಗ್‌ ಅವಕಾಶವಿಲ್ಲ. ಇಲ್ಲಿ ಸಭೆಗಳು ನಡೆದಾಗ ರಸ್ತೆಯಲ್ಲೇ ವಾಹನಗಳು ನಿಂತು ಬ್ಲಾಕ್‌ ಆಗುತ್ತವೆ. ಸಾರ್ವಜನಿಕರು ಎಲ್ಲೋ ದೂರದಲ್ಲಿ ವಾಹನ ನಿಲ್ಲಿಸಿ ಬರಬೇಕು. ಹೀಗಾಗಿ ಹೊಸ ಕಟ್ಟಡ ನಿರ್ಮಾಣದ ಬೇಡಿಕೆ ಜೋರಾಗಿತ್ತು. ಆದರೆ, ಕಳೆದ ನಾಲ್ಕೈದು ವರ್ಷಗಳಿಂದಲೂ ನಿರ್ಮಾಣ ಯೋಜನೆ ನನೆಗುದಿಯಲ್ಲೇ ಇತ್ತು.

ಇದೀಗ ಹಳೆ ತಾಲೂಕು ಕಚೇರಿ ಜಾಗದಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ನಗರಸಭೆಗೆ ಆದಾಯ ಬರುವಂತೆ ವಾಣಿಜ್ಯ ಸಂಕೀರ್ಣ ಮಾದರಿಯಲ್ಲಿ ಹೊಸ ಕಟ್ಟಡ ರೂಪಿಸುವ ನೆಲೆಯಲ್ಲಿ ಯೋಜನೆ ಸಿದ್ದಪಡಿಸಲಾಗಿದೆ. ಇಲ್ಲಿ ಪಾರ್ಕಿಂಗ್‌ಗೆ ಸಮರ್ಪಕ ವ್ಯವಸ್ಥೆ ಮಾಡಬೇಕು ಎಂಬುದು ಜನರ ಬೇಡಿಕೆಯಾಗಿದೆ.

ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯೂ ಶಿಫ್ಟ್ ?
ನಗರಸಭೆ ಮತ್ತು ಪ್ರಾಧಿಕಾರ ಕಚೇರಿ ಒಟ್ಟಿಗೆ ಇದ್ದಲ್ಲಿ ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ನೆರವೇರಲಿದೆ ಎಂಬುದು ಬಹುತೇಕರ ಅಭಿಪ್ರಾಯವಾಗಿದೆ. ಪ್ರಾಧಿಕಾರದ ಕಚೇರಿಯನ್ನೂ ನಗರಸಭೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳಿಸುವ ನಿರ್ಧಾರದ ಬಗ್ಗೆ ಜನಪ್ರತಿನಿಧಿಗಳು ಯೋಚಿಸಬೇಕು ಎಂಬ ಬೇಡಿಕೆ ಇದೆ.

ವ್ಯವಸ್ಥಿತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನಗರಸಭೆ ಹೊಸ ಕಟ್ಟಡ ನಿರ್ಮಾಣ ಸಂಬಂಧ ಹಳೆ ಕಟ್ಟಡ ತೆರವು ಕಾರ್ಯ ಈಗಾಗಲೇ ಆರಂಭಗೊಂಡಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ನಿತ್ಯದ ಕೆಲಸ ಕಾರ್ಯಕ್ಕೆ ಬರುವ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಪಾರ್ಕಿಂಗ್‌ ವ್ಯವಸ್ಥೆ ರೂಪಿಸಲಾಗುವುದು. ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯನ್ನು ಇದರಲ್ಲಿಯೇ ಇರುವಂತೆ ಯೋಜನೆ ರೂಪಿಸಲಾಗುವುದು. – ಪ್ರಭಾಕರ್‌ ಪೂಜಾರಿ, ಅಧ್ಯಕ್ಷರು, ನಗರಸಭೆ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.