Udupi Uchila Dasara 2024: ವೈಭವದ ಶೋಭಾಯಾತ್ರೆಗೆ ಅಂತಿಮ ಸಿದ್ಧತೆ 

ಉಚ್ಚಿಲ - ಎರ್ಮಾಳು - ಉಚ್ಚಿಲ - ಮೂಳೂರು - ಕೊಪ್ಪಲಂಗಡಿ - ಕಾಪು ಬೀಚ್‌ಗೆ ಸಾಗಲಿದೆ ಬೃಹತ್ ಶೋಭಾಯಾತ್ರೆ

Team Udayavani, Oct 12, 2024, 2:31 PM IST

8-ucchila

ಕಾಪು: ಕರ್ನಾಟಕದ ಕೊಲ್ಹಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ ಉಡುಪಿ ಉಚ್ಚಿಲ ದಸರಾ ಉತ್ಸವ 2024ರ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಮತ್ತು ಶಾರದಾಮಾತೆಯ ವಿಗ್ರಹಗಳ ಜಲಸ್ತಂಭನಾ ಶೋಭಾಯಾತ್ರೆಯು ಸಂಜೆ 3 ಗಂಟೆಗೆ ಆರಂಭಗೊಳ್ಳಲಿದ್ದು, ಶೋಭಾಯಾತ್ರೆ ಸಹಿತ ಜಲಸ್ತಂಭನ ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ: ಉಚ್ಚಿಲ ದಸರಾ ಸಂಭ್ರಮವನ್ನು ಕಣ್ತುಂಬಿಸಿಕೊಳ್ಳಲು ಉಚ್ಚಿಲದತ್ತ ಜನಸಾಗರ ಹರಿದು ಬರುತ್ತಿದ್ದು ಈಗಗಾಲೇ ಲಕ್ಷೋಪಲಕ್ಷ ಜನ ಕ್ಷೇತ್ರ ಮಾತೆ ಮಹಾಲಕ್ಷ್ಮೀ ದೇವಿ, ಶಾರದೆ ಮತ್ತು ನವದುರ್ಗೆಯರ ದರ್ಶನ ಪಡೆದಿದ್ದಾರೆ. ಶನಿವಾರ ಒಂದೇ ದಿನ ಮೂರು ಲಕ್ಷಕ್ಕೂ ಅಧಿಕ ಮಂದಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು ಶೋಭಾಯಾತ್ರೆಯಲ್ಲಿ 1 ಲಕ್ಷಕ್ಕೂ ಮಿಕ್ಕಿದ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಲಸ್ಥಂಭನದ ಸಂದರ್ಭದಲ್ಲೂ 30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಮೆರವಣಿಗೆ ಸಾಗುವ ಹಾದಿ: ಮಧ್ಯಾಹ್ನ 2.30ಕ್ಕೆ ವಿಸರ್ಜನಾ ಪೂಜೆ ನಡೆದು, 3 ಗಂಟೆಗೆ ಶೋಭಾ ಯಾತ್ರೆ ಪ್ರಾರಂಭಗೊಳ್ಳಲಿದೆ. ಮಹಾಲಕ್ಷ್ಮೀ ದ್ವಾರದ ಬಳಿ ಶಾರದಾ ಮಾತೆ ಮತ್ತು ನವದುರ್ಗೆಯರಿಗೆ ಪುಷ್ಪಾರ್ಚನೆಗೈದು ನಾಡೋಜ ಡಾ| ಜಿ. ಶಂಕರ್ ಸಹಿತ ಗಣ್ಯರು ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಎರ್ಮಾಳ್-ಉಚ್ಚಿಲ- ಮೂಳೂರು-ಕೊಪ್ಪಲಂಗಡಿ ಮಾರ್ಗವಾಗಿ ಕಾಪು ಬೀಚ್ (ದೀಪಸ್ತಂಭದ ಬಳಿ) ಗೆ ತಲುಪಲಿದೆ. ಈ ಸಂದರ್ಭ ಕಾಪು ಬೀಚ್‌ನಲ್ಲಿ ಮ್ಯೂಸಿಕಲ್ ನೈಟ್ ಆಯೋಜಿಸಲಾಗಿದೆ.

ಬೃಹತ್ ಗಂಗಾರತಿ: ನವದುರ್ಗೆಯರು ಮತ್ತು ಶಾರದಾ ಮೂರ್ತಿಯ ಮೆರವಣಿಗೆಯು ಕಾಪು ಬೀಚ್ ತಲುಪಿದ ಬಳಿಕ ಕಾಶಿ ಗಂಗಾರತಿ ಮಾದರಿಯಲ್ಲಿ 10 ಬೃಹತ್ ಆರತಿಗಳೊಂದಿಗೆ ಮಹಾ ಮಂಗಳಾರತಿ ನಡೆಯಲಿದೆ. ವಿಗ್ರಹಗಳ ವಿಸರ್ಜನಾ ಪೂರ್ವದಲ್ಲಿ 10 ಸಾವಿರ ಸುಮಂಗಲೆಯರಿಂದ ಸಾಮೂಹಿಕ ಮಹಾ ಮಂಗಳಾರತಿ ನೆರವೇರಲಿದೆ. ಬಳಿಕ ಸಮುದ್ರ ಮಧ್ಯದಲ್ಲಿ ಶಾರದಾ ಮಾತೆ ಮತ್ತು ನವದುರ್ಗೆಯರ ವಿಗ್ರಹಳನ್ನು ಜಲಸ್ತಂಭನಗೊಳಿಸಲಾಗುವುದು. ಈ ವೇಳೆ ಲೈಟ್‌ಹೌಸ್ ಪಕ್ಕದ ಸಮುದ್ರ ಮಧ್ಯದಲ್ಲಿ ನೂರಾರು ದೋಣಿಗಳಿಂದ ಕೃತಕ ದ್ವೀಪ ಸೃಷ್ಟಿ ಮತ್ತು ಸುಡುಮದ್ದು ಪ್ರದರ್ಶನ ನಡೆಯಲಿದೆ.

ಅತ್ಯಾಕರ್ಷಕ ಟ್ಯಾಬ್ಲೋ: ಶಾರದೆ ಮತ್ತು ನವದುರ್ಗೆಯರ ವಿಗ್ರಹಗಳನ್ನೊಳಗೊಂಡ 10 ಟ್ಯಾಬ್ಲೋಗಳ ಸಹಿತವಾಗಿ, ಸಾಮಾಜಿಕ ಜಾಗೃತಿಯ ಸಂದೇಶ ಸಾರುವ ಟ್ಯಾಬ್ಲೋಗಳು, ಭಜನಾ ತಂಡಗಳು, ಥೈಯ್ಯಂ ಸಹಿತ ವಿವಿಧ ವೇಷ ಭೂಷಣಗಳು, ಹುಲಿ ವೇಷ, ಚೆಂಡೆ ಬಳಗ, ನಾದ ಸ್ವರ, ವಾದ್ಯ ಸಹಿತ ನಾಸಿಕ್ ಬ್ಯಾಂಡ್ ತಂಡಗಳು ಹಾಗೂ 50ಕ್ಕೂ ಅಧಿಕ ಟ್ಯಾಬ್ಲೋಗಳನ್ನೊಳಗೊಂಡ ಶೋಭಾಯಾತ್ರೆಯು ಸ್ಮರಣೀಯ ಕಾರ್ಯಕ್ರಮವಾಗಿ ಮೂಡಿಬರಲಿದೆ.

ಹೆಚ್ಚುತ್ತಿರುವ ವಿಜ್ರಂಭಣೆ: ದ. ಕ. ಮೊಗವೀರ ಮಹಾಜನ ಸಂಘದ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾದಿಗಳ ಸಹಯೋಗದೊಂದಿಗೆ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ ಉತ್ಸವದಲ್ಲಿನ ಅಚ್ಚುಕಟ್ಟುತನಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದಸರಾ ರೂವಾರಿ ಡಾ| ಜಿ. ಶಂಕರ್, ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಮತ್ತು ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ ಹಾಗೂ ಸರ್ವ ಪದಾಧಿಕಾರಿಗಳ ಶ್ರಮದಿಂದಾಗಿ ವರ್ಷದಿಂದ ವರ್ಷಕ್ಕೆ ಇಲ್ಲಿನ ವಿಜ್ರಂಭಣೆ ಹೆಚ್ಚುತ್ತಿದೆ.

ವಿವಿಧೆಡೆ ಪಾರ್ಕಿಂಗ್ ಸೌಲಭ್ಯ: ಮಧ್ಯಾಹ್ನ ಮಹಾಚಂಡಿಕಾಯಾಗ ಪೂರ್ಣಾಹುತಿಯೊಂದಿಗೆ ಮಹಾ ಅನ್ನಸಂತರ್ಪಣೆ ಪ್ರಾರಂಭಗೊಂಡಿದ್ದು ಸಾವಿರಾರು ಮಂದಿ ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ. ರಾತ್ರಿ ಶೋಭಾಯಾತ್ರೆ ಮುಗಿದ ಬಳಿಕ ಕಾಪು ಬೀಚ್‌ನಲ್ಲಿ ಉಪಾಹಾರದ ವ್ಯವಸ್ಥೆಯಿದೆ. ದಸರಾಕ್ಕೆ ಆಗಮಿಸುವ ಭಕ್ತರಿಗಾಗಿ ಉಚ್ಚಿಲ ಸರಸ್ವತಿ ಮಂದಿರ ಶಾಲಾ ಮೈದಾನ, ಉಚ್ಚಿಲ ಮಹಾಲಕ್ಷ್ಮೀ ಶಾಲೆ ಬಳಿಯ ಬಯಲು ಪ್ರದೇಶ, ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗದ ಪ್ರದೇಶ, ಮೊಗವೀರ ಭವನದ ಸುತ್ತಮುತ್ತಲಿನಲ್ಲಿ, ಎರ್ಮಾಳು ಜನಾರ್ದನ ದೇವಸ್ಥಾನದ ಬಳಿಯೂ ಪಾರ್ಕಿಂಗ್‌ಗೆ ಜಾಗ ಮೀಸಲಿಡಲಾಗಿದೆ.

ಪರ್ಯಾಯ ರಸ್ತೆ ಬಳಸಿ: ರಾ.ಹೆ. 66ರಲ್ಲಿ ಶೋಭಾಯಾತ್ರೆ ಸಾಗುವುದರಿಂದ ಹೆದ್ದಾರಿ ಸಂಚಾರಕ್ಕೆ ತೊಂದರೆಯಾಗದಂತೆ ವಿವಿಧ ವ್ಯವಸ್ಥೆಗಳನ್ನು ಜೋಡಿಸಲಾಗಿದೆ. ಶೋಭಾಯಾತ್ರೆ ಸಂದರ್ಭದ ಸಂಚಾರದ ಒತ್ತಡವನ್ನು ಕಡಿಮೆ ಮಾಡಲು ಮಂಗಳೂರಿನಿಂದ ಉಡುಪಿಗೆ ತೆರಳುವ ವಾಹನ ಸವಾರರು ಪಡುಬಿದ್ರಿ-ಮುದರಂಗಡಿ-ಶಿರ್ವ-ಕಟಪಾಡಿ ರಸ್ತೆ ಹಾಗೂ ಉಡುಪಿಯಿಂದ ಮಂಗಳೂರಿಗೆ ತೆರಳುವ ಸವಾರರು ಕಟಪಾಡಿ-ಶಿರ್ವ-ಮುದರಂಗಡಿ-ಪಡುಬಿದ್ರಿ ರಸ್ತೆಯಲ್ಲಿ ಸಂಚರಿಸುವ ಮೂಲಕ ತಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು ಎನ್ನುವುದು ಪೊಲೀಸ್ ಇಲಾಖೆ ಮತ್ತು ದಸರಾ ಸಮಿತಿ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

2

Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ

Hubli: BK Hariprasad licked the feet of fake Gandhis: Pralhad Joshi

Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು

Life: ಇತರರನ್ನು ಮೆಚ್ಚಿಸುವ ವ್ಯರ್ಥ ಪ್ರಯತ್ನವೇಕೆ?

Life: ಇತರರನ್ನು ಮೆಚ್ಚಿಸುವ ವ್ಯರ್ಥ ಪ್ರಯತ್ನವೇಕೆ?

12-crime

Hagaribommanahalli: ಅನೈತಿಕ ಸಂಬಂಧ: ಯುವಕನ ಬರ್ಬರ ಕೊಲೆ; ಆರೋಪಿ ಪೊಲೀಸರಿಗೆ ಶರಣು

Nature: ಸಮತೋಲಿತ ಅಭಿವೃದ್ಧಿಯೇ ಪ್ರಕೃತಿ ಉಳಿವಿಗೆ ಮುನ್ನುಡಿ

Nature: ಸಮತೋಲಿತ ಅಭಿವೃದ್ಧಿಯೇ ಪ್ರಕೃತಿ ಉಳಿವಿಗೆ ಮುನ್ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ

9-karkala

KBC: ಕೆಬಿಸಿಯಲ್ಲಿ 12.5 ಲ.ರೂ.ಗೆದ್ದ ಕಾರ್ಕಳ ಮೂಲದ ಡಾ| ಶ್ರೀಶ್‌ ಶೆಟ್ಟಿ

18

Kaup: ದಿವ್ಯಾಂಗರ ಸಹಾಯಕ್ಕೆ ಟೀಮ್‌ ಮಾರುತಿ ಕುಣಿತ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

1-aaa

Udupi;ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ʼನಿʼ-ಶತಾಭಿವಂದನಂ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

2

Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ

Hubli: BK Hariprasad licked the feet of fake Gandhis: Pralhad Joshi

Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.