Kapu: 14 ವರ್ಷದ ವನವಾಸ ಮುಗಿಸಿ ಮನೆ ಸೇರಿದ ವಿಮಲ!

ಶಂಕರಪುರ ವಿಶ್ವಾಸದಮನೆ ಅನಾಥಾಶ್ರಮದ ಕಾರ್ಯಕರ್ತರ ಆರೈಕೆಯ ಫಲ

Team Udayavani, Jul 30, 2024, 5:54 PM IST

Screenshot (34)

ಕಾಪು: ಹನ್ನೆರಡು ವರ್ಷಗಳ ಹಿಂದೆ ಯಾರೂ ದಿಕ್ಕಿಲ್ಲದೆ ರಸ್ತೆ ಬದಿ ಅಲೆದಾಡುತ್ತಾ ಅಂತಿಮವಾಗಿ ವಿಶ್ವಾಸದ ಮನೆ ಅನಾಥಾಶ್ರಮಕ್ಕೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆಯ ಮಹಿಳೆ ಕೊನೆಗೂ ಇದೀಗ ಮರಳಿ ಮನೆ
ಸೇರಿದ್ದಾರೆ. ಅವರ 14 ವರ್ಷಗಳ ವನವಾಸಕ್ಕೆ ತೆರೆ ಎಳೆದು ಕುಟುಂಬ ವರ್ಗದೊಂದಿಗೆ ಸೇರಿಸಿ ವಿಶ್ವಾಸದ ಮನೆಯ ಕಾರ್ಯಕರ್ತರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

2012ರ ಅಕ್ಟೋಬರ್‌ನಲ್ಲಿ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ತಿರುಗಾಡುತ್ತಿದ್ದರು. ಆಕೆ ಸ್ನಾನ ಮಾಡದೇ ತಲೆಗೂದಲು ಜಡೆಗಟ್ಟಿದ್ದವು, ಮೈಮೇಲಿದ್ದ ಬಟ್ಟೆಗಳು ದುರ್ನಾತ ಬೀರುತ್ತಿದ್ದವು. ವಿಶ್ವಾಸದ ಮನೆ ಆಶ್ರಮದ ಸಿಬ್ಬಂದಿಗಳು ಆಕೆಯನ್ನು ಕರೆತಂದು ಸ್ನಾನ ಮಾಡಿಸಿ, ಶುಚಿಗೊಳಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದರು. ಆದರೆ ಆಕೆಯ ಭಾಷೆ ಅರ್ಥವಾಗದೇ ಇದ್ದುದರಿಂದ ವಿಳಾಸ ಪತ್ತೆ ಕಷ್ಟವಾಗಿತ್ತು. ಆದರೆ ಆರೈಕೆ ಮುಂದುವರಿದಿತ್ತು.

ಈ ನಡುವೆ ವಿಶ್ವಾಸದ ಮನೆಗೆ ಆಗಮಿಸಿದ ಕೆಎಂಸಿ ಆಸ್ಪತ್ರೆಯ ಮನೋ ರೋಗ ತಜ್ಞ ಡಾ| ಶರ್ಮಾ ಅವರ ಸಹಾಯಕ ಡಾ| ರಿಶಿಕೇಶ್‌ ಅವರು ಮಹಿಳೆಯನ್ನು ವಿಳಾಸವನ್ನು ಕೇಳಿ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದರು. ಆಕೆ ಮಹಾರಾಷ್ಟದ ಸತಾರ ಜಿಲ್ಲೆಯ ಮಸ್ವಾಡ್‌ ಹಳ್ಳಿಯ ನಿವಾಸಿಯೆಂದು ತಿಳಿದು ಬಂದಿತ್ತು. ಪೊಲೀಸರು ತಮ್ಮ ಪರಿಚಯದ ಸಾಗರ್‌ ಪವಾರ್‌ ಎಂಬಾತನ ಮೂಲಕವಾಗಿ ವಿಮಲಾ ಅವರ ಮಗನನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದರು. ತಾಯಿ ಪತ್ತೆಯಾದ ಸುದ್ದಿ ತಿಳಿಯುತ್ತಲೇ ಮಗ ಮತ್ತು ಸಹೋದರಿಯರು ಶಂಕರಪುರದ ವಿಶ್ವಾಸದಮನೆ ಅನಾಥಾಶ್ರಮಕ್ಕೆ ಆಗಮಿಸಿ ಆಕೆಯ ಗುರುತು ಪತ್ತೆ ಮಾಡಿದ್ದಾರೆ.

2010ರಲ್ಲೇ ಮನೆ ಬಿಟ್ಟಿದ್ದರು ವಿಮಲ
ಪತಿ ಮತ್ತು ಮೂರು ಮಕ್ಕಳೊಂದಿಗೆ ವಾಸವಿದ್ದ ವಿಮಲ ಅವರು ಮಾನಸಿಕ ಅಸ್ವಸ್ಥತೆಗೆ ಸಿಲುಕಿ, 2010ರಲ್ಲಿ ರಾತ್ರಿ ಮಲಗಿದಲ್ಲಿಂದ ಎದ್ದು ಹೋಗಿದ್ದರು. ಮನೆಯವರು ಎಲ್ಲ ಕಡೆ ಹುಡುಕಿ, ಸಿಗದೆ ಪೊಲೀಸರಿಗೆ ದೂರು ನೀಡಿದ್ದರು. ಆಗಲೂ ಸಿಗದೇ ಹೋದಾಗ ಮೃತಪಟ್ಟಿರಬೇಕೆಂದು ತಿಳಿದು ಕೊರಗಿದ್ದರು. ಇದೀಗ ವಿಶ್ವಾಸದಮನೆಯಲ್ಲಿ ತಾಯಿ ಪತೆಯಾಗಿದ್ದರಿಂದ ಮಕ್ಕಳು ಮತ್ತು ಸಹೋದರಿಯರು ಸಂಭ್ರಮಿಸಿದ್ದಾರೆ. ವಿಶ್ವಾಸದ ಮನೆಯ ಮುಖ್ಯಸ್ಥ ಪಾಸ್ಟರ್‌ ಸುನಿಲ್‌ ಜಾನ್‌ ಡಿ ಸೋಜ ಅವರಿಗೆ ಕೃತಜ್ಞತೆ ಸಲ್ಲಿಸಿ ತಮ್ಮ ಮನೆಗೆ ಕರೆದೊಯ್ದಿದ್ದಾರೆ.

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.